ಕೊಪ್ಪಳ ಜೂ.17(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ
6ನೇ ತರಗತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ದಾಖಲಿಸಲು
ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾಶ್ರೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಕನೂರು. ಎಸ್.ಎಫ್.ಎಸ್. ಪ್ರೌಢಶಾಲೆ, ಹೊಸಪೇಟೆ
ರಸ್ತೆ, ಕೊಪ್ಪಳ. ಲಾಯಿನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ,
ಕೊಪ್ಪಳ., ಬೇಥಲ್ ಪ್ರೌಢಶಾಲೆ, ವಿರುಪಾಪುರ ನಗರ, ಗಂಗಾವತಿ ಶಾಲೆಗಳಿಗೆ ಪ.ಜಾತಿ ಮತ್ತು ಪ.ವರ್ಗದ
ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ದಾಖಲಿಸಲು ಉದ್ದೇಶಿಸಲಾಗಿದೆ.
ಅರ್ಹತೆಗಳು : ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದರಾಗಿರಬೇಕು.
ತಹಶೀಲ್ದಾರರವರಿಂದ ಪಡೆದ ಜಾತಿ, ಆದಾಯ ಪ್ರಮಾಣ ಪತ್ರದ ಧೃಡೀಕೃತ ನಕಲು ಪ್ರತಿ ಲಗತ್ತಿಸಿ ಸಲ್ಲಿಸಬೇಕು.
ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ.60 ಅಂಕ ಪಡೆದಿರಬೇಕು. ಅರ್ಹ ವಿದ್ಯಾರ್ಥಿಗಳ ಆಯ್ಕೆಯನ್ನು ಲಾಟರಿ
ಮುಖಾಂತರ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ
ಮಾಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಾಲಕಿಯರಿಗೆ ಶೇ.50 ರಷ್ಟು ಮೀಸಲಾತಿ ಇದ್ದು, ಒಟ್ಟು
ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಶೇ.50 ರಷ್ಟು ಗ್ರಾಮೀಣ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುವುದು.
ಇದರಲ್ಲಿ ವಸತಿ ಸೌಲಭ್ಯ ಇರುವುದಿಲ್ಲ. ಪರಿಶಿಷ್ಟ ಜಾತಿ-40 ಹಾಗೂ ಪರಿಶಿಷ್ಟ ವರ್ಗದ-15 ವಿದ್ಯಾರ್ಥಿಗಳನ್ನು
ಆಯ್ಕೆ ಮಾಡಲು ಕೊಪ್ಪಳ ಜಿಲ್ಲೆಗೆ ಗುರಿ ನಿಗದಿಪಡಿಸಲಾಗಿದೆ.
ಅರ್ಜಿ
ಸಲ್ಲಿಸಲು ಜೂ.28 ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆಗಳನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಿಂದ
ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಆಯಾ ತಾಲೂಕಿನ
ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.








