Thursday, 26 September 2019

ಮತದಾರರ ಪಟ್ಟಿ ಪರಿಷ್ಕರಣೆ, ಪರಿಶೀಲನಾ ಕಾರ್ಯಕ್ರಮ


ಮತದಾರರ ಪಟ್ಟಿ ಪರಿಷ್ಕರಣೆ, ಪರಿಶೀಲನಾ ಕಾರ್ಯಕ್ರಮ (ಇ.ವಿ.ಪಿ)

ರಾಜಕೀಯ ಪಕ್ಷಗಳು, ಮತಗಟ್ಟೆಗಳಿಗೆ ಎಜೆಂಟ್‌ಗಳನ್ನು ನೇಮಿಸಿ : ಪಿ.ಸುನೀಲ್ ಕುಮಾರ್

ಕೊಪ್ಪಳ ಸೆ. ೨೪ (ಕರ್ನಾಟಕ ವಾರ್ತೆ): ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾರರ ಪರಿಶೀಲನಾ ಕಾರ್ಯಕ್ರಮ (ಇ.ವಿ.ಪಿ)ದ ಅಂಗವಾಗಿ ರಾಜಕೀಯ ರಾಜಕೀಯ ಪಕ್ಷಗಳು ಕೂಡಲೇ ಎಲ್ಲಾ ಮತಗಟ್ಟೆಗಳಿಗೆ ಬೂತ್ ಲೆವಲ್ ಎಜೆಂಟ್‌ಗಳನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಹೇಳಿದರು. 
ಅವರು ತಮ್ಮ ಕಚೇರಿಯಲ್ಲಿ ಇತ್ತಿÃಚೆಗೆ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾರರ ಪರಿಶೀಲನಾ ಕಾರ್ಯಕ್ರಮ (ಇ.ವಿ.ಪಿ) ಕುರಿತು ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  
ಮತದಾರರ ಪಟ್ಟಿ ಪರಿಷ್ಕರಣೆ-೨೦೨೦ರ ಅಂಗವಾಗಿ ಸೆಪ್ಟೆಂಬರ್. ೦೧ ರಿಂದ ಅಕ್ಟೊÃಬರ್. ೧೫ ರವರೆಗೆ ಇ.ವಿ.ಪಿ ಕಾರ್ಯಕ್ರಮ, ಸೆಪ್ಟೆಂಬರ್. ೦೧ ರಿಂದ ೩೦ ರವರೆಗೆ ಬಿ.ಎಲ್.ಒ ಗಳಿಂದ ಮನೆ-ಮನೆಗೆ ಭೇಟಿ ಮೂಲಕ ಪರಿಶೀಲನೆ, ಅಕ್ಟೊÃಬರ್. ೧೫ ಇಂಟಿಗ್ರೇಟೆಡ್ ಡ್ರಾಫ್ಟ್ ಎಲೆಕ್ಟರಲ್ ರೋಲ್‌ನ ಪ್ರಕಟಣೆ, ಅಕ್ಟೊÃಬರ್. ೧೫ ರಿಂದ ನವೆಂಬರ್. ೩೦ ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಕ್ಲೆöÊಮ್ ಮಾಡುವ ಅವಧಿ, ನವೆಂಬರ್. ೦೨, ೦೩, ೦೯, ೧೦ ರಂದು ವಿಶೇಷ ಪ್ರಚಾರ,  ಡಿಸೆಂಬರ್. ೧೫ ರಂದು ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ, ೨೦೨೦ರ ಜನವರಿ. ೦೧ ರಿಂದ ೧೫ ರವರೆಗೆ ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ಕಾರ್ಯಕ್ರಮ ನಡೆಯಲಿದೆ.  
ಮತದಾರರ ಪರಿಶೀಲನಾ ಕಾರ್ಯಕ್ರಮ (ಇ.ವಿ.ಪಿ); 
  ಭಾರತ ಚುನಾವಣಾ ಆಯೋಗವು ಎಲ್ಲಾ ಮತದಾರರಿಗೆ ಮತದಾರರ ಪಟ್ಟಿಯಲ್ಲಿಯ ವಿವರಗಳನ್ನು ಪರಿಶೀಲಿಸಿ, ತಿದ್ದುಪಡಿಗಳಿದ್ದಲ್ಲಿ ಸರಿಪಡಿಸಿಕೊಳ್ಳಲು ಅವಕಾಶವನ್ನು ನೀಡಿದ್ದು, ಸೆಪ್ಟೆಂಬರ್. ೦೧ ರಿಂದ ಅಕ್ಟೊÃಬರ್. ೧೫ ರವರೆಗೆ ಅವಧಿಯನ್ನು ನಿಗದಿಪಡಿಸಿರುತ್ತದೆ.  ಈ ಕಾರ್ಯಕ್ರಮದಡಿಯಲ್ಲಿ ಪ್ರತಿ ಮತದಾರರು ತಮ್ಮ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ಮುದ್ರಿತವಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.  ಆದ್ದರಿಂದ ಜಿಲ್ಲೆಯ ಮತದಾರರು ಎನ್.ವಿ.ಎಸ್.ಪಿ ತಿತಿತಿ.ಟಿvsಠಿ.iಟಿ ವೋಟರ್ ಹೆಲ್ಪಲೈನ್ ಮೋಬೈಲ್ ಆ್ಯಪ್, ಕಾಮನ್ ಸರ್ವಿಸ್ ಸೆಂಟರ್, ಅಟಲ್‌ಜೀ ಜನಸ್ನೆÃಹಿ ಕೇಂದ್ರ, ಜಿಲ್ಲಾಡಳಿತ ಭವನದಲ್ಲಿರುವ ೧೯೫೦೦-ಸಂಪರ್ಕ ಕೇಂದ್ರ, ಸಹಾಯಕ ಆಯುಕ್ತ ಕಾರ್ಯಾಲಯ, ತಹಶೀಲ್ದಾರ ಕಾರ್ಯಾಲಯದ ವೋಟರ್ ಫ್ಯಾಶಿಲೇಷನ್ ಸೆಂಟರ್, ಈ ಕೇಂದ್ರಗಳಲ್ಲಿ ಅಥವಾ ಜಾಲತಾಣಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು ಮತ್ತು ಯಾವುದಾದರೂ ಸೇರ್ಪಡೆ, ತಿದ್ದುಪಡಿಗಳಿದ್ದಲ್ಲಿಯೂ ಕೂಡ ನಿಗದಿತ ಅರ್ಜಿ ಸಲ್ಲಿಸಬಹುದಾಗಿರುತ್ತದೆ.   
ರಾಜಕೀಯ ಪಕ್ಷಗಳು ಕೂಡಲೇ ಎಲ್ಲಾ ಮತಗಟ್ಟೆಗಳಿಗೆ ಬೂತ್ ಲೆವಲ್ ಲೆವಲ್ ಎಜೆಂಟ್‌ಗಳನ್ನು ನೇಮಿಸುವುದು ಹಾಗೂ ಈ ಎಜೆಂಟ್‌ಗಳು ನಿಗದಿಪಡಿಸಿದ ಮತಗಟ್ಟೆ ವ್ಯಾಪ್ತಿಯಲ್ಲಿಯ ಎಲ್ಲಾ ಮತದಾರರು ಇ.ವಿ.ಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು ಹಾಗೂ ಯಾವುದೇ ತಿದ್ದುಪಡಿಗಳಿದ್ದಲ್ಲಿ ಮಾಡಿಸಿಕೊಳ್ಳಲು ಜಾಗೃತಿ ಮೂಡಿಸುವುದು ಮತ್ತು ಬೂತ್ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಪರಿಶೀಲನೆ ಮತ್ತು ತಿದ್ದುಪಡಿಗಳನ್ನು ಮಾಡಿಸಲು ಸಹಕರಿಸಬೇಕು.  
ಮತದಾರರ ವಿವರ;
  ಕೊಪ್ಪಳ ಜಿಲ್ಲೆಯ ೬೦-ಕುಷ್ಟಗಿ ವಿಧನಸಭಾ ಕ್ಷೆÃತ್ರದಲ್ಲಿ ೨೭೨ ಮತಗಟ್ಟೆಗಳು ಹಾಗೂ ೨೨೮೨೬೯ ಮತದಾರರಿದ್ದಾರೆ.  ೬೧-ಕನಕಗಿರಿ ವಿಧನಸಭಾ ಕ್ಷೆÃತ್ರದಲ್ಲಿ ೨೬೧ ಮತಗಟ್ಟೆಗಳು ಹಾಗೂ ೨೧೪೮೩೦ ಮತದಾರರು, ೬೨-ಗಂಗಾವತಿ ವಿಧನಸಭಾ ಕ್ಷೆÃತ್ರದಲ್ಲಿ ೨೩೩ ಮತಗಟ್ಟೆಗಳು ಹಾಗೂ ೧೯೬೪೯೦ ಮತದಾರರು, ೬೩-ಯಲಬುರ್ಗಾ ವಿಧನಸಭಾ ಕ್ಷೆÃತ್ರದಲ್ಲಿ ೨೫೩ ಮತಗಟ್ಟೆಗಳು ಹಾಗೂ ೨೧೦೩೪೯ ಮತದಾರರು, ೬೪-ಕೊಪ್ಪಳ ವಿಧನಸಭಾ ಕ್ಷೆÃತ್ರದಲ್ಲಿ ೨೮೮ ಮತಗಟ್ಟೆಗಳು ಹಾಗೂ ೨೪೦೨೫೮ ಮತದಾರರು, ಜಿಲ್ಲೆಯ ಐದು ವಿಧಾನಸಭೆಗಳು ಸೇರಿ ಒಟ್ಟು ಮತಗಟ್ಟೆಗಳು ೧೩೦೭ ಹಾಗೂ  ೧೦೯೦೧೯೬ ಮತದಾರರಿದ್ದಾರೆ. 
೨೦೨೦ರ ಜನವರಿ. ೦೧ಕ್ಕೆ ೧೮ ವರ್ಷ ವಯಸ್ಸು ಪೂರ್ಣಗೊಳ್ಳುವ ಮತದಾರರನ್ನು ಸೇರ್ಪಡೆ ಮಾಡಲು ಬೂತ್ ಮಟ್ಟದ ಏಜೆಂಟರ ಮುಖಾಂತರ ಕ್ರಮ ಕೈಗೊಳ್ಳುವುದು ಹಾಗೂ ಅದೇ ರೀತಿ ಯಾವುದೇ ಅನರ್ಹ ಮತದಾರರು/ ಖಾಯಂ ಸ್ಥಳಾಂತರಗೊಂಡ/ ಮರಣ ಹೊಂದಿದ ಮತದಾರರ ವಿವರಗಳನ್ನು ನೀಡಿದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದರು.  
೧೯೫೦ ಜಿಲ್ಲಾ ಸಂಪರ್ಕ ಕೇಂದ್ರ (ಡಿಸಿಸಿ); 
  ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಟೋಲ್-ಫ್ರಿÃ ಸಂಖ್ಯೆ ೧೯೫೦ರೊಂದಿಗೆ ಜಿಲ್ಲಾ ಸಂಪರ್ಕ ಕೇಂದ್ರವು ಕಾರ್ಯನಿರ್ವಹಿಸುತ್ತಲಿದ್ದು, ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೦೬ ಗಂಟೆಯವರೆಗೆ ಸಾರ್ವಜನಿಕರಿಗೆ ಚುನಾವಣಾ ಸಂಬಂಧಿತ ಮಾಹಿತಿಯನ್ನು ಒದಗಿಸಲಾಗುವುದು.  ಈ ಕೇಂದ್ರವೂ ಕೂಡ ವೋಟರ್ ಫೆಸಿಲಿಟಿಟೇಷನ್ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದು, ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು ಹಾಗೂ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಬಹುದು.  
ಬೂತ್ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ;  
  ಮತಗಟ್ಟೆ ಅಧಿಕಾರಿಗಳು ಸೆಪ್ಟೆಂಬರ್. ೩೦ ರವರೆಗೆ ಮನೆ-ಮನೆಗೆ ಭೇಟಿ ನೀಡಲಿದ್ದು, ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು, ತಿದ್ದುಪಡಿ ಮತ್ತು ನೊಂದಾಯಿತರಾಗದ ಅರ್ಹ ಮತದಾರರ ಸೇರ್ಪಡೆಗಾಗಿಯೂ ಅವಕಾಶವಿರುತ್ತದೆ. ಬೂತ್ ಮಟ್ಟದ ಅಧಿಕಾರಿಗಳಿಗಾಗಿ ಈ ಬಾರಿ ಭಾರತ ಚುನಾವಣಾ ಆಯೋಗವು ಬಿ.ಎಲ್.ಒ ಆ್ಯಪ್ (ಃಐಔ ಂಠಿಠಿ) ಸಿದ್ಧಪಡಿಸಿದ್ದು, ಸ್ಥಳದಲ್ಲೆÃ ಅರ್ಜಿದಾರರ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸ್ವಿÃಕರಿಸಲಾಗುವುದು ಮತ್ತು ಮನೆಯ ಜಿ.ಐ.ಎಸ್ ಕೋ-ಆರ್ಡಿನೇಟ್ ಪಡೆದು ಮ್ಯಾಪ್ ಮಾಡಲಾಗುವುದು ಮತ್ತು ಒಂದೇ ಕುಟುಂಬದ ಎಲ್ಲಾ ಮತದಾರರನ್ನು ಒಟ್ಟುಗೂಡಿಸಲಾಗುವುದು.  ಈ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಲು ಬೂತ್ ಮಟ್ಟದ ಏಜೆಂಟರ ಹಾಗೂ ರಾಜಕೀಯ ಪಕ್ಷಗಳ ಸಹಕಾರ ಅತ್ಯವಶ್ಯಕವಾಗಿದೆ.  
ಕರಡು ಮತದಾರರ ಪಟ್ಟಿ ಪ್ರಕಟಣೆ: 
  ಅಕ್ಟೊÃಬರ್. ೧೫ ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು ಮತ್ತು ಅಕ್ಟೊÃಬರ್. ೧೫ ರಿಂದ ನವೆಂಬರ್. ೩೦ ರವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಅಕ್ಷೆÃಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.  ಈ ಅವಧಿಯಲ್ಲಿಯೂ ಕೂಡ ಮತದಾರರು ಅರ್ಹ ಮತದಾರರ ಸೇರ್ಪಡೆಗಾಗಿ (ನಮೂನೆ-೬), ಅನರ್ಹ/ ಖಾಯಂ ಸ್ಥಾಳಾಂತರಗೊಂಡ/ ಮರಣ ಹೊಂದಿದ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು (ನಮೂನೆ-೭) ತಿದ್ದುಪಡಿಗಾಗಿ (ನಮೂನೆ-೮), ಮತ್ತು ವಿ.ಸ.ಕ್ಷೆÃತ್ರ ವ್ಯಾಪ್ತಿಯಲ್ಲಿ ಸ್ಥಳಾಂತರಕ್ಕಾಗಿ ಅರ್ಜಿಯನ್ನು ಬೂತ್‌ಮಟ್ಟದ ಅಧಿಕಾರಿಗಳಿಗೆ ಅಥವಾ ಆನ್‌ಲೈನ್, ವೋಟರ್ ಫೆಸಿಲಿಟೇಶನ್ ಸೆಂರ‍್ಸ್, ಸಾಮಾನ್ಯ ಸೇವಾ ಕೇಂದ್ರಗಳ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದು.  
ವಿಶೇಷ ಅಭಿಯಾನ;
  ನವೆಂಬರ್. ೦೨ & ೦೩ ಹಾಗೂ ೦೯ & ೧೦, ಈ ದಿನಗಳಂದು ವಿಶೇಷ ಅಭಿಯಾನವನ್ನು ಆಯೋಜಿಸಲಿದ್ದು, ಈ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ನಿಗದಿತ ಬೂತ್‌ಗಳಲ್ಲಿ ಹಾಜರಿರುತ್ತಾರೆ.  ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಯುವ ಮತದಾರರು ನೊಂದಾಯಿತರಾಗುವಂತೆ ಬೂತ್ ಮಟ್ಟದ ಏಜೆಂಟರ ಮೂಲಕ ಉತ್ತೆÃಜಿಸುವಂತೆ ಹಾಗೂ ಜಾಗೃತಿ ಮೂಡಿಸಲು ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದರು.  
ಅಂತಿಮ ಮತದಾರರ ಪಟ್ಟಿ ಪ್ರಕಟಣೆ;
  ಮೇಲಿನ ಎಲ್ಲಾ ಕಾರ್ಯಗಳ ನಂತರ ೨೦೨೦ರ ಜನವರಿ. ೦೧ ರಿಂದ ೧೫ರ ಅವಧಿಯಲ್ಲಿ ಭಾರತ ಚುನಾವಣಾ ಆಯೋಗವು ನಿಗದಿಪಡಿಸುವ ಒಂದು ದಿನ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ, ಸಾರ್ವಜನಿಕರ ಮಾಹಿತಿಗಾಗಿ ಎಲ್ಲಾ ಬೂತ್‌ಗಳಲ್ಲಿ, ತಹಶೀಲ್ದಾರ ಕಛೇರಿಗಳಲ್ಲಿ, ಸಹಾಯಕ ಆಯುಕ್ತರ ಕಛೇರಿಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಚುರಪಡಿಸಲಾಗುವುದು ಹಾಗೂ ರಾಜಕೀಯ ಪಕ್ಷಗಳಿಗೂ ಅದರ ಒಂದು ಪ್ರತಿಯನ್ನು ನೀಡಲಾಗುವುದು.  ಇದರೊಂದಿಗೆ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೆÃತ್ರಗಳಲ್ಲಿ ಯಾವುದಾದರೂ ಮತಗಟ್ಟೆಗಳನ್ನು ಬದಲಾವಣೆ ಮಾಡಬೇಕಿದ್ದಲ್ಲಿ ಸಕಾರಣಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಲಾಯಿತು.  
ಅಂತಿಮವಾಗಿ ರಾಜಕೀಯ ಪಕ್ಷಗಳು ಭಾರತ ಚುನಾವಣಾ ಆಯೋಗವು ಉದ್ದೆÃಶಿತ ಮತದಾರರ ಪರಿಶೀಲನಾ ಕಾರ್ಯ ಹಾಗೂ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ಮತದಾರರ ಪಟ್ಟಿಯನ್ನು ಶುದ್ಧ ಹಾಗೂ ದೋಷರಹಿತವಾಗಿ ತಯಾರಿಸುವಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಧಿಖಾರಿ ಪಿ.ಸುನೀಲ್ ಕುಮಾರ್ ಕೋರಿದರು.  
ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜ್ಗಿ ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿದಿಗಳು ಉಪಸ್ಥಿತರಿದ್ದರು.  

======

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ 

ಕೊಪ್ಪಳ ಸೆ. ೨೪ (ಕರ್ನಾಟಕ ವಾರ್ತೆ): ಗಂಗಾವತಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ  ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪ್ರಸಕ್ತ ಸಾಲಿನ ಪಶುಭಾಗ್ಯ ಯೋಜನೆ ಅಡಿ " ಕರು ಸಾಕಾಣಿಕೆ " ಯೋಜನೆ ಫಲಾನುಭವಿಗಳಿಗೆ ಪಶು ಆಹಾರ,  ಜಂತುನಾಶಕ ಮತ್ತು ಬಲವರ್ಧಕ ಔಷಧಿಗಳ ವಿತರಣೆ ಕಾರ್ಯಕ್ರಮವನ್ನು ಗಂಗಾವತಿಯಲ್ಲಿ ಆಯೋಜಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷ ಹೆಚ್ ವಿಶ್ವನಾಥರೆಡ್ಡಿ ಯವರು ಉದ್ಘಾಟಿಸಿದರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿ.ಪಂ ಸದಸ್ಯ ಅಮರೇಶ್ ಗೋನಾಳ್ ರವರು ಗಂಗಾವತಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

ಗಾಂಧಿಜಯಂತಿ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ

ಗಾಂಧಿಜಯಂತಿ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ

ಕೊಪ್ಪಳ ಸೆ. ೨೪ (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ  ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಗಾಂಧಿಜಯಂತಿ ದಿನಾಚರಣೆ-೨೦೧೯ ರ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪಧÉðಗಳಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ೫ ರಿಂದ ೧೬ ವರ್ಷದ ಒಳಗಿನ ಆಸಕ್ತಿಯುಳ್ಳ ಸರಕಾರಿ ಶಾಲೆ, ಸೌಲಭ್ಯ ವಂಚಿತ, ಗ್ರಾಮೀಣ ಮಕ್ಕಳು ಭಾಗವಹಿಸಬಹುದಾಗಿದೆÉ. ಚಿತ್ರಕಲೆ ಹಾಗೂ ಪ್ರಬಂಧ  ಸ್ಪರ್ಧೇಯನ್ನು ಎರ್ಪಡಿಸಲಾಗಿದ್ದು, ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಗುತ್ತದೆ. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ನೀಡಲಾಗುವುದು, ತೀರ್ಪುಗಾರರ ಆಯ್ಕೆಯೇ ಅಂತಿಮವಾಗಿರುತ್ತದೆ. ಸರಕಾರಿ ಶಾಲೆ, ಸೌಲಭ್ಯ ವಂಚಿತ, ಗ್ರಾಮೀಣ  ಮಕ್ಕಳಿಗೆ ಹೆಚ್ಚಿನ ಆದ್ಯೆತೆ ನೀಡಲಾಗುತ್ತದೆ. ಭಾಗವಹಿಸುವ ಮಕ್ಕಳಿಗೆ ಹಾಗೂ ಸಿಬ್ಬಂದಿಗಳಿಗೆ ಯಾವುದೇ ರೀತಿ ದಿನ ಭತ್ಯೆ ಹಾಗೂ ಪ್ರಯಾಣ ಭತ್ಯೆ ಇರುವುದಿಲ್ಲ. ಆದರೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ--- ಆಸಕ್ತ ಮಕ್ಕಳು ಅಕ್ಟೊÃಬರ್ ೦೪ ರೊಳಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳದಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕು.
ಕಾರ್ಯಕ್ರಮದ ನಿಯಮಗಳು ;
  ಚಿತ್ರಕಲೆ ಸ್ಪರ್ಧೇಯು ೩ ಗುಂಪುಗಳನ್ನು ಒಳಗೊಂಡಿದ್ದು, ಮೊದಲನೇ ಗುಂಪು ೫ ರಿಂದ ೮ ವರ್ಷ, ಎರಡನೆ ಗುಂಪು ೯ ರಿಂದ ೧೨ ವರ್ಷ, ಗುಂಪು ೧೩ ರಿಂದ ೧೬ ವರ್ಷ ಹಾಗೂ  ಪ್ರಬಂಧ ಸ್ಪರ್ಧೇಯು ೨ ವಿಭಾಗಗಳನ್ನು ಒಳಗೊಂಡಿದ್ದು ಗುಂಪು ೧೦ ರಿಂದ ೧೨ ವರ್ಷ, ಗುಂಪು ೧೩ ರಿಂದ ೧೬ ವಯೋಮಿತಿಯ ಆಧಾರದ ಮೇಲೆ ಸ್ಪರ್ಧೇ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರು ಇವರನ್ನು ಹಾಗೂ  ದೂ.ಸಂ: ೦೮೫೩೯ -೨೨೨೭೦೩,  ಮೋ: ೯೬೮೬೦೮೦೪೫೬,೯೯೭೨೯೪೪೪೬೭ ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸೆ. ೨೬ ರಂದು ಆಯುಷ್‌ಮಾನ್ ಭಾರತ್ ಆರೋಗ್ಯ ಕರ್ನಾಟಕ ಪಾಕ್ಷಿÃಕ ಕಾರ್ಯಕ್ರಮ

ಸೆ. ೨೬ ರಂದು ಆಯುಷ್‌ಮಾನ್ ಭಾರತ್ ಆರೋಗ್ಯ ಕರ್ನಾಟಕ ಪಾಕ್ಷಿÃಕ ಕಾರ್ಯಕ್ರಮ

ಕೊಪ್ಪಳ ಸೆ. ೨೪ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಆಯುಷ್‌ಮಾನ್ ಭಾರತ್ ಆರೋಗ್ಯ ಕರ್ನಾಟಕ ಪಾಕ್ಷಿÃಕ ಕಾರ್ಯಕ್ರಮವನ್ನು ಸೆ. ೨೬ ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾ ಆಸ್ಪತ್ರೆ ಒಳಾಂಗಣ (ಹಳೇ ನಿರ್ದೇಶಕರ ಕಛೇರಿ ಹತ್ತಿರ) ಆಯೋಜಿಸಲಾಗಿದೆ.  
ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳು, ಸಾರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರಿÃರಾಮುಲು ಘನ ಉಪಸ್ಥಿತರಿರುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರ, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಂಡೂರು ಹನುಮಂತಗೌಡ ಪಾಟೀಲ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಭಾಗವಹಿಸುವರು.  ಕಾರ್ಯಕ್ರಮದ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜು ಮುಂಬಾಗದ ಹಳೇ ಪಬ್ಲಿಕ್ ಗ್ರೌಂಡ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.  

ಸೆ. ೨೫ ರಂದು ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮ

ಸೆ. ೨೫ ರಂದು  ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮ 

ಕೊಪ್ಪಳ ಸೆ. ೨೪ (ಕರ್ನಾಟಕ ವಾರ್ತೆ): ಸೆ. ೨೫ ಬುಧುವಾರದಂದು ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮವನ್ನು ಕೊಪ್ಪಳ ನಗರದ ಸರ್ಕಾರಿ  ಬಾಲಕಿಯರ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಕೊಪ್ಪಳ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಬಾಲಕಿಯರ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸೆ. ೨೫ ಬುಧುವಾರದಂದು ಕೊಪ್ಪಳ ನಗರದ ಸರ್ಕಾರಿ  ಬಾಲಕಿಯರ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮ ವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮಕ್ಕೆ ಭಾಗವಹಿಸಿ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿÃಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

ಮೆಟ್ರಿÃಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

ಕೊಪ್ಪಳ ಸೆ. ೨೬ (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೆಟ್ರಿÃಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ೧ನೇ ತರಗತಿಯಿಂದ ೮ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬ ಆದಾಯ ಮಿತಿ ರೂ. ೬ ಲಕ್ಷ ಹಾಗೂ ೯ನೇ ತರಗತಿಯಿಂದ ೧೦ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬ ಆದಾಯ ಮಿತಿ ವಾರ್ಷಿಕ ರೂ. ೨.೫೦ ಲಕ್ಷ ಮಿತಿಯಲ್ಲಿರಬೇಕು.  ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ hಣಣಠಿ://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ತಿತಿತಿ.sತಿ.ಞಚಿಡಿ.iಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗೆದೆ.
ಅರ್ಜಿ ಸಲ್ಲಿಸಲು ಅಕ್ಟೊÃಬರ್. ೩೧ ಕೊನೆಯ ದಿನವಾಗಿದ್ದು, ವಿದ್ಯಾರ್ಥಿಯ ಎಸ್.ಎ.ಟಿಎಸ್-ಐಡಿ, ಆಧಾರ್ ಕಾರ್ಡ್, ಇ.ಐ.ಡಿ ಸಂಖ್ಯೆ ಹಾಗೂ ಆಧಾರ್, ಇ.ಐ.ಡಿ ಯಲ್ಲಿ ನಮೂದಿಸಿರುವಂತೆ ಹೆಸರು, ವಿದ್ಯಾರ್ಥಿಯ ಆಧಾರ್ ಇಲ್ಲದಿದ್ದಲ್ಲಿ ವಿದ್ಯಾರ್ಥಿ ಹೆಸರಿನಲ್ಲಿರುವ ಬ್ಯಾಂಕ್ ಖಾತೆಯ ವಿವರಗಳು (ಬ್ಯಾಂಕ್ ಹೆಸರು, ಬ್ಯಾಂಕ್ ವಿಳಾಸ, ಐ.ಎಫ್.ಎಸ್.ಸಿ ಕೋಡ್, ಖಾತೆ ಸಂಖ್ಯೆ), ವಿದ್ಯಾರ್ಥಿ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಆರ್.ಡಿ. ಸಂಖ್ಯೆಗಳು, ವಸತಿ ನಿಲಯಾರ್ಥಿಯಾಗಿದ್ದಲ್ಲಿ ವಸತಿ ನಿಲಯ ನಿರ್ವಹಣೆ ತಂತ್ರಾಂಶದ ನೊಂದಣಿ ಸಂಖ್ಯೆ (ಎಚ್.ಐ.ಎಮ್.ಎಸ್) ಅರ್ಜಿಯೊಂದಿಗೆ ದಾಖಲಾತಿನ್ನೂ ಸಲ್ಲಿಸಬೇಕು. 
ಹೆಚ್ಚಿನ ಮಾಹಿತಿಗಾಗಿ ಸಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅ. ೦೧ ರಂದು ಜಿಲ್ಲಾ ವಿಕಲಚೇತನರ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಅ. ೦೧ ರಂದು ಜಿಲ್ಲಾ ವಿಕಲಚೇತನರ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಕೊಪ್ಪಳ ಸೆ. ೨೬ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಿರಿಯ ನಾಗರಿಕ ಕ್ಷೆÃತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ "ವಿಶ್ವ ಹಿರಿಯ ನಾಗರಿಕರ ದಿನಾಚರಣೆ" ಕಾರ್ಯಕ್ರಮವನ್ನು ಅಕ್ಟೊÃಬರ್. ೦೧ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರು ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಅವರು  ಪಾಲ್ಗೊಳ್ಳುವರು. 
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಭಾಗವಹಿಸುವರು.  ಹಿರಿಯ ನ್ಯಾಯವಾಧಿ ವ್ಹಿ.ಎಮ್. ಭೂಸನೂರಮಠ ಹಾಗೂ ಹಿರಿಯ ವೈದ್ಯರಾದ ಡಾ.ಕೆ.ಜಿ. ಕುಲಕರ್ಣಿ ಅವರು ಕಾರ್ಯಕ್ರಮದ ಕುರಿತು ವಿಶೇಷ ಉಪನ್ಯಾಸವನ್ನು ನೀಡುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
======

ಸೆ. ೨೭ ರಂದು ಆನೆಗುಂದಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ

ಸೆ. ೨೭ ರಂದು ಆನೆಗುಂದಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ

ಕೊಪ್ಪಳ ಸೆ. ೨೬ (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆ, ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ``ವಿಶ್ವ ಪ್ರವಾಸೋದ್ಯಮ ದಿನಾಚರಣೆ'' ಕಾರ್ಯಕ್ರಮವನ್ನು ಸೆ. ೨೭ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸಿ.ಡಿ ರವಿ ಅವರು ಘನ ಉಪಸ್ಥಿತರಿರುವರು.  ಗಂಗಾವತಿ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ಗಂಗಾವತಿ ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನಗೌಡ ಪೊಲೀಸ್‌ಪಾಟೀಲ, ಆನೆಗುಂದಿ ಗ್ರಾ.ಪಂ. ಅಧ್ಯಕ್ಷೆ ಅಂಜನಾದೇವಿ ಪಾಲ್ಗೊಳ್ಳುವರು.  

`ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ'' ಸದುಪಯೋಗ ಪಡೆದುಕೊಳ್ಳಿ : ಕೆ. ರಾಘವೇಂದ್ರ ಹಿಟ್ನಾಳ

ಕೊಪ್ಪಳ ಸೆ. ೨೬ (ಕರ್ನಾಟಕ ವಾರ್ತೆ): ``ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ'' ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಕರೆ ನೀಡಿದರು.  
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆ ಒಳಾಂಗಣ (ಹಳೇ ನಿರ್ದೇಶಕರ ಕಛೇರಿ ಹತ್ತಿರ) ದಲ್ಲಿ ಗುರುವಾರದಂದು (ಸೆ.೨೬) ಆಯೋಜಿಸಲಾಗಿದ್ದ ``ಆಯುಷ್‌ಮಾನ್ ಭಾರತ್ ಆರೋಗ್ಯ ಕರ್ನಾಟಕ'' ಪಾಕ್ಷಿÃಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಸಂಯೋಜಿತ ಯೋಜನೆಯಾಗಿದ್ದು, ೨೦೧೮ರ ಅಕ್ಟೊÃಬರ್. ೩೦ ರಿಂದ ಜಾರಿಯಲ್ಲಿರುತ್ತದೆ.  ಈ ಯೋಜನೆಯಡಿ ಫಲಾನುಭವಿಗಳನ್ನು ಅರ್ಹತಾ ರೋಗಿ (ಬಿಪಿಎಲ್) ಮತ್ತು ಸಾಮಾನ್ಯ ರೋಗಿ (ಎಪಿಎಲ್) ಎಂದು ವಿಂಗಡಿಸಲಾಗಿದೆ.  ಬಿಪಿಎಲ್ ಕುಟುಂಬದವರಿಗೆ ಒಂದು ವರ್ಷಕ್ಕೆ ರೂ. ೫ ಲಕ್ಷವರೆಗಿನ ಚಿಕಿತ್ಸೆ ಒದಗಿಸಲಾಗುವುದು.  ಎಪಿಎಲ್ ಕುಟುಂಬದವರಿಗೆ ಪ್ಯಾಕೇಜ್ ದರದ ಶೇ.೩೦%ರಷ್ಟು ವಿನಾಯಿತಿ ಇದ್ದು, ಸಹಪಾವತಿ ಆಧಾರದ ಮೇಲೆ ವಾರ್ಷಿಕ ಮಿತಿ ರೂ. ೧.೫೦ ಲಕ್ಷ ಇರುತ್ತದೆ.  ಈ ಸಂಯೋಜಿತ ಯೋಜನೆಯಲ್ಲಿ ೧೬೫೦ ಚಿಕಿತ್ಸಾ ವಿಧಾನಗಳು ಒಳಗೊಂಡಿರುತ್ತದೆ.  ಸರಳ ದ್ವಿತೀಯ ಹಂತದ ೨೯೧ ಹಾಗೂ ೩೬ ಸರಳ ಸಾಮಾನ್ಯ ದ್ವಿತೀಯ ಹಂತದ ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ನೀಡಲಾಗುತ್ತದೆ.  ಕ್ಲಿಷ್ಟಕರ ದ್ವಿತೀಯ ಹಂತದ ೨೫೪ ಚಿಕಿತ್ಸಾ ವಿಧಾನಗಳು, ತೃತೀಯ ಹಂತದ ೯೦೦ ಚಿಕಿತ್ಸೆ ವಿಧಾನಗಳು, ೧೬೯ ತುರ್ತು ಚಿಕಿತ್ಸಾ ವಿಧಾನಗಳು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತದೆ.  ಸರ್ಕಾರಿ ಆಸ್ಪತ್ರೆಯಲ್ಲಿ ಕ್ಲಿಷ್ಟಕರ ದ್ವಿತೀಯ ಹಂತದ ಮತ್ತು ತೃತೀಯ ಹಂತದ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಉನ್ನತ ದರ್ಜೆಯ ಸರಕಾರಿ ಆಸ್ಪತ್ರೆಗಳಿಗೆ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾಗುತ್ತದೆ.  ರಸ್ತೆ ಅಪಘಾತ ಸೇರಿದಂತೆ ಇನ್ನಿತರ ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೇ ನೋಂದಾಯಿತ ಆಸ್ಪತ್ರೆಗಳಿಗೆ ನೇರವಾಗಿ ಹೋಗಿ ಚಿಕಿತ್ಸೆ ಪಡೆಯಬಹುದು.  ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ೬೧ ಸರಕಾರಿ ಆಸ್ಪತ್ರೆಗಳು ಈ ಯೋಜನೆಯಡಿ ನೋಂದಾಯಿತವಾಗಿವೆ.  ಈ ಯೋಜನೆಯಡಿ ಎ.ಬಿ-ಎ.ಆರ್.ಕೆ ಹೆಲ್ತ್ ಕಾರ್ಡ್ಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ. ೧೦/- ಶುಲ್ಕ ನೀಡಿ ಪಡೆಯಬಹುದು ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ರೂ.೩೫/- ಶುಲ್ಕ ನೀಡಿ ಪಡೆಯಬಹುದು.  ಹೆಲ್ತ್ ಕಾರ್ಡ್ ಇಲ್ಲದಿದ್ದರೂ ಸಹ ಪಡಿತರ ಚೀಟಿ, ಆಧಾರ್ ಕಾರ್ಡ್ನ್ನು ಹಾಜರುಪಡಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬಹುದು.  ಸಾರ್ವಜನಿಕರ ಸರ್ಕಾರದ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. 
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಪ್ಪಳ ಕಿಮ್ಸ್ ನಿರ್ದೇಶಕ ದತ್ತಾತ್ರೆÃಯ ಡಿ. ಭಂಟ ಅವರು ಮಾತನಾಡಿ, ``ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ'' ಅಡಿಯಲ್ಲಿ ಇಲ್ಲಿಯವರೆಗೆ ಕೊಪ್ಪಳ ಜಿಲ್ಲೆಯಲ್ಲಿ ೧,೧೫,೧೩೪ ಎ.ಬಿ-ಎ.ಆರ್.ಕೆ ಹೆಲ್ತ್ ಕಾರ್ಡ್ಗಳನ್ನು ವಿತರಿಸಲಾಗಿದೆ.  ಇದರಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ೬೩೬೫, ಕರ್ನಾಟಕ-ಒನ್ ಕೇಂದ್ರಗಳಲ್ಲಿ ೩೨೦೭ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ೧,೦೫,೫೬೨ ಕಾರ್ಡ್ಗಳನ್ನು ವಿತರಿಸಲಾಗಿದೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ  ಈ ಯೋಜನೆಯಡಿ ೫೧೯೯ ಫಲಾನುಭವಿಗಳು ಚಿಕಿತ್ಸೆ ಪಡೆದಿರುತ್ತಾರೆ.  ಇದಕ್ಕಾಗಿ ಒಟ್ಟು ೨,೨೭,೬೨,೦೦೮ ರೂಪಾಯಿಗಳು ಸರಕಾರದಿಂದ ನೋಂದಾಯಿತ ಸರಕಾರಿ ಆಸ್ಪತ್ರೆಗಳಿಗೆ ಭರಿಸಲಾಗಿದೆ ಎಂದು ತಿಳಿಸಿದರು.  
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ್ ಯರೆಗಲ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಎಸ್.ಬಿ ದಾನರೆಡ್ಡಿ, ಆಯುಷ್‌ಮಾನ್ ಭಾರತ ಆರೋಗ್ಯ ಕರ್ನಾಟಕ ಕೊಪ್ಪಳ ನೂಡಲ್ ಅಧಿಕಾರಿ ಹಾಗೂ ಡಿ.ಎಲ್.ಓ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಮಾನ್ವಿ ಪಾಶಾ, ಇಂದಿರಾ ಬಾವಿಕಟ್ಟಿ, ಮಹಾಂತೇಶ ಚಾಕ್ರಿ ಸೇರಿದಂತೆ ಡಾ. ಎಸ್.ಕೆ ದೇಸಾಯಿ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ, ತಾಲ್ಲೂಕ ಆರೋಗ್ಯಾಧಿಕಾರಿಗಳು, ಸವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಜಿಲ್ಲಾ ಸಂಯೋಜಕರು ಹಾಗೂ ಜಿಲ್ಲೆಯ ಎಲ್ಲಾ ಆರೋಗ್ಯ ಮಿತ್ರರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಜನ ಜಾಗೃತಿ ಜಾಥಾ;
  ಕಾರ್ಯಕ್ರಮದ ಅಂಗವಾಗಿ ಜನ ಜಾಗೃತಿಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಾಥವು ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜು ಮುಂಬಾಗದ ಹಳೇ ಪಬ್ಲಿಕ್ ಗ್ರೌಂಡ್ ನಿಂದ ಪ್ರಾರಂಭಗೊಂಡು ಜಿಲ್ಲಾ ಆಸ್ಪತ್ರೆ ವರೆಗೆ ಜರುಗಿತು.  ಜಾಥದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು,  ``ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ'' ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. 

ಸುಬೋದ ಯಾದವ್ ಅವರಿಂದ ಕೊಪ್ಪಳದ ವಿವಿಧ ಕಾಮಗಾರಿಗಳ ಪರಿಶೀಲನೆ

ಸುಬೋದ ಯಾದವ್ ಅವರಿಂದ ಕೊಪ್ಪಳದ ವಿವಿಧ ಕಾಮಗಾರಿಗಳ ಪರಿಶೀಲನೆ
ಕೊಪ್ಪಳ ಸೆ. ೨೬ (ಕರ್ನಾಟಕ ವಾರ್ತೆ): ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಇಂದು (ಸೆ.೨೬) ಕೊಪ್ಪಳ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಕೊಪ್ಪಳ ನಗರದ ಜಿಲ್ಲಾ ಕ್ರಿÃಡಾಂಗಣಕ್ಕೆ ತೆರಳಿ ಇಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ವೀಕ್ಷಣೆ ಮಾಡಿದರು.  ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕ್ರಿÃಡಾಂಗಣ ಹಾಗೂ ರಂಗಮಂದಿರ ಕಾಮಗಾರಿ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. 
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ ರೇಣುಕಾ ಪಾಟೀಲ್, ನಿರ್ಮೀತಿ ಕೇಂದ್ರ ಶಶಿಧರ್, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜ್ಗಿ, ವಾರ್ತಾ ಇಲಾಖೆಯ ಎಂ. ಅವಿನಾಶ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. 
(ಫೋಟೋ ಕಳುಹಿಸಿದೆ)

ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಎಚ್. ವಿಶ್ವನಾಥ ರೆಡ್ಡಿ


======

ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಎಚ್. ವಿಶ್ವನಾಥ ರೆಡ್ಡಿ

ಕೊಪ್ಪಳ ಸೆ. 25 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾರಂಭಗೊಳಿಸಿ, ಜಲಮೂಲಗಳಿಲ್ಲದ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಬಹಳಷ್ಟಿದೆ. ಮಾನವೀಯತೆ ದೃಷ್ಟಿಯಿಂದ ಶೀಘ್ರ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಶ್ವನಾಥ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 
ಜಿಲ್ಲಾ ಪಂಚಾಯತನ ಜೆ. ಎಚ್. ಪಟೇಲ್ ಸಭಾಂಗಣದಲ್ಲಿ ಇಂದು(ಸೆ. 25) ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಕೆಲವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅವುಗಳನ್ನು ದುರಸ್ತಿಗೊಳಿಸಿ, ಅಗತ್ಯ ವಿದ್ಯುತ್ ಸಂಪರ್ಕವನ್ನು ಒದಗಿಸಿ ಜನರಿಗೆ ಅನುಕೂಲ ಮಾಡಿ ಕೊಡಿ.  ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಿದ್ದಾಪುರ ಹಾಗೂ ನಂದಿಹಳ್ಳಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯ ಬದಿ ಲೋಕೋಪಯೋಗಿ ಇಲಾಖೆಯಿಂದ ನಿಗದಿತ ಗಡಿ ನಿರ್ಮಿಸಿ. ಇದರಿಂದ ಅರಣ್ಯ ಇಲಾಖೆಯವರು ರಸ್ತೆ ಬದಿ ಗಿಡ ನೆಡಲು ಅನುಕೂಲವಾಗುತ್ತದೆ.  ಅಲ್ಲದೇ ಈ ರಸ್ತೆಯ ಬದಿ ಚರಂಡಿ ನಿರ್ಮಾಣ ಕಾಮಗಾರಿಗೆ ಕ್ರಮ ಕೈಗೊಳ್ಳಿ.  ಇದರಿಂದ ಹೆಚ್ಚಿನ ಪ್ರಮಾಣದ ಮಳೆ ಬಂದಾಗ ರಸ್ತೆಗುಂಟ ನೀರು ಹರಿದು ಹೋಗಿ ರಸ್ತೆ ಬೇಗ ಹಾಳಾಗುವುದನ್ನು ತಪ್ಪಿಸಬಹುದು.  ಹಾಗೂ ಜಿಲ್ಲೆಯ ವಿವಿಧೆಡೆ ಬಾಕಿ ಇರುವ ರಸ್ತೆ ನಿರ್ಮಾಣ, ರಸ್ತೆ ಅಗಲೀಕರಣ, ರಸ್ತೆ ಅಭಿವೃದ್ಧಿ  ಕಾಮಗಾರಿಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಕಾರ್ಯಾರಂಭ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಏತನೀರಾವರಿ ಯೋಜನೆ ಆರಂಭಗೊಂಡಿದ್ದು, ಈ ಕುರಿತು ಪ್ರತಿಯೊಂದು ವಿವರಗಳನ್ನು ಒಳಗೊಂಡ ವರದಿಯನ್ನು 15 ದಿನಗಳೊಳಗೆ ಸಲ್ಲಿಸಬೇಕು. ಏತ ನೀರಾವರಿ ಯೋಜನೆಯಡಿ ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸುವಾಗ ಸಾಧಕ ಬಾಧಕಗಳನ್ನು ಪರಿಶೀಲಿಸಿ ಆ ಕುರಿತು ಸಂಬಂಧಿಸಿದ ಶಾಸಕರಿಗೆ ಮಾಹಿತಿ ನೀಡಬೇಕು.  ಯಾವುದೇ ಕಾರಣಕ್ಕೂ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ತಪ್ಪು ಮಾಹಿತಿ ನೀಡಕೂಡದು ಎಂದು ಸಣ್ಣ ನೀರವಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲೆಯ ಕೆಲವೆಡೆ ಅಕ್ರಮ ಮರಳು ಸಾಕಾಣಿಕೆ ಕುರಿತು ದೂರುಗಳು ಬಂದಿವೆ.  ಅವುಗಳನ್ನು ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳಿ. ರೈತ ತನ್ನ ಗೃಹ ಬಳಕೆ ಅಥವಾ ಕೃಷಿ ಭೂಮಿ ಅಭಿವೃದ್ಧಿಗೆ ಮರಳು ಬಳಸಿಕೊಂಡರೆ ಅವರ ವಿರುದ್ಧ ಪ್ರಕರಣ ದಾಖಲಿಸುತ್ತಿರುವ ಕುರಿತು ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚೆಂಡೂರು ಹನುಮಂತಗೌಡ ಪಾಟೀಲ ರವರ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು ಈಗಾಗಲೇ ದಾಖಲಾಗಿರುವ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಲ್ಲ ಇಲಾಖಾಧಿಕಾರಿಗಳು ಸಭೆಗೆ ಬರುವಾಗ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಇದ್ದರೂ ಕೇವಲ ಅದರ ಅಂಕಿ ಅಂಶಗಳನ್ನು ತರದೇ, ಆ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿ ನಡೆಯುವ ಸ್ಥಳ, ಅನುದಾನದ ಬಳಕೆ, ಆವರೆಗಿನ ಪ್ರಗತಿ ಕುರಿತು ವಿವರವಾದ ಮಾಹಿತಿಯನ್ನು ಸಭೆಗೆ ತರಬೇಕು.  ಜಿ.ಪಂ. ಸದಸ್ಯರು ಕೇಳುವ ಮಾಹಿತಿಯನ್ನು ಸಂಪೂರ್ಣವಾಗಿ ನೀಡಬೇಕು. ಕೇವಲ ಅಂಕಿ ಅಂಶಗಳಿಂದ ಸಭೆಗೆ ಪೂರ್ಣ ಮಾಹಿತಿ ದೊರೆಯಲು ಸಾಧ್ಯವಿಲ್ಲ ಎಂದರು.
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಸಂಬಂಧಿಸಿದಂತೆ, ನಿರ್ದಿಷ್ಟ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಇರುವ ಸರ್ಕಾರದ ಮಾನದಂಡಗಳ ಕುರಿತು ಮಾಹಿತಿ ಪಡೆದ ಅವರು, ಸರ್ಕಾರದ ಮಾರ್ಗಸೂಚಿಯನ್ವಯ ಅಗತ್ಯವಿರುವ ಗ್ರಾಮಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ಕೈಗೊಳ್ಳಿ ಎಂದು ಅವರು ಹೇಳಿದರು.
ಶಾಲಾ-ಕಾಲೇಜು ಮಕ್ಕಳು ವಾಸಿಸುವ ಯಾವುದೇ ವಸತಿ ಶಾಲೆಗಳ ಕಟ್ಟಡದಲ್ಲಿ ಕಡ್ಡಾಯವಾಗಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.  ಶಾಲಾ ಕಟ್ಟಡಗಳೂ ಒಳಗೊಂಡಂತೆ ವಿದ್ಯುತ್ ಸಂಪರ್ಕಗಳು, ವಿದ್ಯುತ್ ಪರಿವರ್ತಕಗಳನ್ನು ಅಳವಡಿಸುವದು, ಸ್ಥಳಾಂತರಿಸುವುದು ಸೇರಿದಂತೆ ಜೆಸ್ಕಾಂಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಅವರು ಹೇಳಿದರು.
ಯಾವುದೇ ಇಲಾಖೆಗೆ ಸಂಬಂಧಿಸಿದಂತೆ ಕಟ್ಟಡ ಕಾಮಗಾರಿಗಳ ಸಂಪೂರ್ಣ ಜವಾಬ್ದಾರಿ ಇಲಾಖೆಯ ಅಧಿಕಾರಿಯದ್ದಾಗಿರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿ ಹಂಚಿಕೆ ಮಾಡಿಕೊಂಡ ನಿರ್ಮಿತಿ ಕೇಂದ್ರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಹಾಗೂ ಕೆ.ಆರ್.ಐ.ಡಿ.ಬಿ ಗಳು ಕಾಮಗಾರಿ ನಿರ್ವಹಿಸುವ ಏಜೆನ್ಸಿಗಳಾಗಿದ್ದು, ಏಜೆನ್ಸಿಗಳ ಕಾರ್ಯ ವೈಖರಿ ಕುರಿತು ಇಲಾಖೆ ಅಧಿಕಾರಿ ಆಗಾಗ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು.  ಕಾಮಗಾರಿ ಪೂರ್ಣಗೊಂಡ ನಂತರ ಕಟ್ಟಡ ಉದ್ಘಾಟನೆಗೆ ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಬೇಕು. ಏಜೆನ್ಸಿಗಳು ಕಟ್ಟಡ ಹಸ್ತಾಂತರಿಸುವಾಗ ಸಂಬಂಧಿಸಿದ ಇಲಾಖೆಯ ಅಧಿಕಾರಿಯ ಸಲಹೆ, ಸೂಚನೆಗಳನ್ನು ಪಾಲಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಈಗಾಗಲೇ ಆರಂಭಗೊಂಡಿರುವ ಕಟ್ಟಡ ಕಾಮಗಾರಿಗಳ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿ ಹಾಗೂ ಏಜೆನ್ಸಿ ಅವರು ಜಂಟಿ ಸಮೀಕ್ಷೆ ನಡೆಸಿ, ಕಾಮಗಾರಿಯ ವಿವರ, ಪೂರ್ಣಗೊಳಿಸಲು ನಿಗದಿ ಪಡಿಸಿದ ಅವಧಿ, ವಿಳಂಬಕ್ಕೆ ಕಾರಣಗಳು ಸೇರಿದಂತೆ ಕಾಮಗಾರಿ ಕುರಿತು ವಿವರವಾದ ಮಾಹಿತಿಯನ್ನು ವಾರದೊಳಗೆ ಸಲ್ಲಿಸಬೇಕು.  ಇಲಾಖೆ ಹಾಗೂ ಏಜೆನ್ಸಿ ನಡುವಿನ ಪತ್ರ ವ್ಯವಹಾರದ ಹೊರತಾಗಿಯೂ ಇಲಾಖಾಧಿಕಾರಿ ಹೆಚ್ಚಿನ ಜವಾಬ್ದಾರಿಯಿಂದ ಕಾಮಗಾರಿಯ ಪ್ರಗತಿ ಪರಿಶೀಲನೆ ಮಾಡಬೇಕು. ಕಾಮಗಾರಿಗೆ ಸಂಬಂಧಿಸಿದಂತೆ ಏನಾದರು ತೊಂದರೆ, ಗೊಂದಲಗಳು ಇದ್ದಲ್ಲಿ, ಅನುಮೋದನೆಗೊಂಡ ಕಾಮಗಾರಿಗೆ ನಿವೇಶನದ ಅಗತ್ಯವಿದ್ದಲ್ಲಿ, ಗೊಂದಲಗಳಿದ್ದಲ್ಲಿ ಜಿಲ್ಲಾಧಿಕಾರಿಗಳು ಅಥವಾ ಸಿ.ಇ.ಒ ಅವರನ್ನು ಸಂಪರ್ಕಿಸಿ.  ಈ ಕುರಿತು ಜಿ.ಪಂ. ಅಧ್ಯಕ್ಷರಿಗೆ ಮಾಹಿತಿ ನೀಡಿ ಎಂದು ಹೇಳಿದರು.
ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ ತೊರವಿ, ಯೋಜನಾ ನಿರ್ದೇಶಕರಾದ ರವಿ ಬಿಸರಳ್ಳಿ,  ಜಿಲ್ಲಾ ಪಂಚಾಯತ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳ ಆರೋಗ್ಯ ಕಾಪಾಡುವುದು ಪೋಷಕರ ಜವಾಬ್ದಾರಿ : ಡಾ. ರಾಜಕುಮಾರ್ ಯರಗಲ್

ಮಕ್ಕಳ ಆರೋಗ್ಯ ಕಾಪಾಡುವುದು ಪೋಷಕರ ಜವಾಬ್ದಾರಿ : ಡಾ. ರಾಜಕುಮಾರ್ ಯರಗಲ್

ಕೊಪ್ಪಳ ಸೆ. 25 (ಕರ್ನಾಟಕ ವಾರ್ತೆ): ಮಕ್ಕಳು ದೇಶದ ಸಂಪತ್ತು ಅವರ ಆರೋಗ್ಯ ಕಾಪಾಡುವುದು ಇಲಾಖೆಗಳ ಹಾಗೂ ಪೋಷಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಎಸ್ ಯರಗಲ್ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರದಂದು (ಸೆ.25) ಆಯೋಜಿಸಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಹಾಗೂ ಹಿಮೋಗ್ಲೋಬಿನ್ ತಪಾಸಣೆ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  
ಅಲ್ಬೆಂಡಾಝೋಲ್ ಮಾತ್ರೆಯನ್ನು ತೆಗೆದುಕೊಳ್ಳುವುದರಿಂದ ಮಕ್ಕಳಲ್ಲಿ  ಮೂರು ರೀತಿಯ ಜಂತು ಹುಳುಗಳು ನಾಶವಾಗುತ್ತವೆ.  ಇದರಿಂದ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗುತ್ತದೆ.  ಪ್ರತಿಯೊಬ್ಬರು ಈ ಮಾತ್ರೆಯನ್ನು ತಪ್ಪದೇ ತೆಗೆದುಕೊಳ್ಳಬೇಕು.  ಇದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಎಲ್ಲರೂ ರಕ್ತಹೀನತೆಯ ಬಗ್ಗೆ ತಿಳಿದುಕೊಂಡು ಅದರ ದುಷ್ಪರಿಣಾಮ ಕುರಿತು ಇತರರಿಗೂ ಜಾಗೃತಿ ಮೂಡಿಸಿ.  ಜಂತು ರಹಿತ ಮಕ್ಕಳು ಆರೋಗ್ಯವಂತ ಮಕ್ಕಳು. ಆದ್ದರಿಂದ ಪ್ರತಿಯೊಂದು ಶಾಲೆಯ ವಿದ್ಯಾರ್ಥಿಗಳು ಜಂತು ನಿವಾರಕ ಮಾತ್ರೆಯನ್ನು ತೆಗೆದುಕೊಳ್ಳುವಂತೆ ತಿಳಿಸಿದರು.
‘’ರಕ್ತಹೀನತೆ ಮುಕ್ತ ಭಾರತ’’ ಮಾಡುವುದು ನಮ್ಮ ಗುರಿ.  ಮುಂದಿನ ಪೀಳಿಗೆಯ ವಿದ್ಯಾರ್ಥಿಗಳು ಮತ್ತು ಗರ್ಭಿಣಿಯರು ರಕ್ತಹೀನತೆಯಿಂದ ಬಳಲಬಾರದು.  ಈ ನಿಟ್ಟಿನಲ್ಲಿ ಶುಚಿತ್ವ, ಪೋಷಣಾ ಅಭಿಯಾನ ಕಾರ್ಯಕ್ರಮ, ರಕ್ತಹೀನತೆಯಿಂದ ಆಗುವ ದುಷ್ಪಾರಿಣಾಮ ಕುರಿತು ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ.  ಪಾಲಕರು ತಮ್ಮ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ಜಂತು ನಿವಾರಕ ಮಾತ್ರೆ ತೆಗೆದುಕೊಳ್ಳುವಂತೆ ಸಹಕಾರ ನೀಡಿ ‘’ರಕ್ತ ಹೀನತೆ ಮುಕ್ತ’’ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಿ ಎಂದರು.  
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಲಿಂಗರಾಜ ಟಿ ರವರು  ಮಾತನಾಡಿ,  ವರ್ಷದಲ್ಲಿ ಎರಡು ಬಾರಿ ಜಂತು ನಿವಾರಕ ಮಾತ್ರೆಯಾದ ‘’ಅಲ್ಬೆಂಡಾಝೋಲ್’’ ಮಾತ್ರೆಯನ್ನು ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅಂಗನವಾಡಿ ಕೇಂದ್ರ, ಶಾಲೆ, ಪಿ.ಯು.ಸಿ ಕಾಲೇಜುಗಳಲ್ಲಿ ಈ ಮಾತ್ರೆಯನ್ನು ಉಚಿತವಾಗಿ ನೀಡಲಾಗುತ್ತದೆ.  ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬರುವ ರಕ್ತಹೀನತೆ, ಅಪೌಷ್ಠಿಕತೆ, ಹಸಿವು ಆಗದೇ ಇರುವುದು, ನಿಶ್ಯಕ್ತಿ, ಹೊಟ್ಟೆನೋವು, ವಾಂತಿ, ಅತಿಸಾರ, ತೂಕ ಕಡಿಮೆಯಾಗುವುದು ಇಂತಹ ಲಕ್ಷಣಗಳುಳ್ಳ ಮಕ್ಕಳು ಜಂತುಬಾಧೆಯಿಂದ ಬಳಲುತ್ತಿರುತ್ತಾರೆ.  ರಕ್ತ ಹೀನತೆ ತಡೆಗಟ್ಟಲು ಈ ಮಾತ್ರೆಯನ್ನು ನೀಡಲಾಗುತ್ತದೆ.  ಇದರ ಜೊತೆಗೆ ಸೆಪ್ಟಂಬರ್ ತಿಂಗಳನ್ನು ‘’ಪೋಷಣಾ ಅಭಿಯಾನ ಮಾಸಾಚಾರಣೆ’’ ಎಂದು ಘೋಷಿಸಲಾಗಿದ್ದು, ಈ ಕಾರ್ಯಕ್ರಮವನ್ನು ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಿಂದ ನೇರವೇರಿಸಲಾಗುತ್ತಿದೆ.  ಪೌಷ್ಠಿಕ ಆಹಾರದಿಂದ ಬಹಳಷ್ಟು ಖಾಯಿಲೆಗಳನ್ನು ಗರ್ಭಿಣಿಯರಲ್ಲಿ ಮತ್ತು ಹದಿ-ಹರೆಯದವರಲ್ಲಿ, ಮಕ್ಕಳಲ್ಲಿ ತಡೆಗಟ್ಟಬಹುದು ಎಂದರು.  
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ|| ಗಣಪತಿ ಕೆ ಲಮಾಣಿ ರವರು ವಹಿಸಿದ್ದರು.  ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ. ಮಹೇಶ ಎಂ.ಜಿ. ಹಾಗೂ ಡಾ. ಪ್ರಕಾಶ, ಕಾಲೇಜಿನ ಉಪನ್ಯಾಸಕ ಪ್ರದೀಪ್ ಕುಮಾರ,  ಡಾ. ಹುಲಿಗೆಮ್ಮ, ಐಸಿಡಿಎಸ್ ಮೇಲ್ವಿಚಾರಕಿ ಬಸಮ್ಮ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಹಿರಿಯ ಹಾಗೂ ಕಿರಿಯ ಆರೋಗ್ಯ ಸಹಾಯಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ರೆಡ್‍ಕ್ರಾಸ್ ಸಂಸ್ಥೆಯ ಮೇಲ್ವಿಚಾರಕರು, ಆಶಾ ಮೇಲ್ವಿಚಾರಕರು, ಇಲಾಖೆಯ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸೆ. 29 ರಿಂದ ಹುಲಿಗೆಮ್ಮ ದೇವಿ ದೇವಸ್ಥಾನದ ದಸರಾ ಮಹೋತ್ಸವ ಕಾರ್ಯಕ್ರಮ

ಸೆ. 29 ರಿಂದ ಹುಲಿಗೆಮ್ಮ ದೇವಿ ದೇವಸ್ಥಾನದ ದಸರಾ ಮಹೋತ್ಸವ ಕಾರ್ಯಕ್ರಮ ಕೊಪ್ಪಳ ಸೆ. 25 (ಕರ್ನಾಟಕ ವಾರ್ತೆ):

ಕೊಪ್ಪಳ: ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕೇತ್ರವಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ವತಿಯಿಂದ "ಶ್ರೀ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ"ವನ್ನು ಸೆ. 29 ರಿಂದ ಅಕ್ಟೋಬರ್. 08 ರವರೆಗೆ ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭವು ಸೆ. 29 ರಂದು ಸಾಯಂಕಾಲ 6-30 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಜರುಗಲಿದೆ. ಉಪ ಮುಖ್ಯಮಂತ್ರಿ, ಸಾರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿ.ಪಂ. ಸದಸ್ಯೆ ಗಾಯಿತ್ರಿ ವೆಂಕಟೇಶ ವಡ್ಡರ್, ಹುಲಿಗಿ ಗ್ರಾ.ಪಂ. ಅಧ್ಯಕ್ಷೆ ರೇಣುಕಾ ರಾಮಣ್ಣ, ತಾ.ಪಂ. ಸದಸ್ಯ ಪಾಲಾಕ್ಷಪ್ಪ ಗುಂಗಾಡಿ ಪಾಲ್ಗೊಳ್ಳುವರು. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಭಾಗವಹಿಸುವರು. ಕಾರ್ಯಕ್ರಮದ ವಿವರ; ಶ್ರೀ ಹುಲಿಗೆಮ್ಮ ದೇವಿ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳ ವಿವರ ಇಂತಿದೆ. ಸೆ. 29 ರಂದು ಸಂಜೆ 6-30 ಗಂಟೆಗೆ ಘಟಸ್ಥಾಪನೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ, ರಾತ್ರಿ 8 ಗಂಟೆಗೆ ಐಶ್ವರ್ಯರಾಣಿ ಬೂದಿಹಾಳ ಗಂಗಾವತಿಯವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಲಿದೆ. ಸೆ.30 ರಂದು ಸಂಜೆ 6-30 ಗಂಟೆಗೆ ನಾಟ್ಯನಾದ ಕಲಾ ತಂಡ ಹುಲಿಗಿ ಇವರಿಂದ ಭರತ ನಾಟ್ಯ ಹಾಗೂ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಕಾರ್ಯಕ್ರಮ ಜರುಗಲಿವೆ. ಅಕ್ಟೋಬರ್. 01 ರಂದು ಸಂಜೆ 6-30 ಗಂಟೆಗೆ ಶೃತಿ ಹ್ಯಾಟಿ ಹುಲಿಗಿ ತಂಡದಿಂದ ತತ್ವ ರಸಾಯನ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಶ್ರೀ ಗವಿಸಿದ್ದೇಶ್ವರ ಸಂಗೀತ ವಿದ್ಯಾಪೀಠ ಕೊಪ್ಪಳ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ, ಅ. 02 ರಂದು ಸಂಜೆ 6-30 ಗಂಟೆಗೆ ಬಸವರಾಜ್ ಬಿ. ಸೌಬಾಲ ಕೂಚುಪುಡಿ ನೃತ್ಯ ನಿಕೇತನ ಸಿರುಗುಪ್ಪ ಇವರಿಂದ ಕೂಚುಪುಡಿ ನೃತ್ಯ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಶ್ರೀ ಅಭಿನವ ಸಂಗೀತ ಹಾಗೂ ಕಲಾ ಸಾಂಸ್ಕøತಿಕ ಶಿಕ್ಷಣ ಸಂಸ್ಥೆ(ರಿ) ಕೊಪ್ಪಳ ಇವರಿಂದ ಜಾನಪದ ಸಂಗೀತ ಕಾರ್ಯಕ್ರಮ, ಅ. 03 ರಂದು ಸಂಜೆ 6-30 ಗಂಟೆಗೆ ಶಕುಂತಲಾ ಬೆನ್ನಾಳ ಭಾಗ್ಯನಗರ ಇವರಿಂದ ವಚನ ಗಾಯನ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಕನ್ನಡದ ಕಬೀರ್ ಸೂಫೀ ಸಂತ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಮಹಾಲಿಂಗಪುರದ ಇಬ್ರಾಹಿಂ ನಾ ಸುತಾರ ಇವರಿಂದ ಆಧ್ಯಾತ್ಮಿಕ ಪ್ರವಚನ, ಬೆಳ್ಳಿ ಮಂಟಪದಲ್ಲಿ ಶ್ರೀದೇವಿಯವರಿಗೆ ಶಾರ್ದೂಲ ವಾಹನ ಪೂಜೆ ಕಾರ್ಯಕ್ರಮ, ಅ. 04 ರಂದು ಸಂಜೆ 6-30 ಗಂಟೆಗೆ ನಾಗಚಂದ್ರಿಕ್ ಭಟ್ ಮತ್ತು ತಂಡ ಬೆಂಗಳೂರು ಇವರಿಂದ ವೈವಿಧ್ಯಮಯ ಸಂಗೀತ ಕಾರ್ಯಕ್ರಮ ಬೆಳ್ಳಿ ಮಂಟಪದಲ್ಲಿ ಶ್ರೀದೇವಿಯವರಿಗೆ ಸಿಂಹ ವಾಹನ ಪೂಜೆ ಕಾರ್ಯಕ್ರಮ, ಅ. 05 ರಂದು ಸಂಜೆ 6-30 ಗಂಟೆಗೆ ಬೆಂಗಳೂರು ವಸುಂಧರ ಶ್ರೀ ಬಿಳಿಗಿರಿ ಮಹಿಳಾ ಮತ್ತು ಮಕ್ಕಳ ಸಮೃದ್ಧಿ ಸಂಘ (ರಿ) ಇವರಿಂದ ಸಾಂಸ್ಕøತಿಕ ವೈವಿಧ್ಯಮಯ ನೃತ್ಯ ಕಾರ್ಯಕ್ರಮ, ಬೆಳ್ಳಿ ಮಂಟಪದಲ್ಲಿ ಶ್ರೀದೇವಿಯವರಿಗೆ ಮಯೂರ ವಾಹನ ಪೂಜೆ ನಡೆಯಲಿದೆ. ಅ.06 ರಂದು ಸಂಜೆ 6-30 ಗಂಟೆಗೆ ಕೂಡ್ಲಿಗಿ ಕೋಗಳಿ ಕೊಟ್ರೇಶ್ ಇವರಿಂದ ಹಾಸ್ಯ ಸಂಜೆ ಕಾರ್ಯಕ್ರಮ, ಬೆಳ್ಳಿ ಮಂಟಪದಲ್ಲಿ ಶ್ರೀದೇವಿಯವರಿಗೆ ಅಶ್ವ ವಾಹನ ಪೂಜೆ, ಅ. 07 ರಂದು ಸಂಜೆ 6-30 ಗಂಟೆಗೆ ಹುಲಿಗಿಯ ಅಭಿನಯ ಸಾಂಸ್ಕøತಿಕ ಕಲಾ ಸಂಘ (ರಿ) ಇವರಿಂದ ಹೆಚ್.ಎಂ.ಕೊಟ್ರಯ್ಯ ಸ್ವಾಮಿ ನಿರ್ದೇಶನದ ``ದೇವರಿದ್ದರೆ ಬರಲಿ'' ನಾಟಕ ಪ್ರದರ್ಶನ ಕಾರ್ಯಕ್ರಮ ಜರುಗಲಿದ್ದು, ಬೆಳ್ಳಿ ಮಂಟಪದಲ್ಲಿ ಶ್ರೀದೇವಿಯವರಿಗೆ ಅಶ್ವ ವಾಹನ ಪೂಜೆ ನೆರವೇರಲಿದೆ. ಅ. 08 ರಂದು (ವಿಜಯದಶಮಿ) 3 ಗಂಟೆಗೆ ಯಿಂದ ಶ್ರೀ ದೇವಿಯವರ ದಶಮಿ ದಿಂಡಿನ ಉತ್ಸವದೊಂದಿಗೆ ಶಮಿ ವೃಕ್ಷಕ್ಕೆ ತೆರಳಿ, ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಲಾಗುವುದು. ನಂತರ ದೇವಸ್ಥಾನದಲ್ಲಿ ತೊಟ್ಟಿಲು ಸೇವೆ, ಮಹಾಮಂಗಳಾರತಿ ಮಂತ್ರ ಪುಷ್ಪದೊಂದಿಗೆ ಕಾರ್ಯಕ್ರಮಗಳ ಮುಕ್ತಾಯವಾಗಲಿದೆ. ದಸರಾ ಮಹೋತ್ಸವದ ಪ್ರಯುಕ್ತ ಹುಲಿಗಿಯ ಹಳೇಯ ತುಂಗಭದ್ರ ಪ್ರೌಢಶಾಲೆಯಲ್ಲಿ ಅಕ್ಟೋಬರ್. 05 ಮತ್ತು 06 ರಂದು ರಾಜ್ಯ ಮಟ್ಟದ ಪುರುಷ ಮತ್ತು ಮಹಿಳೆಯರ ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿಗಳು ಜರುಗಲಿವೆ. ದಸರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಪ್ರತಿನಿತ್ಯ ಬೆಳಗಿನ ಜಾವ ಸುಪ್ರಭಾತ, ಪೂಜೆ, ಮಹಾ ನೈವೇಧ್ಯ ಹಾಗೂ ದೇವಿ ಪುರಾಣ ಪಠಣ ಜರುಗಲಿದೆ. ಭಕ್ತಾದಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸಹಕಾರ ಸಂಘಗಳಿಂದ ಸಮಾಪನೆ : ಆಕ್ಷೇಪಣೆಗೆ ಆಹ್ವಾನ

ಸಹಕಾರ ಸಂಘಗಳಿಂದ ಸಮಾಪನೆ : ಆಕ್ಷೇಪಣೆಗೆ ಆಹ್ವಾನ ಕೊಪ್ಪಳ ಸೆ. 26(ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಕುರಿ ಸಂಗೋಪನಾ ಹಾಗೂ ಉಣ್ಣೆ ಔದ್ಯೋಗಿಕ ಮತ್ತು ಗ್ರಾಮೋದ್ಯೋಗ ಸಹಕಾರಿ ಉತ್ಪಾದಕ ಸಂಘವನ್ನು ಸಮಾಪನೆಗೊಳಿಸಬೇಕಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆÀ ಕೊಪ್ಪಳ ಜಿಲ್ಲೆಯಲ್ಲಿ ಯಲಬುರ್ಗಾ ತಾಲೂಕಿನ ಕುರಿ ಸಂಗೋಪನಾ ಹಾಗೂ ಉಣ್ಣೆ ಔದ್ಯೋಗಿಕ ಮತ್ತು ಗ್ರಾಮೋದ್ಯೋಗ ಸಹಕಾರಿ ಉತ್ಪಾದಕ ಸಂಘ ನಿ., ಸಂಗನಾಳ ಸಂಘವು ತಾಲ್ಲೂಕು ಮಟ್ಟಕ್ಕಿಂತ ಕಡಿಮೆ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು, 2014-15 ರಿಂದ ಕಾರ್ಯ ಚಟುವಟಿಕೆಯನ್ನು ನಿರ್ವಹಿಸದೇ ಸ್ಥಗಿತಗೊಂಡಿರುತ್ತದೆ. ಸಹಕಾರ ಸಂಘವನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ರ ಕಲಂ 72 ರಡಿಯಲ್ಲಿ ಸಮಾಪನೆಗೊಳಿಸಲು ಕ್ರಮ ಕೈಗೊಳ್ಳಲ್ಲಿದ್ದು, ಸದರಿ ಸಹಕಾರ ಸಂಘಕ್ಕೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಒಂದು ವಾರದೊಳಗಾಗಿ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ನಿಗಧಿತ ಕಾಲಾವಧಿಯಲ್ಲಿ ಯಾವೂದೇ ಆಕ್ಷೇಪಣೆಗಳು ಬಾರದೇ ಇದ್ದಲ್ಲಿ ಸಂಘವನ್ನು ಕಾನೂನು ರೀತ್ಯಾ ಸಮಾಪನೆಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಸಹಕಾರ ಸಂಘಗಳ ಉಪ ನಿರ್ಬಂಧಕರ ಕಛೇರಿಯ ಮೊ-08539,221109 ಗೆ ಸಂಪರ್ಕಿಸಿ ಎಂದು ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾಗ್ಯನಗರ ಪಟ್ಟಣ ಪಂಚಾಯತ್ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಭಾಗ್ಯನಗರ ಪಟ್ಟಣ ಪಂಚಾಯತ್ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಕೊಪ್ಪಳ ಸೆ. 26 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತ ಕಾರ್ಯಾಲಯದ ವತಿಯಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ (ಸೆ.25) ಬುಧವಾರದಂದು ಶಾಲಾ ಮಕ್ಕಳಿಂದ ಸ್ವಚ್ಚತೆ ಕುರಿತು ನಗರ ಹಸೀಕರಣದ ಮತ್ತು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸುವ ಬಗ್ಗೆ ಒಂದು ದಿನದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುಲಾಯಿತು ಸಂದರ್ಭಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಕಾರ್ಯಾಲಯದ ಸಿಬ್ಭಂದಿಗಳು, ಸರ್ಕಾರಿ ಶಾಲೆಯ ಶಿಕ್ಷಕಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.