Wednesday, 9 October 2019

ಸೈನಿಕ ನೇಮಕಾತಿ : ಅ.೧೦ ರಂದು ಪೂರ್ವಭಾವಿ ಸಭೆ

 ಸೈನಿಕ ನೇಮಕಾತಿ : ಅ.೧೦ ರಂದು ಪೂರ್ವಭಾವಿ ಸಭೆ

ಕೊಪ್ಪಳ ಅ.೦೩ (ಕರ್ನಾಟಕ ವಾರ್ತೆ): ಕೊಪ್ಪಳದಲ್ಲಿ ಸೈನಿಕ ನೇಮಕಾತಿ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಅಕ್ಟೊÃಬರ್. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 
ನವೆಂಬರ್. ೦೫ ರಿಂದ ೧೬ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸೈನಿಕ ನೇಮಕಾತಿ ನಡೆಯಲಿದ್ದು, ಈ ಕುರಿತಾದ ಪೂರ್ವಭಾವಿ ಸಭೆಯನ್ನು ಇದೇ ಅ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.  ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. 

ಗಾಂಧೀಜಿ ಅವರ ಜೀವನವೇ ಒಂದು ಸಂದೇಶ: ಕೆ.ರಾಘವೇಂದ್ರ ಹಿಟ್ನಾಳ

ಗಾಂಧೀಜಿ ಅವರ ಜೀವನವೇ ಒಂದು ಸಂದೇಶ: ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ ಅ.೦೨ (ಕರ್ನಾಟಕ ವಾರ್ತೆ): ಗಾಂಧೀಜಿಯವರ ಜೀವನವೇ ನಮಗೆ ಒಂದು ಸಂದೇಶ. ಇಂದಿನ ಯುವಕರಿಗೆ ಗಾಂಧೀಜಿ ಅವರು ಮಾದರಿ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು(ಅ.೦೨) ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಲವಾರು ಹೋರಾಟದ ಮೂಲಕ ಗಾಂಧೀಜಿಯವರು ನಮಗೆ ಸ್ವಾತಂತ್ರö್ಯವನ್ನು ದೊರಕಿಸಿ ಕೊಟ್ಟರು. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಗಾಂಧೀಜಿಯವರ ಕನಸಾಗಿತ್ತು. ಇಂದು ನಾವು ಎಲ್ಲೆಡೆ ಇಷ್ಟು ಸ್ವಚ್ಛ ಪರಿಸರವನ್ನು ಕಾಣುತ್ತಿದ್ದೆÃವೆಂದರೆ ಅದಕ್ಕೆ ಗಾಂಧೀಜಿಯವರೇ ಕಾರಣ. ಇಂದಿನ ಯುವ ಪೀಳಿಗೆಯವರು ಗಾಂಧೀಜಿಯವರ ಬೌದ್ಧಿಕ, ಸಾಂಸ್ಕೃತಿಕ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು. ಅವರಂತೆ ನಮ್ಮ ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಲಾಲ್ ಬಹದ್ದೂರ ಶಾಸ್ತಿçà ಅವರು ಕೂಡ ಒಬ್ಬರು. ಅವರ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ನಮಗೆಲ್ಲ ಮಾದರಿಯಾಗಬೇಕು ಎಂದು ಅವರು ಹೇಳಿದರು.
ಗಾಂಧೀಜಿಯವರ ಕುರಿತು ವಿಶೇಷ ಉಪನ್ಯಾಸ ನೀಡಿದ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಭುರಾಜ ನಾಯಕ್, ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆಯನ್ನು ಅಳವಡಿಸಿಕೊಂಡರೆ ನಾವು ಏನನ್ನಾದರೂ ಸಾಧಿಸಬಹುದು. ಮುಂದಿನ ಜನಾಂಗ ಇವುಗಳನ್ನು  ಅರ್ಥ ಮಾಡಿಕೊಂಡು, ಅವರ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೇಲೆ ನಮ್ಮ ಭಾರತ ದೇಶದ ಭವಿಷ್ಯ ನಿಂತಿದೆ. ಗಾಂಧೀಜಿಯವರ ಬೋಧನೆ, ನೀತಿ, ಜೀವನ ಸಂದೇಶವನ್ನು ಎಲ್ಲರೂ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಗಾಂಧೀಜಿ ಅವರ ಆತ್ಮ ಕತೆ ನನ್ನ ಸತ್ಯಾನ್ವೆÃಷಣೆ ಪುಸ್ತಕದಲ್ಲಿ ಇಂದಿನ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ, ವಿದ್ಯಾರ್ಥಿಗಳಿಗೆ, ವೈದ್ಯರಿಗೆ ಮತ್ತು ಎಲ್ಲಾ ವರ್ಗದವರಿಗೂ ಅನ್ವಯವಾಗುವಂತ ಸಂದೇಶಗಳನ್ನು ಅವರು ಬರೆದಿದ್ದಾರೆ. ಗಾಂಧೀಜಿಯವರು ಬ್ರಿಟಿಷರ  ದಬ್ಬಾಳಿಕೆಯ ವಿರುದ್ಧ ಹೋರಾಟ ಮಾಡಿ ನಮಗೆ ಸ್ತಾತಂತ್ರö್ಯವನ್ನು ದಕ್ಕಿಸಿಕೊಟ್ಟಿದ್ದಾರೆ. ಗಾಂಧೀಜಿ ಅವರು ಸತ್ಯವೇ ದೇವರು ಎಂದು ನಂಬಿದವರು. ಸತ್ಯ ಪಥವನ್ನು ಬಿಟ್ಟು ಅವರು ಬದುಕಿಲ್ಲ. ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಗಾಂಧೀಜಿಯವರ ಸತ್ಯ ಪರ ನಿಲುವುಗಳನ್ನು ಕಾಣುವುದು ಕಷ್ಟ. ಆದರೆ ಅವರ ನಿಲುವು, ಆದರ್ಶಗಳನ್ನು ಅಳವಡಿಸಿಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯವಾಗಬೇಕು ಎಂದು ಅವರು ಹೇಳಿದರು.
ಗಾಂಧೀಜಿಯವರ ಸರಳತೆ ಮತ್ತು ಅಹಿಂಸಾ ಮಾರ್ಗಗಳನ್ನು ಇಂದಿನ ಯುವಕರು ಅನುಸರಿಸಬೇಕು.  ಇಂದಿನ ರಾಜಕಾರಣ ಪ್ರಜಾಪ್ರಭುತ್ವದ ಉದ್ದೆÃಶ ಮತ್ತು ಧರ್ಮವನ್ನು ಒಳಗೊಂಡಿರಬೇಕು. ದುಡಿಯದೇ ಬರುವ ಹಣ ಅದು ಪಾಪಿಗಳ ಹಣವಿದ್ದಂತೆ ಅದನ್ನು ಸ್ವಿÃಕರಿಸಬಾರದು.  ಇಂದಿನ ದಿನಮಾನದಲ್ಲಿ ನಾವು ಚಾರಿತ್ರö್ಯವಿಲ್ಲದ ಶಿಕ್ಷಣವನ್ನು ಪಡೆಯುತ್ತಿದ್ದೆÃವೆ. ವಿದ್ಯೆಗೆ ಗುರು ಮತ್ತು ಹಿರಿಯರು ಎಂಬ ಎರಡು ರೇಖೆಗಳು ಎಂಬುದನ್ನು ಅರಿತರೆ ಸಮಾಜದ ಹಿರಿಯರನ್ನು ಗೌರವಿಸಲು ಸಾಧ್ಯ. ನೀತಿ ಇಲ್ಲದ ವಿಜ್ಞಾನ, ಹಿಡಿತವಿಲ್ಲದ  ಲೇಖನಿ ಎಲ್ಲವನ್ನೂ ನಾಶಮಾಡುತ್ತದೆ ಎಂದು ಗಾಧೀಜಿಯವರು ಹೇಳಿದ್ದಾರೆ. ಜಗತ್ತಿನ ಶಾಂತಿ, ಸ್ಥಿರತೆ, ಪ್ರಗತಿಗೆ ಗಾಂಧಿ ಅವರ ವಿಚಾರಧಾರೆಗಳು ಮಾರ್ಗದರ್ಶಿಯಾಗಿವೆ. ಜಗತ್ತು ಕೈ ಸೋತು ನಿಂತಾಗ ಗಾಧೀಜಿಯವರ ವಿಚಾರಗಳು ಕೈ ಹಿಡಿಯುತ್ತವೆ ಎಂಬ ಸ್ವಾಮಿ ವಿವೇಕಾನಂದರ ಮಾತು ಅಕ್ಷರಶಃ ಸತ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಬದಲಾವಣೆ ಎನ್ನುವುದು ನಮ್ಮಿಂದಲೇ ಆರಂಭವಾಗಬೇಕು. ಗಾಂಧೀಜಿಯವರು ಹೇಳಿರುವ ಮೌಲ್ಯಗಳನ್ನು ಶಾಲಾ ಮಕ್ಕಳು ಮತ್ತು ಎಲ್ಲರೂ ಅಳವಡಿಸಿ ಕೊಳ್ಳಬೇಕು. ಸ್ವಚ್ಛತೆ ಇದ್ದರೆ ನಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ. ಪ್ರತಿ ವಿದ್ಯಾರ್ಥಿಯೂ ಎರಡು ಗಿಡಗಳನ್ನು ನೆಟ್ಟು ಪೋಷಿಸಬೇಕು. ತಮ್ಮ ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್‌ನ್ನು ತ್ಯಜಿಸಿ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸಬೇಕು ಎಂದು ಹೇಳುತ್ತಾ, ಶಾಲಾ ವಿದ್ಯಾರ್ಥಿಗಳಿಗೆ ಜಲ ಶಕ್ತಿ ಅಭಿಯಾನ, ಮಳೆನೀರು ಕೊಯ್ಲಿನ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು. ಬರಗಾಲದಲ್ಲಿ ನೀರಿಗೆ ನಾವು ತೊಂದರೆ ಪಡುತ್ತೆÃವೆ ಆದ್ದರಿಂದ ನೀರಿನ ಸಂರಕ್ಷಣೆ ಬಗ್ಗೆ ಇಂದಿನಿಂದಲೇ ಜಾಗೃತವಾಗಿರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರಕಟಗೊಂಡ ಗಾಂಧೀಜಿ ಅವರ ಪಾಪು-ಬಾಪು  ಪುಸ್ತಕವನ್ನು ಶಾಸಕರು ಬಿಡುಗಡೆ ಮಾಡಿದರು. ಇದಕ್ಕೂ ಮುನ್ನ ಗಾಂಧೀಜಿಯವರ ಜೀವನ ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಅವರು ಉದ್ಘಾಟಿಸಿದರು.
ಇದೇ ಸಂದರ್ಭ ರಂಗೋಲಿಯಲ್ಲಿ ಗಾಂಧೀಜಿಯವರ ಚಿತ್ರ ರಚಿಸಿದ ಕಲಾವಿದ ಮೊಹಮ್ಮದ ದಾದಾಪೀರ ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಮಾರುತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್. ಕೆ. ತೊರವಿ, ಜಿ.ಪಂ. ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆÃಶಕಿ ಅಮಿತಾ ಯರಗೋಳ್ಕರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈಶಪ್ಪ ಆಶಾಪುರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಿಲ್ಲಾ ಸಂಖ್ಯಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಅಂಬಿಕಾ ಭಾಗ್ಯನಗರ ಮತ್ತು ಸಂಗಡಿಗರು ಪ್ರಾರ್ಥನೆ ಹಾಗೂ ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ಸಂದರ್ಭ ಗಾಂಧೀಜಿಯವರ ಜೀವನ ಕುರಿತ ಸಾಕ್ಷö್ಯ ಚಿತ್ರ ಪ್ರದರ್ಶನ ಮಾಡಲಾಯಿತು. 

ಅನಾಮಧೇಯ ವೃದ್ಧನ ಶವ ಪತ್ತೆ

ಅನಾಮಧೇಯ ವೃದ್ಧನ ಶವ ಪತ್ತೆ

ಕೊಪ್ಪಳ ಅ. ೦೪ (ಕರ್ನಾಟಕ ವಾರ್ತೆ): ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಹಾದಿ ಬಸವಣ್ಣ ಗುಡಿ ಹತ್ತಿರ ೬೦ ವರ್ಷದ ವೃದ್ಧ ಮೃತ ಪಟ್ಟಿದ್ದು, ಮೃತ ವ್ಯಕ್ತಿಯು ಅಂದಾಜು ೫ ಅಡಿ ೫ ಇಂಚು ಎತ್ತರ, ಕಪ್ಪು ಮೈಬಣ್ಣ ಮತ್ತು ಮೈ ಮೇಲೆ ಬಿಳಿ ತನ್ನು ಹೊಂದಿದ್ದು, ತೆಳ್ಳನೆಯ ಮೈಕಟ್ಟು ಹಾಗೂ ತಲೆಯಲ್ಲಿ ಬಿಳಿ ಕೂದಲು ಹೊಂದಿರುತ್ತಾನೆ. ಮೈ ಮೇಲೆ ಬಿಳಿ ಬಣ್ಣದ ತುಂಬ ತೋಳಿನ ಶರ್ಟ್ ಮತ್ತು ಕಡುನೀಲಿ ಬಣ್ಣದ ಹಾಫ್ ಪ್ಯಾಂಟ್ ಧರಿಸಿದ್ದನು. ಮೃತನ ಬಲಗಾಲ ಪಾದದ ಹತ್ತಿರ ಹಳೆಯ ಗಾಯವಿದ್ದು, ಅದಕ್ಕೆ ಬ್ಯಾಂಡೇಜ್ ಸುತ್ತಿದ್ದು ಕಂಡು ಬಂದಿದೆ.
ಮೃತ ವ್ಯಕ್ತಿಯ ಹೆಸರು, ವಿಳಾಸ ಮತ್ತು ಸಂಬಂಧಿಕರ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಲ್ಲಿ ಕಂಟ್ರೊÃಲ್ ರೂ. ನಂ: ೦೮೫೩೯-೨೩೦೧೦೦ ಮತ್ತು ೨೩೦೨೨೨, ಪಿ.ಐ ನಗರ ಪೊಲೀಸ ಠಾಣೆ ಕೊಪ್ಪಳ ಮೊ ಸಂ: ೯೪೮೦೮ ೦೩೭೪೫, ನಗರ ಪೊಲೀಸ ಠಾಣೆ ಕೊಪ್ಪಳ ದೂರವಾಣಿ ಸಂ: ೦೮೫೩೯-೨೨೦೩೩೩ ಇಲ್ಲಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ವಿಕಲಚೇತನರ ಕ್ಷೆÃತ್ರದಲ್ಲಿ ಸೇವೆಗೈದವರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ವಿಕಲಚೇತನರ ಕ್ಷೆÃತ್ರದಲ್ಲಿ ಸೇವೆಗೈದವರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಅ. ೦೪ (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಡಿಸೆಂಬರ್ ೦೩ ರಂದು ನಡೆಯುವ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಅಂಗವಿಕಲರ ಕ್ಷೆÃತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ೧೫ ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಅಂಗವಿಕಲರ ಕ್ಷೆÃತ್ರದಲ್ಲಿ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿ, ಸಂಸ್ಥೆ, ವಿಶೇಷ ಶಾಲೆಗಳ ಶಿಕ್ಷಕರು ನಿಗದಿತ ಅರ್ಜಿ ನಮೂನೆಗಳನ್ನು ಇಲಾಖೆಯ ವೆಬ್‌ಸೈಟ್ ತಿತಿತಿ.ತಿeಟಜಿಚಿಡಿeoಜಿಜisಚಿbಟeಜ.ಞಚಿಡಿ.ಟಿiಛಿ ಅಥವಾ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ರಲ್ಲಿ ಪಡೆದು  ಅಕ್ಟೊÃಬರ್ ೧೮ ರೊಳಗೆ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.                                             
======

ವ್ಯಕ್ತಿ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ವ್ಯಕ್ತಿ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ ಅ. ೦೪ (ಕರ್ನಾಟಕ ವಾರ್ತೆ): ಕೊಪ್ಪಳ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ  ಮಾರುತೆಪ್ಪ  ತಂದೆ ಭೀಮಪ್ಪ ಗುಂಡೂರ (೩೫) ವಾಲ್ಮಿÃಕಿ ಎಂಬ ವ್ಯಕ್ತಿಯು ಸೆಪ್ಟೆಂಬರ್ ೦೯ ರಂದು ಮಧ್ಯಾಹ್ನ ೦೧ ಗಂಟೆಯಿಂದ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಮುನಿರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯು ೫ ಅಡಿ ೨ ಇಂಚು ಎತ್ತರವಿದ್ದು, ಸಾದಾ ಕೆಂಪು ಮೈಬಣ್ಣ, ಸಾಧಾರಣಾ ಮೈಕಟ್ಟು, ದುಂಡು ಮುಖ, ದಪ್ಪ ಮೀಸೆಯ ಲಕ್ಷಣಗಳನ್ನು ಹೊಂದಿದ್ದು, ಕಾಣೆಯಾದಾಗ ಲುಂಗಿ, ಟಿ-ಶರ್ಟ್ ಧರಿಸಿದ್ದು ಕನ್ನಡ ಭಾಷೆ ಮಾತನಾಡುತ್ತಾನೆ. ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಜಿಲ್ಲಾ ಎಸ್. ಪಿ ಕಛೇರಿ ದೂ. ಸಂ: ೦೮೫೩೯-೨೩೦೧೧೧, ಕೊಪ್ಪಳ ಡಿ.ಎಸ್.ಪಿ ದೂ.ಸಂ: ೦೮೫೩೯-೨೩೦೪೩೨, ೯೪೮೦೮೦೩೭೨೦, ಕೊಪ್ಪಳ ಸಿ.ಪಿ.ಐ ಗ್ರಾಮೀಣ ವೃತ್ತ ದೂ.ಸಂ: ೦೮೫೩೯-೨೨೨೪೩೩, ೯೪೮೦೮೦೩೭೩೧, ಮುನಿರಾಬಾದ್ ಠಾಣೆ ಪಿ.ಎಸ್.ಐ ದೂ.ಸಂ: ೦೮೫೩೯-೨೭೦೩೩೩, ಕೊಪ್ಪಳ ಜಿಲ್ಲಾ ಕಂಟ್ರೊÃಲ್ ರೂಂ ದೂ.ಸಂ-೦೮೫೩೯-೨೩೦೨೨೨, ೧೦೦ ಇಲ್ಲಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಕೆಆರ್‌ಐಡಿಎಲ್ ಕಲಬುರಗಿ ವಲಯದ ಅಧೀಕ್ಷಕ ಅಭಿಯಂತರರಾಗಿ (ಹೆಚ್ಚುವರಿ) ಎಲ್. ಧನ್ಯಕುಮಾರ್ ಅಧಿಕಾರ ಸ್ವಿÃಕಾರ

ಕೆಆರ್‌ಐಡಿಎಲ್ ಕಲಬುರಗಿ ವಲಯದ ಅಧೀಕ್ಷಕ ಅಭಿಯಂತರರಾಗಿ (ಹೆಚ್ಚುವರಿ) ಎಲ್. ಧನ್ಯಕುಮಾರ್ ಅಧಿಕಾರ ಸ್ವಿÃಕಾರ

ಕೊಪ್ಪಳ ಅ.೦೪ (ಕರ್ನಾಟಕ ವಾರ್ತೆ): ಕರ್ನಾಟಕ ರೂರಲ್ ಇನ್‌ಫ್ರಾಸ್ಟçಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್  (ಹಿಂದಿನ ಹೆಸರು ಕರ್ನಾಟಕ ಭೂಸೇನಾ ನಿಗಮ ನಿಯಮಿತಿ) ಸಂಸ್ಥೆಯ ಕಲಬುರಗಿ ವಲಯದ ಅಧೀಕ್ಷಕ ಅಭಿಯಂತರರಾಗಿ (ಹೆಚ್ಚುವರಿ) ಎಲ್. ಧನ್ಯಕುಮಾರ್ ಬಿಇ.(ಸಿವಿಲ್) ಇವರು ಸೆಪ್ಟೆಂಬರ್ ೨೫ ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಅಧೀಕ್ಷಕ ಅಭಿಯಂತರರು, ಕೆಆರ್‌ಐಡಿಎಲ್, ಕಲಬುರಗಿ ವಲಯ, ಕಲಬುರಗಿ ಇವರಿಗೆ ಉದ್ದೆÃಶಿಲ್ಪಟ್ಟ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ರಹಸ್ಯ ಪತ್ರ ಮತ್ತು ಖಾಸಗಿ ಪತ್ರಗಳನ್ನು, ಎಲ್. ಧನ್ಯಕುಮಾರ್ ಬಿಇ.(ಸಿವಿಲ್), ಅಧೀಕ್ಷಕ ಅಭಿಯಂತರರು, ಕೆ.ಆರ್.ಐ.ಡಿ.ಎಲ್, ರಾಜಾಪೂರ-ಕುಸನೂರ ರಸ್ತೆ, ಕಲಬುರಗಿ- ೫೮೫೧೦೫, ಕಚೇರಿ ದೂ.ಸಂ-೦೮೪೭೨-೨೪೯೩೪೧,  ಮೊ.ಸಂ-೯೪೮೦೮೨೬೧೦೭  ವಿಳಾಸಕ್ಕೆ  ಕಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tuesday, 8 October 2019

೧೬ ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಿ: ಪ್ರಭಾರಿ ಅಪರ ಜಿಲ್ಲಾಧಿಕಾರಿ ಮಾರುತಿ

೧೬ ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಿ: ಪ್ರಭಾರಿ ಅಪರ ಜಿಲ್ಲಾಧಿಕಾರಿ ಮಾರುತಿ

ಕೊಪ್ಪಳ ಅ. ೦೪ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಅಕ್ಟೊÃಬರ್ ೧೪ ರಿಂದ ನವೆಂಬರ್ ೦೪ ರವರೆಗೆ ೧೬ ನೇ ಸುತ್ತಿನ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಮಾರುತಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪಶು ಸಂಗೋಪನಾ ಮತ್ತು ಪಶು ವೈದ್ಯಕೀಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾಲುಬಾಯಿ ರೋಗ ನಿಯಂತ್ರಣ ಜಿಲ್ಲಾ ನಿರ್ವಹಣಾ ಸಮಿತಿ ಹಾಗೂ ರಾಷ್ಟಿçÃಯ ಕೃತಕ ಗರ್ಭಧಾರಣೆ ಕಾರ್ಯಕ್ರಮದ ಜಿಲ್ಲಾ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಕಾಲು-ಬಾಯಿ ಲಸಿಕೆಗೆ ಒಳಪಡಿಸುವ ಒಟ್ಟು ೨,೭೨,೯೯೪ (ದನ, ಎಮ್ಮೆ ಮತ್ತು ಹಂದಿ) ಜಾನುವಾರುಗಳಿದ್ದು, ಗ್ರಾಮವಾರು ಹಾಗೂ ಬ್ಲಾಕ್ ವಾರು ಮೈಕ್ರೊÃಪ್ಲಾನ್ ಹಾಗೂ ತಂಡವಾರು ವೇಳಾಪಟ್ಟಿಯನ್ನು ಇಲಾಖೆ ತಯಾರಿಸಿದೆ. ಕೊಪ್ಪಳ -೦೬, ಗಂಗಾವತಿ-೦೭, ಕುಷ್ಟಗಿ-೦೫, ಯಲಬುರ್ಗಾ-೦೪ ರಂತೆ ಜಿಲ್ಲೆಯಲ್ಲಿ ಒಟ್ಟು ೨೨ ಲಸಿಕಾ ತಂಡಗಳನ್ನು ರಚಿಸಲಾಗಿದೆ. ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು ೨೨ ವಾಹನಗಳ ಅವಶ್ಯಕತೆ ಇದ್ದು ಈ ಕುರಿತು ರಾ.ಬ.ಕೊ ಹಾಲು ಒಕ್ಕೂಟ ಬಳ್ಳಾರಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಬೇಡಿಕೆಯನ್ವಯ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪೂರೈಸಲು ವ್ಯವಸ್ಥಾಪಕ ನಿರ್ದೇಶಕರು ಆದೇಶಿಸಿದ್ದಾರೆ. ಲಸಿಕಾ ಕಾರ್ಯಕ್ರಮಕ್ಕೆ ಸರಬರಾಜಾಗುವ ಲಸಿಕೆ ಹಾಗೂ ಸಿರಿಂಜ್ ಮತ್ತು ನೀಡಲ್ಸ್ಗಳನ್ನು ಸ್ವಿÃಕರಿಸುವ ಕುರಿತಾಗಿ ಸಮಿತಿಯನ್ನು ರಚಿಸುವಂತೆ ಸೂಚಿಸಿದರು.
ಆಕಾಶವಾಣಿ ಬಾನುಲಿ ಕೇಂದ್ರದಲ್ಲಿ ಲಸಿಕಾ ಅಭಿಯಾನ ಕುರಿತಂತೆ ಪ್ರಚಾರ ಕೈಗೊಳ್ಳಿ. ಲಸಿಕಾ ಅಭಿಯಾನದ ಪ್ರಚಾರಕ್ಕೆ ಕರ ಪತ್ರಗಳನ್ನು ಹಂಚಲು ಹಾಗೂ ಬ್ಯಾನರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಿ. ಸ್ಥಳೀಯ ದಿನ ಪತ್ರಿಕೆಗಳಲ್ಲಿ ಪ್ರಕಟಣೆಗಳನ್ನು ಹೊರಡಿಸಿ ವ್ಯಾಪಕ ಪ್ರಚಾರ ಕೈಗೊಳ್ಳಿ. ಪ್ರತಿ ಗ್ರಾಮದ ಗ್ರಾಮ ಪಂಚಾಯತಿಗೆ ಲಸಿಕೆಯ ೨ ದಿನದ ಮುಂಚಿತವಾಗಿ ತಿಳಿಸಿ ಗ್ರಾಮ ಪಂಚಾಯತ್ ವತಿಯಿಂದ ಡಂಗುರ ಅಥವಾ ಟಾಂ ಟಾಂ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಿ. ಆಯಾ ತಾಲ್ಲೂಕಿನ ವಿಸ್ತರಣಾ ಅಧಿಕಾರಿಗಳು, ಎಂ.ಪಿ.ಸಿ.ಎಸ್, ರೈತ ಸಂಪರ್ಕ ಕೇಂದ್ರ, ಸಂಘ-ಸಂಸ್ಥೆಗಳನ್ನು ಭೇಟಿ ಮಾಡಿ ಕಾಲು ಬಾಯಿ ಲಸಿಕಾ ಅಭಿಯಾನದ ಕುರಿತು ಜಾಗೃತಿ ಮೂಡಿಸಿ. ಲಸಿಕಾ ಕಾರ್ಯಕ್ರಮದಲ್ಲಿ ಜಾನುವಾರುಗಳಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾದಲ್ಲಿ ನಿಯಂತ್ರಣಕ್ಕಾಗಿ ಅವಶ್ಯವಿರುವ ಔಷಧಿಗಳ ದಾಸ್ತಾನಿಗೆ ಕ್ರಮ ವಹಿಸುವಂತೆ ಸೂಚಿಸಿದರು.
ಭಾರತ ಸರ್ಕಾರದ ನೂತನ ಕಾರ್ಯಕ್ರಮವಾದ ಕೃತಕ ಗರ್ಭಧಾರಣೆಯ ಮೂಲಕ ರಾಸುಗಳ ತಳಿ ಉನ್ನತೀಕರಣ ಕಾರ್ಯಕ್ರಮದ ಅನುಷ್ಠಾನದ ಕುರಿತು ಚರ್ಚಿಸಿದ ಅವರು ಈ ಕಾರ್ಯಕ್ರಮಕ್ಕಾಗಿ ಕೊಪ್ಪಳ ಜಿಲ್ಲೆಯಿಂದ ಈಗಾಗಲೇ ೧೦೦ ಗ್ರಾಮ/ ಗುಚ್ಚಗ್ರಾಮಗಳನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಗ್ರಾಮ/ ಗುಚ್ಚಗ್ರಾಮಗಳಲ್ಲಿ ವಿವಿಧ ತಳಿಯ ರಾಸುಗಳ ಸಂವರ್ಧನೆಗಾಗಿ ವಿವಿಧ ತಳಿಯ ವೀರ್ಯವನ್ನು ಬಳಸಬಹುದಾಗಿದ್ದು, ವಿವಿಧ ತಳಿಗಳ ವೀರ್ಯನಳಿಕೆಗಳ ವಿಶೇಷತೆಯನ್ನು ರಾಸುಗಳ ಮಾಲೀಕರಿಗೆ ತಿಳಿಸಿ. ಅದರಂತೆ ವೀರ್ಯನಳಿಕೆಗಳ ಬೇಡಿಕೆಯನ್ವಯ ಜಿಲ್ಲೆಯ ಒಟ್ಟಾರೆ ಬೇಡಿಕೆಯನ್ನು ಸಲ್ಲಿಸಬೇಕಾಗಿರುವುದರಿಂದ ಜಿಲ್ಲೆಯ ಒಟ್ಟಾರೆ ವೀರ್ಯ ನಳಿಕೆಗಳ ಬೇಡಿಕೆಯನ್ನು ನಿಗಧಿತ ಅನುಬಂಧದಲ್ಲಿ ಸಲ್ಲಿಸಬೇಕು. ಈ ಕಾರ್ಯಕ್ರಮಕ್ಕೆ ಕೃತಕ ಗರ್ಭಧಾರಣೆಯ ಸೌಲಭ್ಯವನ್ನು ಒದಗಿಸಲು ಪಶುಪಾಲನಾ ಇಲಾಖೆಯ ಸಿಬ್ಬಂದಿಗಳ ಜೊತೆಗೆ ಹಾಲು ಉತ್ಪಾದಕರ ಒಕ್ಕೂಟದ ಸಿಬ್ಬಂದಿ ಮತ್ತು ಮೈತ್ರಿ ಕಾರ್ಯಕರ್ತರನ್ನು ಒಳಗೊಂಡಂತೆ ಸಿಬ್ಬಂದಿಯನ್ನು ಗುರುತಿಸಿ ಗ್ರಾಮವಾರು ಪಟ್ಟಿಯನ್ನು ಅಂತಿಮಗೊಳಿಸಿ ಎಂದು ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೆÃಶಕ ಡಾ. ಬಸಯ್ಯ ಸಾಲಿ, ಜಂಟಿ ಕೃಷಿ ನಿರ್ದೆÃಶಕಿ ಶಬಾನ ಶೇಖ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಲಬುರಗಿ ವಿಭಾಗ ಮಟ್ಟದ ಕ್ರಿÃಡಾಕೂಟವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ: ಪ್ರಭಾರಿ ಅಪರ ಜಿಲ್ಲಾಧಿಕಾರಿ ಮಾರುತಿ

 ಕಲಬುರಗಿ ವಿಭಾಗ ಮಟ್ಟದ ಕ್ರಿÃಡಾಕೂಟವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ: ಪ್ರಭಾರಿ ಅಪರ ಜಿಲ್ಲಾಧಿಕಾರಿ ಮಾರುತಿ

ಕೊಪ್ಪಳ ಅ. ೦೪ (ಕರ್ನಾಟಕ ವಾರ್ತೆ): ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಲಕ/ಬಾಲಕಿಯರಿಗಾಗಿ ಖೋಖೋ, ಬಾಲ್ ಬ್ಯಾಡ್ಮಿಂಟನ್ ಹಾಗೂ ಹ್ಯಾಂಡ್‌ಬಾಲ್ ಕ್ರಿÃಡೆಗಳನ್ನು ಜಿಲ್ಲೆಯಲ್ಲಿ ಸಂಘಟಿಸಲಾಗುತ್ತಿದ್ದು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಚ್ಚುಕಟ್ಟಾಗಿ ತಮ್ಮ ಕರ್ತವ್ಯ ನಿರ್ವಹಿಸಿ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಮಾರುತಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಲಕ/ಬಾಲಕಿಯರಿಗಾಗಿ ಖೋಖೋ, ಬಾಲ್ ಬ್ಯಾಡ್ಮಿಂಟನ್ ಹಾಗೂ ಹ್ಯಾಂಡ್‌ಬಾಲ್ ಕ್ರಿÃಡೆಗಳನ್ನು ಸಂಘಟಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಕ್ರಿÃಡಾಕೂಟದಲ್ಲಿ ಕಲಬುರಗಿ ವಿಭಾಗದ ಆರು ಜಿಲ್ಲೆಗಳಿಂದ ಕ್ರಿÃಡಾಪಟುಗಳು ಭಾಗವಹಿಸುತ್ತಿದ್ದಾರೆ. ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಕ್ರಿÃಡಾಕೂಟಗಳು ನಡೆಯಲಿವೆ. ಅಕ್ಟೊÃಬರ್ ೧೨ ರಂದು ಖೋಖೋ ಕ್ರಿÃಡೆ ನಡೆಯಲಿದ್ದು, ಒಟ್ಟು ೨೪ ತಂಡಗಳು ಭಾಗವಹಿಸಲಿವೆ. ಈ ಕ್ರಿÃಡೆಗೆ ಭಾಗವಹಿಸುವ ತಂಡಗಳು ಅ. ೧೧ ರಂದು ನೋಂದಣಿ ಮಾಡಿಕೊಳ್ಳಬೇಕು. ಅ. ೧೩ ರಂದು ನಡೆಯುವ ಬಾಲ್ ಬ್ಯಾಡ್ಮಿಂಟನ್ ಕ್ರಿÃಡೆಗೆ ಒಟ್ಟು ೧೨ ತಂಡಗಳು ಭಾಗವಹಿಸಲಿದ್ದು, ಅ. ೧೨ ರಂದು ನೋಂದಣಿ ಮಾಡಿಕೊಳ್ಳಬೇಕು. ಅ. ೧೬ ರಂದು ಹ್ಯಾಂಡ್‌ಬಾಲ್ ಕ್ರಿÃಡೆ ನಡೆಯಲಿದ್ದು, ಒಟ್ಟು ೨೪ ತಂಡಗಳು ಭಾಗವಹಿಸಲಿವೆ. ಭಾಗವಹಿಸುವ ತಂಡಗಳು ಅ. ೧೫ ರಂದು ನೋಂದಣಿ ಮಾಡಿಕೊಳ್ಳಬೇಕು. ಹಾಗೆಯೇ ನವೆಂಬರ್ ೦೫ ಮತ್ತು ೦೬ ರಂದು ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಲಕ/ ಬಾಲಕಿಯರಿಗಾಗಿ ಹ್ಯಾಂಡಬಾಲ್ ಕ್ರಿÃಡೆಗಳು ನಡೆಯಲಿದ್ದು, ಈ ಕ್ರಿÃಡಾಕೂಟದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಿಂದ ಕ್ರಿÃಡಾಪಟುಗಳು ಭಾಗವಹಿಸುತ್ತಿದ್ದಾರೆ. ಬಾಲಕರ ೧೬ ತಂಡಗಳು ಹಾಗೂ ಬಾಲಕಿಯರ ೧೬ ತಂಡಗಳು ಕ್ರಿÃಡಾಕೂಟದಲ್ಲಿ ಭಾಗವಹಿಸಲಿವೆ. ಈ ಎರಡೂ ಕ್ರಿÃಡಾಕೂಟಗಳಲ್ಲಿ ಅಂದಾಜು ೧೪೦೦ ಕ್ರಿÃಡಾಪಟುಗಳು, ೨೩೦ ಕ್ಕೂ ಹೆಚ್ಚು ತಂಡದ ವ್ಯವಸ್ಥಾಪಕರು, ನಿರ್ಣಾಯಕರು ಸೇರಿದಂತೆ ಸುಮಾರು ೨ ಸಾವಿರಕ್ಕೂ ಹೆಚ್ಚು ಜನ  ಭಾಗವಹಿಸುತ್ತಾರೆ ಎಂದು ಅವರು ಮಾಹಿತಿ ನೀಡಿದರು.
ಭಾಗವಹಿಸುವ ಕ್ರಿÃಡಾಪಟುಗಳು, ತಂಡದ ವ್ಯವಸ್ಥಾಪಕರಿಗೆ ವಸತಿ ವ್ಯವಸ್ಥೆ, ಊಟ-ಉಪಹಾರದ ವ್ಯವಸ್ಥೆ, ಕ್ರಿÃಡಾಂಗಣಕ್ಕೆ ಕರೆದು ತರುವ ಮತ್ತು ಕರೆದೊಯ್ಯುವ ವ್ಯವಸ್ಥೆ ಸೇರಿದಂತೆ ಪ್ರತಿಯೊಂದು ಕಾರ್ಯವೂ ವ್ಯವಸ್ಥಿತವಾಗಿರಬೇಕು. ಕ್ರಿÃಡಾಪಟುಗಳು ಉಳಿದುಕೊಳ್ಳಲು ಅಗತ್ಯ ಮೂಲಭೂತ ಸೌಕರ್ಯಗಳಿರುವ ವಸತಿ ನಿಲಯದ ವ್ಯವಸ್ಥೆ ಮಾಡಬೇಕು. ತುರ್ತು ಆರೋಗ್ಯ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಸಾರಿಗೆ ವ್ಯವಸ್ಥೆಗಾಗಿ ವಿವಿಧ ಶಾಲೆಗಳ ಶಾಲಾ ವಾಹನಗಳನ್ನು ಬಳಸಿಕೊಳ್ಳಿ. ಈ ಎಲ್ಲ ಕಾರ್ಯಗಳಿಗೂ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ, ಕ್ರಿÃಡಾ ಇಲಾಖೆಯ ಅಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(ಫೋಟೋ ಕಳುಹಿಸಿದೆ)
======

ಮಹಾತ್ಮ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಾಜರಿರಲು ಸೂಚನೆ

ಮಹಾತ್ಮ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಾಜರಿರಲು ಸೂಚನೆ

ಕೊಪ್ಪಳ ಅ. ೦೧ (ಕರ್ನಾಟಕ ವಾರ್ತೆ): ಅಕ್ಟೊÃಬರ್. ೦೨ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾದ ``ಮಹಾತ್ಮ ಗಾಂಧಿ ಜಯಂತಿ'' ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ತಪ್ಪದೇ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
======

ಅ.೦೨ ರಂದು ಕೊಪ್ಪಳದಲ್ಲಿ ಗಾಂಧಿ ಜಯಂತಿ ಆಚರಣೆ

 ಅ.೦೨ ರಂದು ಕೊಪ್ಪಳದಲ್ಲಿ ಗಾಂಧಿ ಜಯಂತಿ ಆಚರಣೆ

ಕೊಪ್ಪಳ ಅ. ೦೧ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ದಿನಾಚರಣೆ ಅಂಗವಾಗಿ ಗಾಂಧೀಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೊÃಬರ್. ೦೨ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಪಾಲ್ಗೊಳ್ಳುವರು.  ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಭಾಗವಹಿಸುವರು. 
ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಭುರಾಜ ನಾಯಕ್ ಅವರು ಗಾಂಧೀಜಿಯವರ ಕುರಿತು ವಿಶೇಷ ಉಪನ್ಯಾಸ ನೀಡುವರು.  ಗಾಂಧೀಜಿಯವರ ಕುರಿತ ಸಾಕ್ಷö್ಯಚಿತ್ರ ಪ್ರದರ್ಶನ ಮತ್ತು ಸರ್ವಧರ್ಮ ಪ್ರಾರ್ಥನೆ, ಭಜನೆ ಕಾರ್ಯಕ್ರಮ ನಡೆಯಲಿದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಕೊಪ್ಪಳ ಸೆ. ೧೭ (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮಂಗಳವಾರದಂದು ಜಿಲ್ಲಾಡಳಿತ ಭವನದ ಆವಣರದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸಿದರು. 
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಶುಭಾಶಯಗಳನ್ನು ಕೋರಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಮಾತನಾಡಿ, ೩೭೧(ಜೆ) ಲಾಭ ಈ ಭಾಗದ ಎಲ್ಲಾ ಜನರಿಗೆ ಸಿಗಬೇಕು.  ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಎಲ್ಲರೂ ಶ್ರಮೀಸಬೇಕು. ಪ್ರತಿ ವರ್ಷ ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ೧೦೦ ಕೋಟಿ ಅನುದಾನ ಬರುತ್ತದೆ.  ಅದರ ಲಾಭ ಈ ಭಾಗದ ಜನ ಸಾಮಾನ್ಯರಿಗೆ ತಲುಪಿದಾಗ ಮಾತ್ರ ಸರ್ಕಾರದ ಯೋಜನೆಗಳಿಗೆ ಮಹತ್ವ ಬರುತ್ತದೆ.  ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಕ ಕಲ್ಯಾಣಾಧಿಕಾರಿ ಡಾ. ರಾಜಕುಮಾರ್ ಯರಗಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಜಿ. ಸುರೇಶ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸರಳವಾಗಿ ಜನರಿಗೆ ಮರಳು ಒದಗಿಸುವುದು ಸರ್ಕಾರದ ಗುರಿ : ಸಿ.ಸಿ ಪಾಟೀಲ

 ಸರಳವಾಗಿ ಜನರಿಗೆ ಮರಳು ಒದಗಿಸುವುದು ಸರ್ಕಾರದ ಗುರಿ : ಸಿ.ಸಿ ಪಾಟೀಲ

ಕೊಪ್ಪಳ ಸೆ. ೧೭ (ಕರ್ನಾಟಕ ವಾರ್ತೆ): ಪ್ರತಿಯೊಂದು ಜನರಿಗೆ ಮರಳು ಸುಲಲಿತವಾಗಿ ತಲುಪುವಂತೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
ಬಡವರು, ಸಾರ್ವಜನಿಕರು ಮನೆ  ಹಾಗೂ ಕಟ್ಟಡ ಕಟ್ಟಿಸಿಕೊಳ್ಳಲು ಸುಲಭವಾಗಿ ಮರಳು ಲಭ್ಯವಾಗುವಂತೆ ಮಾಡಲು ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇದರ ಜೊತೆ ಜೊತೆಗೆ ಸಾರ್ವಜನಿಕರಿಗೆ ಮರಳು ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕಿದೆ.  ಸರ್ಕಾರದ ಯಾವುದೇ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗಬಾರದು.  ಅಕ್ರಮ ಗಣಿ ಮತ್ತು ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಮೈನಿಂಗ್, ಕಂದಾಯ, ಅರಣ್ಯ ಹಾಗೂ ಪೊಲೀಸ್ ಇಲಾಖೆಯವರು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು.  ಮರಳು ಗಣಿಗಾರಿಕೆಯನ್ನು ಸುಗಮಗೊಳಿಸಲು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಕೊಪ್ಪಳ ಜಿಲ್ಲೆಯನ್ನು ಆದ್ಯತೆಯ ಮೇಲೆ ಪರಿಗಣಿಸಿದ್ದು, ಗಣಿಗಾರಿಕೆ ಮತ್ತು ಮರಳುಗಾರಿಕೆಯಲ್ಲಿ ಆದಷ್ಟು ಬೇಗನೆ ಪಾರದರ್ಶಕತೆ ತರಲು ಪ್ರಯತ್ನಿಸಲಾಗುತ್ತಿದೆ.  ಕಾನೂನು ಬಾಹೀರವಾಗಿ ಗಣಿ ಮತ್ತು ಮರಳು ಸಾಗಾಣಿಕೆ ಮಾಡುವವರ ವಿರುದ್ಧ ನಿರ್ಧಾಕ್ಷಿÃಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 
ರೈಲ್ವೆ ಹಾಗೂ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ಕೇಂದ್ರ ಸರ್ಕಾರದ ಕಾಮಗಾರಿಗಳು ಆಗಿರುವುದರಿಂದ.  ಈ ಎಲ್ಲಾ ಕಾಮಗಾರಿಗಳು ಅತೀ ದೊಡ್ಡ ಯೋಜನೆಗಳದ್ದಾಗಿವೆ.  ಈ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಇವುಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು. 
ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಮಾತನಾಡಿ, ಜಿಲ್ಲೆಯ ಗ್ರಾö್ಯನೇಟ್ ಉದ್ಯಮ ಸಂಕಷ್ಟದಲ್ಲಿದೆ ರಾಜ್ಯ ಸರ್ಕಾರದಿಂದ ಇದಕ್ಕೆ ಅನುಕೂಲವಾಗುವ ರೀತಿಯಲ್ಲಿ ಹೊಸದೊಂದು ಯೋಜನೆ ರೂಪಿಸುವಂತೆ ಕೇಳಿಕೊಂಡರು. 
ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ ಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶ್‌ಪಾಲ ಕ್ಷಿÃರಸಾಗರ, ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು. 
ಲಿಫ್ಟ್ ಉದ್ಘಾಟನೆ;
  ಕೊಪ್ಪಳ ಜಿಲ್ಲಾಡಳಿತ ಭವನಕ್ಕೆ ಬರುವ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಜಿಲ್ಲಾಧಿಕಾರಿ ಹಾಗೂ ಮೊದಲನೇ ಮಹಡಿಯ ಕಚೇರಿಗಳಿಗೆ ಭೇಟಿಗೆ ಅನುಕೂಲವಾಗಲು ಜಿಲ್ಲಾಡಳಿತ ಭವನದಲ್ಲಿ ಸ್ಥಾಪಿಸಲಾದ ಲಿಫ್ಟ್ನ್ನು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ ಅವರು ವಿಕಲಚೇತನ ಯುವತಿಯಿಂದ ಉದ್ಘಾಟಿಸಿದರು.  ಇದೇ ಸಂದರ್ಭದಲ್ಲಿ  ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ್, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 
(ಫೋಟೋ ಕಳುಹಿಸಿದೆ)   

ಸಹಕಾರ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸಹಕಾರ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಸೆ. ೧೯ (ಕರ್ನಾಟಕ ವಾರ್ತೆ): ಕೊಪ್ಪಳ ಸಹಕಾರ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ “ಸಹಕಾರ ರತ್ನ” ಪ್ರಶಸ್ತಿಗಾಗಿ ಅರ್ಹ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರವು ಶ್ರೆÃಷ್ಠ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ ಶಿಫಾರಸ್ಸು ಮಾಡುವ ಬಗ್ಗೆ ಅಧ್ಯಕ್ಷರು ಆರ್.ಡಿ.ಸಿ.ಸಿ. ಬ್ಯಾಂಕ್ ನಿ. ರಾಯಚೂರು ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿರುತ್ತದೆ. ಆ ಪ್ರಕಾರ ೨೦೧೯ ನೇ ಸಾಲಿಗೆ ಪ್ರಶಸ್ತಿಗೆ ಅರ್ಹರಾದ ಸಹಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. 
ಸೆಪ್ಟೆಂಬರ್ ೩೦ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದ್ದು, ಸಹಕಾರ ಕ್ಷೆÃತ್ರದಲ್ಲಿ ಕನಿಷ್ಠ ೧೦ ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ, ಕೊಪ್ಪಳ ಜಿಲ್ಲೆಯಲ್ಲಿರುವ  ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೆÃತ್ರದಲ್ಲಿ ಸೇವೆ  ಸಲ್ಲಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಹಕಾರ ಸಂಘಗಳ ಉಪನಿಬಂಧಕರು, ಕೊಪ್ಪಳ ಇವರಿಗೆ ಅರ್ಜಿ ಸಲ್ಲಿಸಬೇಕು ಎಂದು ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕ ಎಸ್.ಕೆ.ಸಿದ್ನೆಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಮಾರ್ಗಸೂಚಿಯನ್ವಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿ : ಡಿ.ಸಿ

ಮಾರ್ಗಸೂಚಿಯನ್ವಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿ : ಡಿ.ಸಿ

ಕೊಪ್ಪಳ ಸೆ. ೧೯ (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ  ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳಿಗೆ ಅರ್ಜಿಗಳು ಸ್ವಿÃಕೃತಿಯಾಗಿದ್ದು, ಮಾರ್ಗಸೂಚಿಯನ್ವಯ ನೇಮಕಾತಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. 
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ೨೨ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೮೫ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಜುಲೈ ೩೧ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈ ಪ್ರಕ್ರಿಯೆಯಲ್ಲಿ ೨೨ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ೧೫೭೫ ಹಾಗೂ ೮೫ ಸಹಾಯಕಿಯರ ಹುದ್ದೆಗಳಿಗೆ ೧೧೮೫ ಅರ್ಜಿಗಳನ್ನು ಸ್ವಿÃಕರಿಸಲಾಗಿದೆ.  
ಸ್ವಿÃಕೃತಿಯಾದ ಎಲ್ಲ ಅರ್ಜಿಗಳ ಪರಿಶೀಲನೆ ಮಾಡಲಾಗುತ್ತಿದ್ದು, ನೇಮಕಾತಿ ಪ್ರಕ್ರ‍್ರಿಯೆಯು ಪಾರದರ್ಶಕತೆಯಿಂದ ಕೂಡಿರುತ್ತದೆ. ಸರ್ಕಾರಿ ಮಾರ್ಗಸೂಚಿಯನ್ವಯ ನಿಗದಿಪಡಿಸಿದ ಆದ್ಯತೆಗಳಿಗನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಆಯ್ಕೆ ಸಮಿತಿ ಅನುಮೋದನೆ ಮೇರೆಗೆ ಆಯ್ಕೆ ಮಾಡಲಾಗುತ್ತದೆ.  ಈ ಕುರಿತು ಯಾವುದೇ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ.  ಈ ಮಧ್ಯ ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ಅರ್ಜಿದಾರರನ್ನು ನಂಬಿಸಿ, ಹಣದ ಬೇಡಿಕೆ ಇಡುತ್ತಿರುವುದಾಗಿ ಕೆಲವು ಸಾರ್ವಜನಿಕರಿಂದ ಊಹಾಪೋಹದ ಮಾತು ಕೇಳಿ ಬರುತ್ತಿವೆ.  ಇಂತಹ ಯಾವುದೇ ಮಾತುಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಒಂದು ವೇಳೆ ಹಣದ ಆಮೀಷಕ್ಕೆ ಸಾರ್ವಜನಿಕರು ಮತ್ತು ಅರ್ಜಿದಾರರು ಒಳಗಾದಲ್ಲಿ ಅದಕ್ಕೆ ಇಲಾಖೆಯು ಯಾವುದೇ ರೀತಿಯ ಹೊಣೆಯಲ್ಲ ಎಂದು ಸೂಚಿಸಿದ್ದಾರೆ.  
ನೇಮಕಾತಿ ಪ್ರಕ್ರಿಯೆಯು ಪಾರದರ್ಶಕತೆಯಿಂದ ಕೂಡಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸಲ್ಲಿಸಿದ ದಾಖಲೆಗಳಿಗನುಸಾರ ನಿಗದಿಪಡಿಸಿದ ಮೀಸಲಾತಿ, ವಯೋಮೀತಿ, ವಾಸಸ್ಥಳ, ವಿದ್ಯಾರ್ಹತೆ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.  ಆದ್ದರಿಂದ ಸಾರ್ವಜನಿಕರು ಮಧ್ಯವರ್ತಿಗಳ ಯಾವುದೇ ಹಣದ ಆಮೀಷಕ್ಕೆ ಒಳಗಾಗದಿರಲು ಪ್ರಕಟಣೆಯಲ್ಲಿ ತಿಳಿಸಿದೆ. 
======

ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ : ಹೆಸರು ನೋಂದಾಯಿಸಿ

ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ : ಹೆಸರು ನೋಂದಾಯಿಸಿ

ಕೊಪ್ಪಳ ಸೆ. ೧೯ (ಕರ್ನಾಟಕ ವಾರ್ತೆ): ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇವರ ವತಿಯಿಂದ ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರವನ್ನು ಅಕ್ಟೊÃಬರ್ ತಿಂಗಳಿಂದ ಆಯೋಜಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತ ರೈತರು ಹೆಸರನ್ನು ನೋಂದಾಯಿಸಿಕೊಳ್ಳಬಹುದು. 
ಈ ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ.  ಭಾಗವಹಿಸುವ ಅಭ್ಯರ್ಥಿಗಳು ೧೮ ರಿಂದ ೫೫ ವರ್ಷ ವಯೋಮಿತಿಯಲ್ಲಿರಬೇಕು.  ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ಈ ಶಿಬಿರದಲ್ಲಿ ಭಾಗವಹಿಸಬಹುದು.  ಆಸಕ್ತರು ಮೊ.ಸಂ; ೯೪೮೨೬೩೦೭೯೦ ಕ್ಕೆ ಕರೆ ಮಾಡಿ ಸೆಪ್ಟೆಂಬರ್. ೩೦ ರೊಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕು.
ತರಬೇತಿ ಕೇಂದ್ರದ ವಿಳಾಸ;
  ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೆಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ-೫೮೭೧೦೨. ಹೆಚ್ಚಿನ ಮಾಹಿತಿಗಾಗಿ ದೂ.ಸಂ: ೦೮೩೫-೨೪೪೦೨೮, ೨೪೪೦೪೮ ಕ್ಕೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ನೆರೆಹಾವಳಿ ಗ್ರಾಮಗಳಿಗೆ ಹೆಚ್ಚುವರಿ ಅನುದಾನ : ಮುಖ್ಯ ಮಂತ್ರಿಗಳ ಭೇಟಿಗೆ ನಿರ್ಧಾರ

 ನೆರೆಹಾವಳಿ ಗ್ರಾಮಗಳಿಗೆ ಹೆಚ್ಚುವರಿ ಅನುದಾನ : ಮುಖ್ಯ ಮಂತ್ರಿಗಳ ಭೇಟಿಗೆ ನಿರ್ಧಾರ

ಕೊಪ್ಪಳ ಸೆ. ೧೯ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ  ನೆರೆಹಾವಳಿಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಹೆಚ್ಚುವರಿ ಅನುದಾನದ ಬಿಡುಗಡೆ ಸಂಬಂಧ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸರ್ವ ಸದಸ್ಯರನ್ನೊಳಗೊಂಡ ಸರ್ವಪಕ್ಷ ನಿಯೋಗದ ಜೊತೆಗೆ ಮುಖ್ಯ ಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ರವರನ್ನು ಸೆಪ್ಟೆಂಬರ್. ೨೦ ರಂದು ಭೇಟಿ ಮಾಡಲು ತೀರ್ಮಾನಿಸಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.  

ಪ್ರತಿಯೊಬ್ಬರಿಗೆ ಆರೋಗ್ಯ ಸೇವೆಗಳನ್ನು ಪಡೆಯುವ ಹಕ್ಕುಗಳಿವೆ : ಟಿ. ಶ್ರಿÃನಿವಾಸ್

ಪ್ರತಿಯೊಬ್ಬರಿಗೆ ಆರೋಗ್ಯ ಸೇವೆಗಳನ್ನು ಪಡೆಯುವ ಹಕ್ಕುಗಳಿವೆ : ಟಿ. ಶ್ರಿÃನಿವಾಸ್

ಕೊಪ್ಪಳ ಸೆ. ೦೯ (ಕರ್ನಾಟಕ ವಾರ್ತೆ): ಈ ಸಮಾಜದಲ್ಲಿ ಬದುಕಲು ಪ್ರತಿಯೊಬ್ಬರಿಗೆ ಆರೋಗ್ಯ ಸೇವೆಗಳನ್ನು ಪಡೆಯುವ ಹಕ್ಕುಗಳು ಇರುತ್ತವೆ. ಇವುಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಟಿ. ಶ್ರಿÃನಿವಾಸ್ ರವರು ಹೇಳಿದರು.  
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ನಗರಸಭೆ ಇವರ ಸಹಯೋಗದಲ್ಲಿ ನಗರದ ಹಮಾಲರ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಇಂದು (ಸೆ.೦೯) ಹಮ್ಮಿಕೊಳ್ಳಲಾದ ‘’ಪೋಷಣಾ ಅಭಿಯಾನ’’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ಹಳ್ಳಿಗಳ ದೇಶ ಹಳ್ಳಿಗಳ ಅಭಿವೃದ್ಧಿ ದೇಶದ ಅಭಿವೃದ್ಧಿಯಾಗಿದೆ. ಹಳ್ಳಿಗಳಲ್ಲಿ ವಾಸಿಸುವ ಪ್ರತಿಯೊಬ್ಬರ ಆರೋಗ್ಯ ಹಾಗೂ ವಿಶೇಷವಾಗಿ ಗರ್ಭಿಣಿಯರು, ಕಿಶೋರಿಯರು ಹಾಗೂ ೦೫ ವರ್ಷದೊಳಗಿನ ಮಕ್ಕಳ ಆರೊಗ್ಯ ಬಹಳ ಮುಖ್ಯವಾಗಿದೆ. ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬರು ಆರೊಗ್ಯವಂತರಾಗಿರ ಬೇಕಾದರೆ ಪೌಷ್ಠಿಕ ಆಹಾರ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಜನಸಮುದಾಯಕ್ಕೆ ಪ್ರತಿದಿನ ಆಹಾರದಲ್ಲಿ ಕಾರ್ಬೊÃಹೈಡ್ರೆಟ್, ಪ್ರೊÃರ್ಟಿನ್, ಕೊಬ್ಬು, ವಿಟಮಿನ್ಸ್ ಮತ್ತು ಮಿನರಲ್ಸ್ ಎಲ್ಲಾ ಬಗೆಯ ಸೊಪ್ಪು ಮತ್ತು ಹಸಿರು ತರಕಾರಿಗಳು, ಹಣ್ಣುಗಳು ಮತ್ತು ಹಾಲಿನ ಉತ್ಪನ್ನಗಳು, ಮೊಟ್ಟೆ, ಮೀನು ಮುಂತಾದ ಆಹಾರ ಪದಾರ್ಥಗಳನ್ನು ಸೇವಿಸುವಂತೆ ಮಾಹಿತಿ ನೀಡಿದರು. ತಾಯಿಂದಿರಲ್ಲಿ, ಗರ್ಭಿಣಿಯರಲ್ಲಿ ಮತ್ತು ಮಕ್ಕಳಲ್ಲಿ ರಕ್ತ-ಹೀನತೆ ತಡೆಗಟ್ಟುವ ಸಲುವಾಗಿ ಪ್ರತಿದಿನ ಸ್ಥಳೀಯವಾಗಿ ದೊರಕುವ ಆಹಾರ ಪದಾರ್ಥಗಳನ್ನು ಬಳಸಿ ಅಪೌಷ್ಠಿಕತೆಯನ್ನು ತಡೆಗಟ್ಟಿಬೇಕು.  ಈ ಸಮಾಜದಲ್ಲಿ ಬದುಕಲು ಪ್ರತಿಯೊಬ್ಬರಿಗೆ ಆರೋಗ್ಯ ಸೇವೆಗಳನ್ನು ಪಡೆಯುವ ಹಕ್ಕುಗಳು ಇರುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಟಿ. ಶ್ರಿÃನಿವಾಸರವರು ಹೇಳಿದರು.
ಕೊಪ್ಪಳ ನಗರ ಸಭೆ ಸದಸ್ಯ ಅಮಜದ್ ಪಟೇಲ್ ರವರು ಮಾತನಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯವರು ಹಮ್ಮಿಕೊಳ್ಳುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೊಪ್ಪಳ ನಗರ ಪ್ರದೇಶದ ಕೊಳಚೆ ಪ್ರದೇಶ ಜನರು ಹಾಗೂ ಇತರ ಪ್ರದೇಶದ ಸಾರ್ವಜನಿಕರು ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ ಜಂಬಯ್ಯ ಮಾತನಾಡಿ, ಸಮತೋಲನ ಆಹಾರ ಹೇಗೆ ಪಡೆಯಬೇಕು ವಿಟಮಿನ್ ಮತ್ತು  ಮಿನಿರಲ್ಸ್ನಲ್ಲಿ ಕೊಬ್ಬು, ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಯಾವ ಯಾವ ಪೋಷ್ಠಿಕಾಂಶ ದೊರೆಯುತ್ತವೆ ವಿಶೇಷವಾಗಿ ರಕ್ತಹೀನತೆ ತಡೆಗಟ್ಟುವ ಆಹಾರವನ್ನು ಹೆಚ್ಚು ಸೇವಿಸುವಂತೆ ತಿಳಿಸಿದರು. ಈ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಶೇಷವಾಗಿ ‘’ಮಗುವಿನ ಜನನ ನಂತರ ೧೦೦೦ ದಿನಗಳ ಆರೋಗ್ಯ ರಕ್ಷಣೆ, ಅನಿಮಿಯಾ ಮುಕ್ತ ಭಾರತ್, ಅತಿಸಾರ ಬೇಧಿ ನಿಯಂತ್ರಣ, ನೀರು ಮತ್ತು ನೈರ್ಮಲ್ಯ ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ’’. ಇವುಗಳಿಗೆ ಹೆಚ್ಚು ಮಹತ್ವ ನೀಡಿ ಕಾರ್ಯಕ್ರಮದ ಬಗ್ಗೆ ಆರೋಗ್ಯ ಸಹಾಯಕರು, ಆರೋಗ್ಯ ಶಿಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಸಮುದಾಯದ ಜನರಿಗೆ ಮನನ ಮಾಡಬೇಕು ಎಂದರು.
ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾತೃ ಪೂರ್ಣ ಯೋಜನೆ ಹಾಗೂ ಇಲಾಖೆಯ ಸೌಲಭ್ಯ ಕುರಿತು ಉಪ ನಿರ್ದೆÃಶಕ ಈರಣ್ಣ ಪಾಂಚಾಳ ರವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಎಸ್ ಯರಗಲ್ಲ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಲಿಂಗರಾಜು ಟಿ,  ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕ ಆರೋಗ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವೈಧ್ಯಾಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು, ಐ.ಸಿ.ಡಿ.ಎಸ್ ಇಲಾಖೆಯ ಮೇಲ್ವಿಚಾರಕರು, ಹಿರಿಯ , ಕಿರಿಯ ಆರೋಗ್ಯ ಸಹಾಯಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ಕಿಶೋರಿಯರು, ತಾಯಂದಿರು, ಇಲಾಖೆಯ ಸಿಬ್ಬಂದಿಗಳು ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಗಂಗಾವತಿ; ಸೆ.೧೧ ರಂದು “ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ” ಕಾರ್ಯಕ್ರಮ ನೇರ ಪ್ರಸಾರ

ಗಂಗಾವತಿ; ಸೆ.೧೧ ರಂದು “ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ” ಕಾರ್ಯಕ್ರಮ ನೇರ ಪ್ರಸಾರ

ಕೊಪ್ಪಳ ಸೆ. ೦೯ (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ವತಿಯಿಂದ ಕೇಂದ್ರ ವಲಯದ ಕಾರ್ಯಕ್ರಮಗಳಾದ “ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ” ಮತ್ತು ರಾಷ್ಟಿçÃಯ ಕೃತಕ ಗರ್ಭದಾರಣ ಕಾರ್ಯಕ್ರಮದ ನೇರ ಪ್ರಸಾರವನ್ನು ಸೆಪ್ಟೆಂಬರ್. ೧೧ ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. 
ಭಾರತ ಸರ್ಕಾರದ ವತಿಯಿಂದ ಕೇಂದ್ರ ವಲಯದ ಕಾರ್ಯಕ್ರಮಗಳಾದ “ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ” ಮತ್ತು ರಾಷ್ಟಿçÃಯ ಕೃತಕ ಗರ್ಭದಾರಣ ಕಾರ್ಯಕ್ರಮವನ್ನು  ಸೆಪ್ಟೆಂಬರ್. ೧೧ ರಂದು ದೇಶಾದ್ಯಂತ ಪ್ರಾರಂಭಿಸಲು ನಿರ್ಣಯಿಸಲಾಗಿದೆ. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶ ರಾಜ್ಯದ ಮಥುರಾದಲ್ಲಿ ಪ್ರಧಾನ ಮಂತ್ರಿಗಳು, ಭಾರತ ಸರ್ಕಾರ ಉದ್ಘಾಟನೆ ಮಾಡಿ, ರೈತರನ್ನು ಉದ್ದೆÃಶಿಸಿ ಮಾತನಾಡಲಿದ್ದಾರೆ, ದೇಶದ ಎಲ್ಲಾ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಕಾರ್ಯಕ್ರಮದ ನೇರಪ್ರಸಾರ ವ್ಯವಸ್ಥೆ ಮಾಡಲಾಗುತ್ತಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.  
ಕಾರ್ಯಕ್ರಮದಲ್ಲಿ ತಜ್ಞರಿಂದ ಜಾನುವಾರು ರೋಗಗಳ ನಿಯಂತ್ರಣ ಹಾಗೂ ಕೃತಕ ಗರ್ಭದಾರಣೆ ಕುರಿತು ರೈತರುಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.  ಈ ಕಾರ್ಯಕ್ರಮದಲ್ಲಿ ಸಂಸತ ಸದಸ್ಯರು, ಕೊಪ್ಪಳ ಜಿಲ್ಲೆಯ ಎಲ್ಲಾ ಶಾಸಕರುಗಳು, ಅದ್ಯಕ್ಷರು, ಜಿಲ್ಲಾ ಪಂಚಾಯತ್, ಕೊಪ್ಪಳ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕೊಪ್ಪಳ ಜಿಲ್ಲಾ ಪಂಚಾಯತ್ ಹಾಗೂ ಎಲ್ಲಾ ಸ್ಥಳೀಯ  ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಆಸಕ್ತ ರೈತರುಗಳು ಈ ಕಾರ್ಯಕ್ರಮಕ್ಕೆ ಹಾಜರಾಗಿ ಪ್ರಯೋಜನ ಪಡೆದುಕೊಳ್ಳುವಂತೆ ಕೊಪ್ಪಳ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೆÃಶಕರು ಡಾ.ಬಸಯ್ಯ ಸಾಲಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಸಮುದಾಯಗಳ ಪರಿಶಿಷ್ಟರಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ

ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಸಮುದಾಯಗಳ ಪರಿಶಿಷ್ಟರಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ

ಕೊಪ್ಪಳ ಸೆ. ೦೯ (ಕರ್ನಾಟಕ ವಾರ್ತೆ): ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಕೊಪ್ಪಳ ವತಿಯಿಂದ ಅಲೆಮಾರಿ/ ಅರೆ ಅಲೆಮಾರಿ/ಸೂಕ್ಷö್ಮ ಸಮುದಾಯಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಜಿಲ್ಲಾ ಕಛೇರಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮಿÃಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ಅಧಿನಗಳಲ್ಲಿ ಇರುವ ಅಲೆಮಾರಿ ಅಭಿವೃದ್ಧಿ ಕೋಶದಿಂದ ವಿವಿಧ ಯೋಜನೆಗಳಿಗೆ ಸಹಾಯಧನ/ ಸಾಲ ಸೌಲಭ್ಯ ಕಲ್ಪಿಸುವ ಉದ್ದೆÃಶ ದಿಂದ ೨೦೧೭-೧೮ ಹಾಗೂ ೨೦೧೮-೧೯ ನೇ ಸಾಲಿನಲ್ಲಿ ಸ್ವಯಂ ಉದ್ಯೊÃಗ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಮನೆ ನಿರ್ಮಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಅಲೆಮಾರಿ/ ಅರೆ ಅಲೆಮಾರಿ/ಸೂಕ್ಷö್ಮ ಸಮುದಾಯಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 
ಅಲೆಮಾರಿ/ ಅರೆ ಅಲೆಮಾರಿ/ಸೂಕ್ಷö್ಮ ಸಮುದಾಯಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಭೂ ಒಡೆತನ ಮತ್ತು ಗಂಗಾಕಲ್ಯಾಣ ಯೋಜನೆ ಈ ಎರಡು ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದು.  ಸ್ವಯಂ ಉದ್ಯೊÃಗ ಮತ್ತು ಉದ್ಯಮಶೀಲತಾ ಯೋಜನೆಯಡಿಯಲ್ಲಿ ಒಂದು ಕುಟುಂಬದ ಒಬ್ಬ ಸದಸ್ಯರು ಒಂದು ಬಾರಿ ಸಹಾಯಧನ ಮತ್ತು ಮಾರ್ಜಿನ್ ಮನಿ ಪಡೆಯಲು ಮಾತ್ರ ಅರ್ಹರಿರುತ್ತಾರೆ. ಪರಿಶಿಷ್ಟ ಜಾತಿಗೆ ಸೇರಿದ ಅಲೆಮಾರಿ/ ಅರೆ ಅಲೆಮಾರಿ/ಸೂಕ್ಷö್ಮ ಸಮುದಾಯಗಳಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತಿ ವತಿಯಿಂದ ಒದಗಿಸಲಾಗುವುದು.  ಪರಿಶಿಷ್ಟ ಪಂಗಡಕ್ಕೆ ಸೇರಿ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷö್ಮ  ಮತ್ತು ಅತಿ ಸೂಕ್ಷö್ಮ ಸಮುದಾಯಗಳಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕರ್ನಾಟಕ ಮಹರ್ಷಿ ವಾಲ್ಮಿÃಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತಿ ವತಿಯಿಂದ ಒದಗಿಸಲಾಗುವುದು. 
ಅರ್ಜಿ ಸಲ್ಲಿಸಲು  ಸೆಪ್ಟೆಂಬರ್ ೨೫  ಕೊನೆ ದಿನವಾಗಿದ್ದು, ಅರ್ಜಿಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಜಿಲ್ಲಾ ಕಛೇರಿ, ಜಿಲ್ಲಾಡಳಿತ ಭವನ ೨ನೇ ಮಹಡಿ ಇವರಿಂದ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳಾದ ಜಾತಿ ಪ್ರಮಾಣ ಪತ್ರ, ವಾಸದ ದೃಡೀಕರಣ ಪತ್ರ, ಆದಾಯ ಪ್ರಮಾಣ ಪತ್ರ,ಆಧಾರ ಕಾರ್ಡ್, ಪಡಿತರ ಚೀಟಿಯೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತಿ, ಕೊಠಡಿ ಸಂಖ್ಯೆ:೧೦೯, ಕೊಪ್ಪಳ ಜಿಲ್ಲಾಡಳಿತ ಭವನ, ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ೦೮೫೩೩೯-೨೨೧೧೭೬ ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸದೆ. 
======

ಕುಕನೂರ ಬೀದಿ-ಬದಿ ವ್ಯಾಪಾರಿಗಳ ತಾತ್ಕಾಲಿಕ ಮತದಾರರ ಪಟ್ಟಿ ಪ್ರಕಟ : ಆಕ್ಷೆÃಪಣೆಗೆ ಆಹ್ವಾನ

ಕುಕನೂರ ಬೀದಿ-ಬದಿ ವ್ಯಾಪಾರಿಗಳ ತಾತ್ಕಾಲಿಕ ಮತದಾರರ ಪಟ್ಟಿ ಪ್ರಕಟ : ಆಕ್ಷೆÃಪಣೆಗೆ ಆಹ್ವಾನ

ಕೊಪ್ಪಳ ಸೆ. ೦೯ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಕನೂರ ಪಟ್ಟಣ ಪಂಚಾಯತ್ ವ್ಯಾಪ್ತಿಯ ನೋಂದಾಯಿತ ಬೀದಿ-ಬದಿ ವ್ಯಾಪಾರಿಗಳ ತಾತ್ಕಾಲಿಕ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೆÃಪಣೆಗೆ ಆಹ್ವಾನಿಸಲಾಗಿದೆ. 
ಬೀದಿ-ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರದ ನಿಯಂತ್ರಣ) ನಿಯಮಗಳು-೨೦೧೯ ನ್ನು ಡೇ-ನಲ್ಮ್ ಯೊಜನೆಯಡಿ ಅನುಷ್ಠಾನಗೊಳಿಸುವ ಸಂಬಂಧ ಕುಕನೂರ ಪಟ್ಟಣದ ವ್ಯಾಪ್ತಿಯ ನೋಂದಾಯಿತ ಬೀದಿ-ಬದಿ ವ್ಯಾಪಾರಿಗಳ ತಾತ್ಕಾಲಿಕ ಮತದಾರರ ಪಟ್ಟಿಯನ್ನು ಪಟ್ಟಣ ಪಂಚಾಯತ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.  ಈ ಪಟ್ಟಿ ಕುರಿತು ಯಾವುದೇ ಆಕ್ಷೆÃಪಣೆಗಳಿದ್ದಲ್ಲಿ ಸೆಪ್ಟೆಂಬರ್. ೨೦ ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಸೆ. ೨೩ ರಂದು ಬೀದಿ-ಬದಿ ವ್ಯಾಪಾರಿಗಳ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.  ಹೆಚ್ಚಿನ ಮಾಹಿತಿಗಾಗಿ ಸಮುದಾಯ ಸಂಘಟನಾಧಿಕಾರಿ ಶಿವಕುಮಾರ ಕಟ್ಟಿಮನಿ, ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಕುಕನೂರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ