Sunday, 17 November 2019

ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಲ್ಲಿ ಯಾರೇ ನಿರ್ಲಕ್ಷö್ಯ ವಹಿಸಿದರೂ ಸಹಿಸುವುದಿಲ್ಲ : ಕೆ.ಎಸ್. ಈಶ್ವರಪ್ಪ


ಕೊಪ್ಪಳ ನ. 04 (ಕರ್ನಾಟಕ ವಾರ್ತೆ): ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಲ್ಲಿ ಯಾರೇ ನಿರ್ಲಕ್ಷö್ಯ ವಹಿಸಿದರೂ ಸಹಿಸುವುದಿಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಶಿಸ್ತು ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಎಸ್. ಈಶ್ವರಪ್ಪರವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
          ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಗ್ರಾಮೀಣ ಭಾಗದ ಜನರಿಗೆ ನೀರನ್ನು ಒದಗಿಸುವ ಮಹತ್ತರ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ ಯೋಜನೆಯ ಅನುಷ್ಠಾನ ಸಮರ್ಪಕವಾಗಿ ಆಗಿಲ್ಲ. ಇದಕ್ಕೆ ಸೂಕ್ತ ಕಾರಣಗಳೊಂದಿಗೆ ವರದಿ ಸಲ್ಲಿಸಿ. ಯೋಜನೆಯ ವಿನ್ಯಾಸವೇ ಅಸಮರ್ಪಕವಾಗಿದ್ದು, ಇದರಲ್ಲಿ ಅಧಿಕಾರಿಗಳ ಲೋಪವೂ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಯೋಜನೆಯ ಅನುಷ್ಠಾನಕ್ಕೆ ಶೀಘ್ರ ಕ್ರಮ ಕೈಗೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
            ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಿರುವ 204 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 118 ಘಟಕಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ಘಟಕಗಳು ಸ್ಥಗಿತಗೊಂಡಿರುವ ಕುರಿತು ಜಿಲ್ಲಾ ಪಂಚಾಯತ ಸದಸ್ಯರು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಪ್ರಸ್ತುತ ಕಾರ್ಯನಿರ್ವಣೆಯ ವಾಸ್ತವಾಂಶವುಳ್ಳ ಮಾಹಿತಿಯನ್ನು 15 ದಿನಗಳಲ್ಲಿ ಸಲ್ಲಿಸಬೇಕು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಪರಿಶೀಲಿಸಬೇಕು. ಮಾತ್ರವಲ್ಲದೆ ಜಿಲ್ಲಾ ಪಂಚಾಯತ್ ಸದಸ್ಯರು ತಮ್ಮ ಕ್ಷೇತ್ರದಲ್ಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕುಡಿಯುವ ನೀರನ್ನು ಒದಗಿಸುವಲ್ಲಿ ವಿಫಲರಾದ ಅಧಿಕಾರಿ ಹಾಗೂ ಗುತ್ತಿಗೆದಾರರು ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
           ಜಿಲ್ಲೆಯಲ್ಲಿ ಸರ್ಕಾರದಿಂದ ಅನುಮೋದನೆಗೊಂಡ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಕೆಲ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ ಮತ್ತು ಗ್ರಾಮೀಣ ನೀರು ಸರಬರಾಜು ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿರಬಹುದು. ಆದ್ದರಿಂದ ಈ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಕಾರ್ಯಗಳನ್ನು ಹಂಚಿಕೆ ಮಾಡಲಾಗುತ್ತದೆ. ಈ ಕುರಿತು ಶೀಘ್ರದಲ್ಲಿಯೇ ಸರ್ಕಾರದಿಂದ ಸುತ್ತೋಲೆ ಹೊರಡಿಸಲು ಕ್ರಮಕೈಗೊಳ್ಳಲಾಗುವುದು. ಆದರೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಈಗಾಗಲೇ ವಹಿಸಿಕೊಂಡಿರುವ ಹೆಚ್ಚುವರಿ ಜವಾಬ್ದಾರಿಯನ್ನು ಮುಂದುವರೆಸಿ ಮತ್ತು ನಿಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಿ ಎಂದು ಅವರು ತಿಳಿಸಿದರು.
ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಕೇವಲ ಸಚಿವರ ಸಭೆ ಎಂದು ಅಂದಾಜು ಮಾಹಿತಿ ಸಿದ್ಧಪಡಿಸದೆ, ವಾಸ್ತವಾಂಶಗಳನ್ನು ಪರಿಶೀಲಿಸಿ ವರದಿ ನೀಡಬೇಕು. ಹಾಗೆಯೇ ಎಲ್ಲ ಚುನಾಯಿತ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವ ವೇಳೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ. ಆ ಸ್ಥಳದಲ್ಲಿಯೇ ಸಂಬAಧಿಸಿದ ಕಾಮಗಾರಿಯ ಕುರಿತು ಮಾಹಿತಿ ಪಡೆದು ಅದನ್ನು ಸಂಬAಧಿಸಿದ ಇಲಾಖೆಯ ಮೇಲಾಧಿಕಾರಿಗೆ ತಿಳಿಸಿ ಎಂದು ಅವರು ಹೇಳಿದರು.
        ನರೇಗಾದಡಿ ನೂರು ದಿನಗಳ ಕಾಲ ನೀಡುತ್ತಿದ್ದ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಲಾಗಿದ್ದು, ಆದ್ದರಿಂದ ನಾವು ಕೆಂದ್ರ ಸಕಾರಕ್ಕೆ ಧನ್ಯವಾದವನ್ನು ಸಲ್ಲಿಸಬೇಕು. ನರೇಗಾದಲ್ಲಿ ಗಂಗಾವತಿ ಮತ್ತು ಕುಷ್ಟಗಿ ತಾಲ್ಲೂಕುಗಳಲ್ಲಿ ಹೆಚ್ಚಿನ ಗುರಿ ಸಾಧಿಸಿದ್ದು ಕೊಪ್ಪಳ ತಾಲ್ಲೂಕಿನಲ್ಲಿ ಯಾಕೆ ಕಡಿಮೆಯಾಗಿದೆ. ಅಧಿಕಾರಿಗಳು ತಾವೇ ನಿಗದಿ ಪಡಿಸಿದ ಗುರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸದಿದ್ದರೆ ಹೇಗೆ ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದರು. ಸ್ವಚ್ಛ ಭಾರತ ಮಿಷನ್ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಇದರಡಿ ಶೌಚಾಲಯಗಳ ನಿರ್ಮಾಣ ಹಾಗೂ ಸ್ವಚ್ಛತೆಯ ಕಡೆಗೆ ಗಮನ ಹರಿಸುವುದರ ಜೊತೆಗೆ ಕೆಲವೊಂದು ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಎಂಬ ದೂರುಗಳಿದ್ದು, ಅವುಗಳನ್ನು ಪಿಡಿಒಗಳು ಪಟ್ಟಿ ಮಾಡಿ ನರೇಗಾದಲ್ಲಿ ಅವುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
       ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಕೊಪ್ಪಳ ತಾಲ್ಲೂಕಿನ ಹುಲಿಗಿಯಲ್ಲಿ ನಿರ್ಮಿಸಿರುವುದು ರಾಜ್ಯದಲ್ಲಿಯೇ ಮಾದರಿಯಾಗಿದೆ. ಇದು ಯಾವ ರೀತಿಯಲ್ಲಿ ಮಾಡಲಾಗಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಒಂಭತ್ತು ಗ್ರಾಮ ಪಂಚಾಯತಗಳು ಸೇರಿ ಈ ಘಟಕವನ್ನು ನಿರ್ಮಿಸಲಾಗಿದೆ. ಇದಕ್ಕೆ ಒಂಭತ್ತು ಗ್ರಾ.ಪಂ. ಗಳ ಅಧ್ಯಕ್ಷರು ಹಾಗೂ ಸದಸ್ಯರ ಸಮಿತಿ ಇದ್ದು, ಇದಕ್ಕೆ ವಿವಿಧ ಯೋಜನೆಗಳ ಮೂಲಕ ಹಾಗೂ ಜಿಲ್ಲೆಯಲ್ಲಿರುವ ಉದ್ದಿಮೆಗಳಿಂದಲೂ ಧನ ಸಹಾಯವನ್ನು ಪಡೆಯಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು.
ಕೊಪ್ಪಳ ಜಿಲ್ಲೆಯು ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಮಾದರಿ ಕೆಲಸ ಮಾಡುತ್ತಿದ್ದು, ಅಧಿಕಾರಿಗಳು ಮುಂದಿನ ಸಭೆಗೆ ಬರುವಾಗ ಇನ್ನೂ ಹೆಚ್ಚಿನ ಪ್ರಗತಿ ತೋರಿಸಬೇಕು. ಯಾವುದೇ ಕಾರಣಕ್ಕೂ ಸಭೆಗೆ ಬರುವಾಗ ತಪ್ಪು ಮಾಹಿತಿ ನೀಡುವುದಾಗಲೀ, ವಿನಾಕಾರಣ ನೆಪ ಹೇಳಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.  
      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಶ್ವನಾಥರೆಡ್ಡಿ, ಜಿಲ್ಲಾ ಪಂಚಾಯತ್ ಮಖ್ಯಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ನೇಹಾ ಜೈನ್, ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾ. ಇಲಾಖೆಯ ಆಯುಕ್ತರಾದ ಅನಿರುದ್ಧ ಶ್ರವಣ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮುಖ್ಯ ಇಂಜಿನಿಯರ್ ಪ್ರಕಾಶ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಯರಾಂ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ಜಿಲ್ಲಾ ಪಂಚಾಯತ್ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.  

ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯುತ್ ಬಳಕೆದಾರರಿಗೆ ಸೂಚನೆ


ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯುತ್ ಬಳಕೆದಾರರಿಗೆ ಸೂಚನೆ

ಕೊಪ್ಪಳ ನ. 16 (ಕರ್ನಾಟಕ ವಾರ್ತೆ): ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯುತ್ ಬಳಕೆದಾರರ ಗಣತಿಗಾಗಿ ಸರ್ಕಾರದ ಆದೇಶದಂತೆ ಭಾಗ್ಯಜ್ಯೋತಿ, ಕುಟೀರಜ್ಯೋತಿ, ಮತ್ತು ನೀರಾವರಿ ಪಂಪಸೆಟ್‌ನ ಆರ್. ಆರ್. ಸಂಖ್ಯೆಗೆ  ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ ಮತ್ತು ದೂರವಾಣಿ ಸಂಖ್ಯೆಗಳನ್ನು ಸೇರಿಸಬೇಕಾಗಿರುತ್ತದೆ.
       ಆದ್ದರಿಂದ ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಜೆಸ್ಕಾಂ, ಮುನಿರಾಬಾದ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಭಾಗ್ಯಜ್ಯೋತಿ, ಕುಟೀರಜ್ಯೋತಿ, ಮತ್ತು ನೀರಾವರಿ ಪಂಪಸೆಟ್‌ಗಳ ಬಳಕೆದಾರರು ವಿದ್ಯುತ್ ಆರ್.ಆರ್. ಸಂಖ್ಯೆ, ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ ಮತ್ತು ದೂರವಾಣಿ ಸಂಖ್ಯೆಗಳನ್ನು ಮುನಿರಾಬಾದ್ ಉಪ ವಿಭಾಗದ ಜೆಸ್ಕಾಂ ಕಚೇರಿಗೆ ಅಥವಾ ವಿದ್ಯುತ್ ಇಲಾಖೆ, ತಮ್ಮ ಗ್ರಾಮಗಳಿಗೆ ಸಂಬAಧಿಸಿದ ಮೀಟರ್ ರೀಡರ್, ಗ್ರಾಮ ವಿದ್ಯುತ್ ಪ್ರತಿನಿಧಿ ಅಥವಾ ಮಾರ್ಗದಾಳು (ಲೈನ್‌ಮ್ಯಾನ್) ರವರಿಗೆ ಕಚೇರಿ ವೇಳೆಯಲ್ಲಿ ಕರೆ ಮಾಡಿ ಗ್ರಾಹಕರ ಹೆಸರಿನೊಂದಿಗೆ ಮೇಲೆ ತಿಳಿಸಿದಂತೆ ಎಲ್ಲಾ ಮಾಹಿತಿಯನ್ನು ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ: 08539-270262, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಮೊ.ಸಂ: 9448271602 ಹಾಗೂ ಸಹಾಯಕ ಅಭಿಯಂತರರು(ತಾA) ಮೊ.ಸಂ: 9480847966 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜೆಸ್ಕಾಂನ ಮುನಿರಾಬಾದ್ ಕಾರ್ಯ ಮತ್ತು ಪಾಲನ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 20 ರಂದು ಚಾಮಲಾಪುರದಲ್ಲಿ ಜನಪರ ಉತ್ಸವ


ನ. 20 ರಂದು ಚಾಮಲಾಪುರದಲ್ಲಿ ಜನಪರ ಉತ್ಸವ

ಕೊಪ್ಪಳ ನ. 16 (ಕರ್ನಾಟಕ ವಾರ್ತೆ): ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ``ಜನಪರ ಉತ್ಸವ 2019-20'' ಕಾರ್ಯಕ್ರಮವನ್ನು ನವೆಂಬರ್. 20 ರಂದು ಸಂಜೆ 05 ಗಂಟೆಗೆ ಕೊಪ್ಪಳ ತಾಲ್ಲೂಕಿನ ಚಾಮಲಾಪುರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.  
ಚಾಮಲಾಪುರ ಸಂಸ್ಥಾನಮಠದ ಶ್ರೀ ಕರಿಬಸವೇಶ್ವರ ಮಾಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅಧ್ಯಕ್ಷತೆ ವಹಿಸುವರು.  ಸಂಸದ ಕರಡಿ ಸಂಗಣ್ಣ, ಜಿಲ್ಲಾ ಪಂಚಾಯತ್ (ಇರಕಲ್ಲಗಡ) ಸದಸ್ಯ ರಾಮಣ್ಣ ಚೌಡ್ಕಿ, ತಾ.ಪಂ. (ವನಬಳ್ಳಾರಿ) ಸದಸ್ಯೆ ಪ್ರೇಮಾ ಹನುಮಂತಪ್ಪ ಚವ್ಹಾಣ, ಇರಕಲ್ಲಗಡ ಗ್ರಾ.ಪಂ. ಅಧ್ಯಕ್ಷೆ ದ್ಯಾಮಮ್ಮ ತಿಮ್ಮಣ್ಣ ವಂಕಲಕುAಟಿ, ಉಪಾಧ್ಯಕ್ಷ ಗಂಗಣ್ಣ ಕಾಮನೂರು, ಸದಸ್ಯರಾದ ನಿಂಗಪ್ಪ ಕರಡಿ, ಸಣ್ಣ ಹನುಮಂತಪ್ಪ ಗೌಡ್ರ, ರಂಗಭೂಮಿ ಕಲಾವಿದ ನಾರಾಯಣಾಚಾರ್ ಜೋಶಿ, ಇರಕಲ್ಲಗಡ ಗ್ರಾ.ಪಂ. ಪಿ.ಡಿ.ಒ ರಾವಾಸಾಬ್ ಬಿರಾದಾರ ಹಾಗೂ ಸರ್ವ ಸದಸ್ಯರು, ಗ್ರಾಮದ ಮುಖಂಡರು, ಗುರುಹಿರಿಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಕೊಪ್ಪಳ ನ. 16 (ಕರ್ನಾಟಕ ವಾರ್ತೆ): ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ರಾಷ್ಟಿçÃಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟಿçÃಯ ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಎಂ, ಐಐಟಿ, ಐಐಎಸ್‌ಸಿ, ಐಐಐಟಿಎಸ್, ಎನ್‌ಐಟಿಎಸ್, ಐಐಎಸ್‌ಇಆರ್‌ಎಸ್, ಎಐಐಎಂಎಸ್, ಎನ್‌ಎಲ್‌ಯು, ಐಎಸ್‌ಎಂ, ಐಐಪಿ, ಐಎಸ್‌ಐ, ಜೆಐಪಿಎಂಇಆರ್ ಮತ್ತು ಎಸ್‌ಪಿಎ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ  ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ನ. 30  ಸಂಜೆ 5-00 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 8050770004 ಹಾಗೂ ಇಲಾಖಾ ವೈಬ್‌ಸೈಟ್ www.backwardclasses.kar.nic.in ನ್ನು ನೋಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


`ಭೂ ಸೇನಾ ನೇಮಕಾತಿ ರ‍್ಯಾಲಿ'' ಯಶಸ್ವಿ

ಭೂ ಸೇನಾ ನೇಮಕಾತಿ ರ‍್ಯಾಲಿ'' ಯಶಸ್ವಿ

ಕೊಪ್ಪಳ ನ. 16 (ಕರ್ನಾಟಕ ವಾರ್ತೆ): ಸೇನಾ ನೇಮಕಾತಿ ಕಚೇರಿ, ಬೆಳಗಾವಿ ವತಿಯಿಂದ ನ. 05 ರಿಂದ 16 ರವರೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ``ಭೂ ಸೇನಾ ನೇಮಕಾತಿ ರ‍್ಯಾಲಿ'' ಯಶಸ್ವಿಯಾಗಿ ನಡೆಯಿತು.  
ಈ ರ‍್ಯಾಲಿಯಲ್ಲಿ ಒಟ್ಟು 44,595 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 36,097 ಅಭ್ಯರ್ಥಿಗಳು ದೇಹದಾರ್ಢ್ಯತೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಈ ಪರೀಕ್ಷೆಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ 2020ರ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸೇನೆಯ ಪ್ರಮುಖ ತರಬೇತಿ ಕೇಂದ್ರಗಳಿಗೆ ತರಬೇತಿಗಾಗಿ ನಿಯೋಜಿಸಲಾಗುವುದು. ರ‍್ಯಾಲಿಗೆ ಸಂಪೂರ್ಣ ಸಹಕಾರ ನೀಡಿದ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಮತ್ತು ಜಿಲ್ಲಾಡಳಿತಕ್ಕೆ  ಬೆಳಗಾವಿ ಸೇನಾ ನೇಮಕಾತಿ ಕಚೇರಿಯ ಮುಖ್ಯಸ್ಥರು ಧನ್ಯವಾದ ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಕ.ರಾ.ಮು.ವಿ.ವಿನಲ್ಲಿ ನ. 30 ರಂದು ಉದ್ಯೋಗ ಮೇಳ

ಕ.ರಾ.ಮು.ವಿ.ವಿನಲ್ಲಿ ನ. 30 ರಂದು ಉದ್ಯೋಗ ಮೇಳ

ಕೊಪ್ಪಳ ನ. 16 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉದ್ಯೋಗ ಕೋಶದಿಂದ ಕರಾಮುವಿವಿಯ ಹಾಗೂ ವಿವಿಧ ವಿಶ್ವವಿದ್ಯಾನಿಲಯಗಳಿಂದ ಪದವಿ (ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ) ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ನೀಡಲು ಕರ್ನಾಟಕ ಸರ್ಕಾರದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಾದರಿ ವೃತ್ತಿ ಕೇಂದ್ರ, ಮೈಸೂರು ಇವರ ಸಹಯೋಗದೊಂದಿಗೆ ರಾಜ್ಯಾದ್ಯಂತ ಇರುವ ವಿವಿಧ ಹೆಸರಾಂತ ಕಂಪನಿಗಳ ನಿಯೋಜಕರನ್ನು ಕರೆಸಿ ನವೆಂಬರ್. 30 ರಂದು ಕರಾಮುವಿವಿ ಯ ಕೇಂದ್ರ ಕಚೇರಿ ಮೈಸೂರು ಆವರಣದಲ್ಲಿ ಉದ್ಯೋಗಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಅಭ್ಯರ್ಥಿಗಳು ನವೆಂಬರ್. 18 ರೊಳಗಾಗಿ 01246184533 ನಂಬರಿಗೆ ಮಿಸ್ಡ್ ಕಾಲ್ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ: 9845659987, 9964697521 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿವಿಯ ಕುಲಸಚಿವರಾದ ಪ್ರೊ. ಬಿ. ರಮೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Thursday, 14 November 2019

ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು

ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು

ಕೊಪ್ಪಳ,ಏಪ್ರಿಲ್.08 (ಕರ್ನಾಟಕ ವಾರ್ತೆ):
 ಕೊಪ್ಪಳ ಲೋಕಸಭೆಗೆ ಚುನಾವಣೆ ನಡೆಯುತ್ತಿದ್ದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾದ ಏಪ್ರಿಲ್ 8 ರಂದು ಇಬ್ಬರು ನಾಮಪತ್ರ ವಾಪಸ್ ಪಡೆದಿದ್ದು ಅಂತಿಮವಾಗಿ ಚುನವಣಾ ಕಣದಲ್ಲಿ 14 ಅಭ್ಯರ್ಥಿಗಳಿದ್ದಾರೆ.
 ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನಿAದ ರಾಜಶೇಖರ, ಭಾರತಿಯ ಜನತಾ ಪಕ್ಷದಿಂದ ಸಂಗಣ್ಣ, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಶರಣಯ್ಯ, ಮಾರ್ಕ್ಸಿಸ್ಟ್ ಲೆನಿನಿಸ್ಟ್ ಪಾರ್ಟಿ ಆಫ್ ಇಂಡಿಯಾ (ರೆಡ್‌ಫ್ಲಾö್ಯಗ್)ದಿಂದ ಬಸಲಿಂಗಪ್ಪ, ಸರ್ವ ಜನತಾ ಪಾರ್ಟಿಯಿಂದ ಬಿ.ಅನ್ನೋಜಿರಾವ, ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್ ರೆಡ್‌ಸ್ಟಾರ್) ಹೇಮರಾಜ ವೀರಾಪೂರ, ಬಹುಜನ ಸಮಾಜ ಪಾರ್ಟಿಯಿಂದ ಶಿವಪುತ್ರಪ್ಪ ಮೆಣೆದಾಳ ಪಕ್ಷೇತರರಾಗಿ ಸುರೇಶ್, ನಾಗರಾಜ ಕಲಾಲ, ಬಾಲರಾಜ, ಸತೀಸರೆಡ್ಡಿ, ಮಲ್ಲಿಕಾರ್ಜುನ ಹಡಪದ, ಪ.ಯ.ಗಣೇಸ, ಸುರೇಶ.ಹೆಚ್ ಇವರು ಅಂತಿಮವಾಗಿ ಕಣದಲ್ಲಿದ್ದಾರೆ.

ಲೋಕಸಭಾ ಚುನಾವಣೆ : ಪೊಲೀಸ್ ವೀಕ್ಷಕರು ಲಭ್ಯ

ಲೋಕಸಭಾ ಚುನಾವಣೆ : ಪೊಲೀಸ್ ವೀಕ್ಷಕರು ಲಭ್ಯ 

ಕೊಪ್ಪಳ ಏ. 09 (ಕರ್ನಾಟಕ ವಾರ್ತೆ):
ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಪೊಲೀಸ್ ವೀಕ್ಷಕರಾಗಿ ಡಿ.ವೈ.ಮಾಂಡಲಿಕ್, ಡಿ.ಐ.ಜಿ.ಪಿ ಇವರು ಕೊಪ್ಪಳಕ್ಕೆ ಆಗಮಿಸಿದ್ದು, ಇವರು ಲೋಕೋಪಯೋಗಿ ಇಲಾಖೆ ಕೊಪ್ಪಳ ಪ್ರವಾಸಿ ಮಂದಿರದಲ್ಲಿ ಏಪ್ರಿಲ್. 10, 11, 14, 15, 18 ಮತ್ತು 19 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಲಭ್ಯವಿರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬAಧಿಸಿದ ದೂರು, ಕುಂದು ಕೊರತೆಗಳನ್ನು ಸಾರ್ವಜನಿಕರು ಕೊಪ್ಪಳ ನಗರದ ಪ್ರವಾಸಿ ಮಂದಿರದ ರೂಂ ನಂ. 3ರಲ್ಲಿ ಖುದ್ದಾಗಿ ಭೇಟಿಯಾಗಿ ನೀಡಬಹುದು ಅಥವಾ ಪೊಲೀಸ್ ವೀಕ್ಷಕರ ಮೊಬೈಲ್ ಸಂಖ್ಯೆ 9823216733, 9108912018 ಗೆ ಸಂಪರ್ಕಿಸಬಹುದಾಗಿದೆ. 

ಕುಕನೂರು : ಏ. 30ರೊಳಗಾಗಿ ಆಸ್ತಿ ತೆರೆಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ

ಕುಕನೂರು : ಏ. 30ರೊಳಗಾಗಿ ಆಸ್ತಿ ತೆರೆಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ

ಕೊಪ್ಪಳ ಏ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯತ್ ವತಿಯಿಂದ ಏ.30 ರೊಳಗಾಗಿ ಸಾರ್ವಜನಿಕರು ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗಿದೆ.
ಕುಕನೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಸ್ತಿ ಮಾಲಿಕರು ಪ್ರಸಕ್ತ (2019-20ನೇ) ಸಾಲಿನ ಸ್ವಯಂ ಘೋಷಿತ ಆಸ್ತಿ ತೆರೆಗೆಯನ್ನು ಏ.30 ರೊಳಗಾಗಿ ಪ.ಪಂ.ಗೆ ಪಾವತಿ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗುವುದು. ಈ ಅವಕಾಶವನ್ನು ಆಸ್ತಿ ಮಾಲಿಕರು ಸದುಪಯೋಗ ಪಡೆದುಕೊಳ್ಳಬೇಕು.  ಮೇ ಹಾಗೂ ಜೂನ್ ತಿಂಗಳಲ್ಲಿ ಬಡ್ಡಿ ಇಲ್ಲದೆ ಆಸ್ತಿ ತೆರಿಗೆ ತುಂಬಲು ಅವಕಾಶವಿದ್ದು, ನಂತರ ಜುಲೈ ತಿಂಗಳಿನಿAದ ಪ್ರತಿತಿಂಗಳು ಶೇ.2 ರಷ್ಟು ದಂಡ ವಿಧಿಸಲಾಗುವುದು.  ಇದಲ್ಲದೇ ಬಾಕಿ ಇರುವ ನೀರಿನ ಕರ, ಆಸ್ತಿ ಕರ, ಮಳಿಗೆ ಬಾಡಿಗೆ, ಲೈಸನ್ಸ್ ಫೀಗಳನ್ನು ಶೀಘ್ರವಾಗಿ ಪಾವತಿಸಿ ಪ.ಪಂ. ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕುಕನೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. 

ಭ್ರಷ್ಟಾಚಾರ ನಿಗ್ರಹ ದಳದಿಂದ ಏ. 09 ಮತ್ತು 10 ರಂದು ಸಾರ್ವಜನಿಕರಿಂದ ಅಹವಾಲು ಸ್ವಿಕಾರ

ಭ್ರಷ್ಟಾಚಾರ ನಿಗ್ರಹ ದಳದಿಂದ ಏ. 09 ಮತ್ತು 10 ರಂದು ಸಾರ್ವಜನಿಕರಿಂದ ಅಹವಾಲು ಸ್ವಿಕಾರ
ಕೊಪ್ಪಳ ಏ. 08 (ಕರ್ನಾಟಕ ವಾರ್ತೆ): ಕೊಪ್ಪಳ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕರು ಏ 09 ಮತ್ತು 10 ರಂದು ಜಿಲ್ಲೆಯ  ಕನಕಗಿರಿ, ಕುಷ್ಟಗಿ ಮತ್ತು ಕುಕನೂರು ತಾಲೂಕುಗಳಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ದೂರುಗಳನ್ನು  ಹಾಗೂ ಅಹವಾಲುಗಳನ್ನು ಸ್ವೀಕರಿಸುವರು.  
ಕೊಪ್ಪಳ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕರು ಏ.09 ರಂದು ಬೆಳಿಗ್ಗೆ 11 ಗಂಟೆಯಿAದ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಹಾಗೂ ಮಧ್ಯಾನ 02 ಗಂಟಿಯಿAದ ಸಂಜೆ 05 ಕುಷ್ಟಗಿ ತಾಲೂಕಿನ  ಪ್ರವಾಸಿ ಮಂದಿರದಲ್ಲಿ ಹಾಗೂ ಏ.10 ರಂದು ಮಧ್ಯಾಹ್ನ 03 ರಿಂದ ಸಂಜೆ 05 ಗಂಟೆಯವರೆಗೆ ಕುಕನೂರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕೂಂದು ಕೊರತೆಗಳ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.  ಆದ್ದರಿಂದ ಕನಕಗಿರಿ, ಕುಷ್ಟಗಿ ಹಾಗೂ ಕುಕನೂರು ತಾಲೂಕುಗಳ ಸಾರ್ವಜನಿಕರು ಈ ಸಭೆಗಳಿಗೆ ಹಾಜರಾಗಿ ತಮ್ಮ ಕುಂದುಕೊರತೆಯ ಬಗ್ಗೆ ದೂರಗಳ ಅರ್ಜಿಗಳನ್ನು ನೀಡಬಹುದಾಗಿದೆ.  
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಆರಕ್ಷಕ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಪಿ.ಡಬ್ಲುö್ಯ.ಡಿ. ಕ್ವಾಟ್ರಸ್ ನಂ-5, ಈಶ್ವರ ಗುಡಿ ಹಿಂದುಗಡೆ, ದೂ.ಸಂ. 08539-221833, ಮೊ.ನಂ 9480806244, 9480806319, 9480806320, ಇ-ಮೇಲ್ ಜsಠಿಞಠಿಟ.ಚಿಛಿb@ಞಚಿಡಿಟಿಚಿಣಚಿಞಚಿ.gov.iಟಿ ಕ್ಕೆ ಸಂರ್ಪಕಿಸಬಹುದು ಎಂದು ಎಸಿಬಿ ಆರಕ್ಷಕ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರೀಡಾ ಇಲಾಖೆಯಿಂದ ವಿವಿಧ ಪ್ರಶಸ್ತಿಗಳು : ಅರ್ಜಿ ಅಹ್ವಾನ

ಕ್ರೀಡಾ ಇಲಾಖೆಯಿಂದ ವಿವಿಧ ಪ್ರಶಸ್ತಿಗಳು : ಅರ್ಜಿ ಅಹ್ವಾನ

ಕೊಪ್ಪಳ ಏ. 08 (ಕರ್ನಾಟಕ ವಾರ್ತೆ): ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಅರ್ಜುನ ಪ್ರಶಸ್ತಿ,ದ್ರೋಣಾಚಾರ್ಯ ಪ್ರಶಸ್ತಿ,ಧ್ಯಾನಚಂದ್ ಪ್ರಶಸ್ತಿ ಹಾಗೂ ರಾಜೀವಗಾಂಧಿ ಖೇಲ್ ರತ್ನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರವು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ  ಸಾಧನೆ ಮಾಡಿರುವ ಅರ್ಹ ಕ್ರೀಡಾಪಟುಗಳಿಂದ 2019ನೇ ಸಾಲಿನ ಅರ್ಜುನ ಪ್ರಶಸ್ತಿ.ಧ್ಯಾನಚಂದ್ ಪ್ರಶಸ್ತಿ,ರಾಜೀವಗಾಂಧಿ ಖೇಲ್ ರತ್ನ ಪ್ರಶಸ್ತಿ ಹಾಗೂ ಹಿರಿಯ ತರಬೇತುದಾರರಿಗೆ ನೀಡಲಾಗುವ ದ್ರೋಣಾಚಾರ್ಯ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಪ್ರಶಸ್ತಿಗಳ ಅರ್ಜಿ ನಮೂನೆಗಳನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯದ ಅಧಿಕೃತ ಜಾಲತಾಣ ತಿತಿತಿ.ಥಿಚಿs.ಟಿiಛಿ.iಟಿ/sಠಿoಡಿಣs ದಲ್ಲಿ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಕ್ರೀಡಾಪಟುಗಳು ಮತ್ತು ತರಬೇತುದಾರರು ನಿಗದಿತ ಅರ್ಜಿ ನಮೂನೆಯನ್ನು ಆನ್‌ಲೈನ್ ಮೂಲಕ ಪಡೆದುಕೊಂಡು  ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ತ್ರಿ ಪ್ರತಿಗಳಲ್ಲಿ ಎ.10. ರೊಳಗಾಗಿ ಕಚೇರಿಗೆ ಸಲ್ಲಿಸಬಹುದಾಗಿದೆ. 
 
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿಲ್ಲಾ ಕ್ರೀಡಾಂಗಣ ಗದಗ ರಸ್ತೆ, ಕೊಪ್ಪಳ ಇವರನ್ನು ಖುದ್ದಾಗಿ ಅಥವಾ ದೂ.ಸಂ.9480886475 ಸಂಪರ್ಕಿಸಬಹುದಾಗಿದೆ ಹಾಗೂ ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಕೊಪ್ಪಳ ಏ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಒಳಪಡುತ್ತಿದ್ದ ಗಂಗಾವತಿ ತಾಲೂಕಿನ ಮುಕ್ಕುಂಪಿ ಗ್ರಾಮದ ಬಾಲಕಿಯನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಗಂಗಾವತಿ ತಾಲೂಕಿನ ಮುಕ್ಕಂಪಿ ಗ್ರಾಮದ ಬಾಲಕಿಗೆ ಗೋನಾಳ ಗ್ರಾಮದ ಶ್ರೀ ಮಾರುತೇಶ್ವರ ಜಾತ್ರೆ ನಿಮಿತ್ಯ ಆಯೋಜಿಸಿರುವ ಸಾಮೂಹಿಕ ವಿವಾಹದಲ್ಲಿ, ವಿವಾಹ ಮಾಡುತ್ತಿರುವ ಕುರಿತು ಮಾಹಿತಿಯನ್ನು ತಿಳಿದು, ಗಂಗಾವತಿ ವೃತ್ತ ವಿಭಾಗದ ಆರಕ್ಷಕ ನಿರೀಕ್ಷಕ ದೀಪಕ್ ಭೂಸರೆಡ್ಡಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಪ್ಪ ಅವರ ನೇತೃತ್ವದಲ್ಲಿ, ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆ ಮ.ಎ.ಎಸ್. ಐರವ ಶಾರಮ್ಮ, ಸಿಪಿಸಿ-363 ಮರಿಶಾಂತಗೌಡ, ಲಕ್ಷಿö್ಮÃ ಗೋಟುರು, ಅಂಗನವಾಡಿ ಮೇಲ್ವಿಚಾರಕಿ ಬಾಲಕಿ ಗ್ರಾಮಕ್ಕೆ ಭೇಟಿ ನೀಡಿದಾಗ ಬಾಲಕಿಯ ಶಾಲಾ ದಾಖಲೆಗಳನ್ನು ಪರಿಶೀಲಿಸಿದಾ ಶಾಲಾ ದಾಖಲಾತಿಯ ಪ್ರಕಾರ  ಬಾಲಕಿಗೆ 17 ವರ್ಷ 6 ತಿಂಗಳು ಇದ್ದು ಈ ವಿವಾಹವು ಬಾಲ್ಯವಿವಾಹವೆಂದು ಕಂಡುಬAದಿದೆ. 
ಆದ್ದರಿಂದ ಬಾಲಕಿಯ ಪೋಷಕರಿಗೆ ತಿಳುವಳಿಕೆ ನೀಡಿ ಬಾಲಕಿಯನ್ನು ವಶಕ್ಕೆ ಪಡೆದು ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದಾರೆ. ಬಾಲ್ಯ ವಿವಾಹ ಮಾಡುವುದು, ವಿವಾಹದಲ್ಲಿ ಪಾಲ್ಗೊಳ್ಳುವುದು ಕೊಡ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ : ಇಬ್ಬರು ನಾಮಪತ್ರ ವಾಪಸ್, ಕಣದಲ್ಲಿ 14 ಅಭ್ಯರ್ಥಿಗಳು

ಲೋಕಸಭಾ ಚುನಾವಣೆ : ಇಬ್ಬರು ನಾಮಪತ್ರ ವಾಪಸ್, ಕಣದಲ್ಲಿ 14 ಅಭ್ಯರ್ಥಿಗಳು

ಕೊಪ್ಪಳ ಏ. 08 (ಕರ್ನಾಟಕ ವಾರ್ತೆ): ಕೊಪ್ಪಳ ಲೋಕಸಭಾ ಸಾರ್ವತ್ರಿಕ ಚುನಾವಣೆ ನಡುಯುತ್ತಿದ್ದು ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, ಚುನಾವಣಾ ಕಣದಲ್ಲಿ 14 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. 
  ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾದ ಏಪ್ರಿಲ್ 8 ರಂದು ಇಬ್ಬರು ಪಕ್ಷೇತರ ಅಭ್ಯರ್ಥಿಗಳಾದ ಬಸವರಾಜ್ ಕೆ ಮತ್ತು ಮಹಮ್ಮದ್ ನಜೀರುದ್ದೀನ್ ಮೂಲಿಮನಿ ತಮ್ಮ ಉಮ್ಮೀದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಚುನಾವಣಾ ಕಣದಲ್ಲಿ 14 ಅಭ್ಯರ್ಥಿಗಳಿದ್ದಾರೆ.

ಲೋಕಸಭಾ ಚುನಾವಣೆ : ಸರಳ ಜನ್ಮ ದಿನಾಚರಣೆ

 ಲೋಕಸಭಾ ಚುನಾವಣೆ : ಸರಳ ಜನ್ಮ ದಿನಾಚರಣೆ 

ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ

ಕೊಪ್ಪಳ ಏ. 14 (ಕರ್ನಾಟಕ ವಾರ್ತೆ): ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
  ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಹಿನ್ನೆಲೆ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಾನುವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. 
  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ, ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು.
ಪುತ್ಥಳಿಗೆ ಮಾಲಾರ್ಪಣೆ : ಬಾಬಾ ಸಾಹೇಬರ್‌ರವರ ಜನ್ಮ ದಿನದ ಅಂಗವಾಗಿ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ನಗರದಲ್ಲಿರುವ ಅಂಬೇಡ್ಕರ್‌ರವರ ಪುತ್ಥಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರು ಅವರಿಂದ ಮಾಲಾರ್ಪಣೆ ಮಾಡಲಾಯಿತು.  ಅಲ್ಲದೇ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ ಸೇರಿದಂತೆ ಹಲವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಂಬೇಡ್ಕರ್‌ರವರ ಪುತ್ಥಳಿ ಮುಂದೆ ಕ್ಯಾಂಡಲ್ ಹಚ್ಚಿ, ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಅಂಬೇಡ್ಕರ್‌ರವರಿಗೆ ಗೌರವ ನಮನವನ್ನು ಸಲ್ಲಿಸಲಾಯಿತು.  

ಭಾಗ್ಯನಗರ ಪ.ಪಂ. ನಿಂದ ನಿವೇಶನ ರಹಿತರಿಗೆ ನಿವೇಶನ : ಭೂ ಮಾಲಿಕರಿಗೆ ಆಹ್ವಾನ

ಭಾಗ್ಯನಗರ ಪ.ಪಂ. ನಿಂದ ನಿವೇಶನ ರಹಿತರಿಗೆ ನಿವೇಶನ : ಭೂ ಮಾಲಿಕರಿಗೆ ಆಹ್ವಾನ 

ಕೊಪ್ಪಳ ಜೂ. 03 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತಿ ಜಮೀನು ನಿವೇಶನ ಒದಗಿಸಲು 12-14 ಎಕರೆ ಜಮೀನಿನ ಅವಶ್ಯಕತೆ ಇದ್ದು ಜಮೀನಿನ ಮಾಲೀಕರಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ ರವರು ಮನವಿ ಮಾಡಿದ್ದಾರೆ.
ಕೊಪ್ಪಳ ನಗರದ ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 380-400 ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸಲು 12-14 ಎಕ್ಕರೆ ಜಮೀನಿನ ಅವಶ್ಯಕತೆ ಇದ್ದು, ಪಟ್ಟಣದ 4 ಕಿ.ಮೀ. ವ್ಯಾಪ್ತಿಯಲ್ಲಿ ತಮ್ಮ ಜಮೀನನ್ನು ಉದ್ದೇಶಕ್ಕಾಗಿ ನೀಡಲು ಇಚ್ಛಿಸುವವರು ಜಮೀನಿನ ದಖಲೆ, ವಿವರಗಳೊಂದಿಗೆ ಕಾರ್ಯಾಲಯಕ್ಕೆ ಖುದ್ದಾಗಿ ಮುಖ್ಯಾಧಿಕಾರಿಗಳನ್ನು ಸಂಪರ್ಕಿಸಬೇಕಾಗಿದೆ ಎಂದು ಭಾಗ್ಯನಗರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 13 ರಂದು ರಾಷ್ಟಿçÃಯ ಲೋಕ್ ಅದಾಲತ್

ಜುಲೈ 13 ರಂದು ರಾಷ್ಟಿçÃಯ ಲೋಕ್ ಅದಾಲತ್

ಕೊಪ್ಪಳ ಜೂ. 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು “ರಾಷ್ಟಿçÃಯ ಲೋಕ್ ಅದಾಲತ್” ಕಾರ್ಯಕ್ರಮವನ್ನು ಜುಲೈ. 13 ರಂದು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ.    
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದ ಮೇರಗೆ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2017ರ ನವೆಂಬರ್. 30 ರಿಂದ ಖಾಯಂ ಸದಸ್ಯ ಕಾರ್ಯದರ್ಶಿಗಳ ಸ್ಥಾನವನ್ನು ಹೊಂದಿ ಕಾರ್ಯನಿರ್ವಹಿಸುತ್ತಿದೆ.  ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪಾಧಿಕಾರ ಇವರ ನಿರ್ದೇಶನದ ಮೇರಗೆ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಅಂತಾ ಪರಿಗಣಿಸಿ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬAಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮೀನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಜುಲೈ 13 ರಂದು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟಿçÃಯ ಲೋಕ್ ಅದಾಲತ್‌ನ್ನು ಏರ್ಪಡಿಸಲಾಗಿದೆ.  ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವೃದ್ದ ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ವೃದ್ದ ಮಹಿಳೆ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ ಜೂ 03 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದ ದ್ಯಾಮವ್ವ ಗಂಡ ಹನುಮಪ್ಪ ಕಕ್ಕೂರ (86) ಎಂಬ ವೃದ್ದ ಮಹಿಳೆ  ಏಪ್ರಿಲ್. 04 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದ್ಯಾಮವ್ವ ಗಂಡ ಹನುಮಪ್ಪ ಕಕ್ಕೂರ ವಯಸ್ಸು 86 ಎಂಬ ಮಹಿಳೆ. ಏಪ್ರಿಲ್ 04 ರಂದು ಮದ್ಯಾಹ್ನ 03 ಗಂಟೆಯ ಸುಮಾರಿಗೆ ಗಿಣಿಗೇರಿ ಗ್ರಾಮದ ಮನೆಯಿಂದ ಎದ್ದು ಎಲ್ಲಿಯೋ ಹೋಗಿದ್ದು, ವಾಪಸು ಮನೆಗೆ ಬರದೇ ಕಾಣೆಯಾಗಿದ್ದಾರೆ ಎಂದು ಕಾಣೆಯಾದ ವೃದ್ದ ಮಹಿಳೆಯ ಪುತ್ರ ಶಿವಪುತ್ರಪ್ಪರವರು ಪತ್ತೆ ಮಾಡಿಕೊಡಲು ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.  ಕಾಣೆಯಾದ ವೃದ್ದ ಮಹಿಳೆಯ ಚಹರೆ ವಿವರ ಇಂತಿದೆ, 5. ಫೀಟ್ ಎತ್ತರ, ತೆಳ್ಳನೆ ಮೈಕಟ್ಟು, ಸಾದಾ ಕಪ್ಪು ಮೈಬಣ್ಣ, ಬಿಳಿ ತಲೆಗೂದಲು ಕೋಲು ಮುಖ ಹೊಂದಿದ್ದಾಳೆ  ಕನ್ನಡ ಭಾಷೆ ಮಾತನಾಡುತ್ತಾಳೆ.  ಕಾಣೆಯಾದ ಒಂದು ಹಸಿರು ಬಣ್ಣದ ಬಾಂಡ್ ಸೀರೆ. ಹಸಿರು ಬಣ್ಣದ ಕುಪ್ಪಸ ಧರಿಸಿದ್ದು, ಈ ವೃದ್ದ ಮಹಿಳೆ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಕೊಪ್ಪಳ ಗ್ರಾಮೀಣ ಪಿ.ಎಸ್.ಐ ದೂ.ಸಂ. 08539- 221333, 9480803746, ಕೊಪ್ಪಳ ಗ್ರಾಮೀಣ ಸಿಪಿಐ ಮೊ.ಸಂ. 9480803731, ಕೊಪ್ಪಳ ಡಿವೈಎಸ್‌ಪಿ ದೂ.ಸಂ. 08539-230342, 9480803720, ಕೊಪ್ಪಳ ಎಸ್ಪಿ ದೂ.ಸಂ. 08539-230111 ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ. 08539-100 ಇಲ್ಲಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Tuesday, 12 November 2019

ಎನ್.ಟಿ.ಎಸ್.ಇ ಹಾಗೂ ಎನ್.ಎಮ್.ಎಮ್.ಎಸ್ ಪರೀಕ್ಷೆಗಳ ಪ್ರವೇಶ ಪತ್ರ ವಿತರಣೆ ಆರಂಭ

 ಎನ್.ಟಿ.ಎಸ್.ಇ ಹಾಗೂ ಎನ್.ಎಮ್.ಎಮ್.ಎಸ್ ಪರೀಕ್ಷೆಗಳ ಪ್ರವೇಶ ಪತ್ರ ವಿತರಣೆ ಆರಂಭ
ಕೊಪ್ಪಳ ನ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ನವೆಂಬರ್. 17 ರಂದು ಎನ್.ಟಿ.ಎಸ್.ಇ ಹಾಗೂ ಎನ್.ಎಮ್.ಎಮ್.ಎಸ್ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗುತ್ತಿದೆ. ಪ್ರವೇಶ ಪತ್ರ ಹಾಗೂ ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬAಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಮುನಿರಾಬಾದ್‌ನ ಜಿ¯

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಾರ್ವಜನಿಕರ ಗಮನಕ್ಕೆ

ಸಾರ್ವಜನಿಕರ ಗಮನಕ್ಕೆ

ಕೊಪ್ಪಳ ನ. 07 (ಕರ್ನಾಟಕ ವಾರ್ತೆ): ಕೊಪ್ಪಳದಲ್ಲಿ ಭಾರತೀಯ ಸೇನಾ ರ‍್ಯಾಲಿಯನ್ನು ಜಿಲ್ಲಾ ಸೈನಿಕ ಪುನರ್ವಸತಿ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನವೆಂಬರ್. 05 ರಿಂದ 16 ರವರೆಗೆ ಆಯೋಜಿಸಲಾಗಿದೆ. ಈ ರ‍್ಯಾಲಿಯ ಹೆಸರಿನಲ್ಲಿ ಕೆಲವರು ಅಂಗಡಿ ಮಾಲೀಕರು, ಸಂಘ-ಸAಸ್ಥೆಗಳಿAದ ಹಣ ಮತ್ತು ಇತರೆ ಪರಿಕರಗಳನ್ನು ಅನಧಿಕೃತವಾಗಿ ವಸೂಲಿ ಮಾಡುತ್ತಿರುವುದು ಜಿಲ್ಲಾಡಳಿತದ ಗಮಕ್ಕೆ ಬಂದಿದೆ. ಆದ್ದರಿಂದ ಯಾವುದೇ ವ್ಯಕ್ತಿ ಅನಧಿಕೃತವಾಗಿ ಹಣ ಮತ್ತು ಇತರೆ ವಸ್ತುಗಳನ್ನು ಕೇಳಲು ಬಂದರೆ ಅವರ ಹೆಸರು ಮತ್ತು ವಿಳಾಸ ನೀಡಿದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಚುನಾವಣೆ ಪ್ರಯುಕ್ತ ನ.12 ಸಾರ್ವತ್ರಿಕ ರಜೆ


ಉಪಚುನಾವಣೆ ಪ್ರಯುಕ್ತ ನ.12 ಸಾರ್ವತ್ರಿಕ ರಜೆ

ಕೊಪ್ಪಳ ನ. 08 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಸ್ಥಾನಗಳಿಗೆ ನವೆಂಬರ್ 12 ರಂದು ಉಪ ಚುನಾವಣೆಯ ಮತದಾನ ನಡೆಯಲಿದ್ದು, ಸರ್ಕಾರದ ಅಧಿಸೂಚನೆಯ ಮೂಲಕ ಉಪ ಚುನಾವಣೆ ನಡೆಯುವ ತಾಲ್ಲೂಕು, ಗ್ರಾಮ ಪಂಚಾಯತಿಗಳ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡAತೆ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಒಳಗೊಂಡAತೆ ಮತದಾನದ ದಿನದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕುಷ್ಟಗಿ ತಾಲ್ಲೂಕಿನ ತಾಲ್ಲೂಕು ಪಂಚಾಯತ ಕ್ಷೇತ್ರ ಜುಮಲಾಪೂರ-22 ವ್ಯಾಪ್ತಿಗೆ ಒಳಪಡುವ ಜುಮಲಾಪುರ, ಮುದ್ದಲಗುಂದಿ, ನಂದಾಪೂರ, ಅಡವಿಭಾವಿ, ಸಾಸ್ವಿಹಾಳ, ಹಾಗಲದಾಳ. ಐನಾಪೂರ(ಬೇ), ಜಾಗೀರರಾಂಪೂರ, ಮ್ಯಾದರಡೊಕ್ಕಿ ಮತ್ತು ತಾಂಡಾ ಹಾಗೂ ಕೊಪ್ಪಳ ತಾಲ್ಲೂಕಿನ  ಗ್ರಾಮ ಪಂಚಾಯತ್ ಕ್ಷೇತ್ರ ಹುಲಿಗಿ-25ರ ವ್ಯಾಪ್ತಿಗೆ ಬರುವ 7-ಮುನಿರಾಬಾದ-2 ಗ್ರಾಮ ಪಂಚಾಯತ್ ಕ್ಷೇತ್ರಗಳಲ್ಲಿ ಉಪ ಚುನಾವಣೆ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತಾ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಅರ್ಹತಾ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ನ. 08 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದೇಶಗಳಲ್ಲಿ ಉನ್ನತ ವ್ಯಾಸಂಗ ಕೈಗೊಳ್ಳಲು ಅಗತ್ಯವಾಗಿರುವ ಸ್ಯಾಟ್, ಜಿಆರ್‌ಇ , ಜಿಮ್ಯಾಟ್ ಮೊದಲಾದ ಅರ್ಹತಾ ಪರೀಕ್ಷೆಗಳಿಗೆ ತರಬೇತಿ ನೀಡಲು ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿAದ ಅರ್ಜಿ ಆಹ್ವಾನಿಸಲಾಗಿದೆ. 
ದ್ವಿತೀಯ ಪಿ.ಯು.ಸಿ ಓದುತ್ತಿರುವ ಮತ್ತು ಮುಕ್ತಾಯಗೊಳಿಸಿರುವ ಅಭ್ಯರ್ಥಿಗಳು ಸ್ಯಾಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ಸ್ನಾತಕೋತ್ತರ ಹಾಗೂ ಪಿ.ಹೆಚ್.ಡಿ ವಿದೇಶದಲ್ಲಿ ಅಧ್ಯಯನ ಮಾಡಲು ಆಸಕ್ತರಿರುವ ಅಭ್ಯರ್ಥಿಗಳು ಜಿಆರ್‌ಇ ಅಥವಾ ಜಿಮ್ಯಾಟ್  ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು www.sw.kar.nic.in  ನಲ್ಲಿ ಪಡೆದುಕೊಂಡು ಅರ್ಜಿ ನಮೂನೆಯಲ್ಲಿನ ಕಾಲಂಗಳನ್ನು  ಭರ್ತಿಮಾಡಿ ಸದರಿ ಅರ್ಜಿಯನ್ನು ಸ್ಕಾö್ಯನ್ ಮಾಡಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಇ-ಮೇಲ್ ವಿಳಾಸ sat.gre.gmat.petc@gmail.com ಗೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ನ. 23 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಕಛೇರಿಗಳನ್ನು ಸಂಪರ್ಕಿಸಬಹ್ಮದೆAದು ಪ್ರಕಟಣೆ ತಿಳಿಸಿದೆ.

ಉದ್ಯೋಗಾಧಾರಿತ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಉದ್ಯೋಗಾಧಾರಿತ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ನ. 08 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಭದ್ರತಾಪಡೆ, ಸೇನಾಪಡೆ, ಅರೆ ಸೇನಾಪಡೆ, ಪೊಲೀಸ್ ಪಡೆ, ಅಗ್ನಿಶಾಮಕ, ಅರಣ್ಯ, ವಿದ್ಯುತರ, ಗೃಹ ರಕ್ಷಕ, ಸಾರಿಗೆ ಮೊದಲಾದ ಸೇವೆಗಳಲ್ಲಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿ ಸಹಿತ ಪ್ರಿ ಮಿಲಿಟರಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಇಲಾಖೆ ವೆಬ್‌ಸೈಟ್ www.sw.kar.nic.in ನಲ್ಲಿ ಪಡೆದುಕೊಂಡು ಅರ್ಜಿ ನಮೂನೆಯಲ್ಲಿನ ಕಾಲಂಗಳನ್ನು  ಭರ್ತಿಮಾಡಿ ಸದರಿ ಅರ್ಜಿಯನ್ನು ಸ್ಕಾö್ಯನ್ ಮಾಡಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಇ-ಮೇಲ್ ವಿಳಾಸ pre.military.petc@gmail.com ಗೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ನ. 23 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಕಛೇರಿಗಳನ್ನು ಸಂಪರ್ಕಿಸಬಹುದೆAದು ಪ್ರಕಟಣೆ ತಿಳಿಸಿದೆ.

ಜೆಇಇ ಹಾಗೂ ನೀಟ್ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಜೆಇಇ ಹಾಗೂ ನೀಟ್ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ನ. 08 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿನ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 02 ವರ್ಷಗಳ ಅವಧಿಗೆ ಜೆಇಇ (ಅಡ್ವಾನ್ಸ್ ಹಾಗೂ ಮೇನ್ಸ್) ಹಾಗೂ ನೀಟ್ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಇಲಾಖೆ ವೆಬ್‌ಸೈಟ್ www.sw.kar.nic.in  ನಲ್ಲಿ ಪಡೆದುಕೊಂಡು ಅರ್ಜಿ ನಮೂನೆಯಲ್ಲಿನ ಕಾಲಂಗಳನ್ನು  ಭರ್ತಿಮಾಡಿ ಸದರಿ ಅರ್ಜಿಯನ್ನು ಸ್ಕಾö್ಯನ್ ಮಾಡಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಇ-ಮೇಲ್ ವಿಳಾಸ jee.neet.petc@gmail.com ಗೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ನ. 23 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಗಳನ್ನು ಸಂಪರ್ಕಿಸಬಹುದೆAದು ಪ್ರಕಟಣೆ ತಿಳಿಸಿದೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ನ. 08 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿAದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವಿ ಪಡೆದ ಅಭ್ಯರ್ಥಿಗಳಿಗೆ ಸಿವಿಲ್, ಸೆಷನ್ಸ್ ಹಾಗೂ ಡಿಸ್ಟಿçಕ್ಟ್ವ್ ಜಡ್ಜ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನ. 15 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಇಲಾಖೆ ವೆಬ್‌ಸೈಟ್ www.sw.kar.nic.in ನಲ್ಲಿ ಪಡೆದು, ಅರ್ಜಿ ನಮೂನೆಯಲ್ಲಿನ ಕಾಲಂಗಳನ್ನು  ಭರ್ತಿಮಾಡಿ, ಅರ್ಜಿಯನ್ನು ಸ್ಕಾö್ಯನ್ ಮಾಡಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ವೆಬ್‌ಸೈಟ್ judge.petc@gmail.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು  ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.