Saturday, 7 December 2019

ಡಿ. 27 ರಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ

ಡಿ. 27 ರಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ
ಕೊಪ್ಪಳ ಡಿ. 06 (ಕರ್ನಾಟಕ ವಾರ್ತೆ): ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರಸಕ್ತ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿಸೆಂಬರ್. 27, 28 ಮತ್ತು 29 ರಂದು ಮೂರು ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ.
ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್. 18 ನಂತರವೂ ಪ್ರವೇಶ ಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಬೆಂಗಳೂರು-18, ಚಾಮರಾಜಪೇಟೆ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳ ಕಡೆ ವಿಚಾರಿಸಬಹುದು. ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಅಂತರ್ಜಾಲ ವೈಬ್‌ಸೈಟ್  ತಿತಿತಿ.ಞಚಿsಚಿಠಿಚಿ.iಟಿ   ಮೂಲಕ ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-26623584 ಗೆ ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚೆನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯವರಿಗೆ ಅಪ್ರೆಂಟಿಷಿಪ್ ತರಬೇತಿ : ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿಯವರಿಗೆ ಅಪ್ರೆಂಟಿಷಿಪ್ ತರಬೇತಿ : ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ
ಕೊಪ್ಪಳ ಡಿ. 06 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಗಿರಿಜನ ಉಪಯೋಜನೆಯಡಿ ಇಲಾಖೆಯ ಆಯ್ದ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಪುರುಷ ಅಭ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಪತ್ರಿಕೋದ್ಯಮ ಅಪ್ರೆಂಟಿಷಿಪ್ ತರಬೇತಿಯು ಹತ್ತು ತಿಂಗಳ ಅವಧಿ ಆಗಿರುತ್ತದೆ. ಅಭ್ಯರ್ಥಿಗಳು ಗಣಕಯಂತ್ರ ಜ್ಞಾನ, ಅದರಲ್ಲೂ ಕನ್ನಡ ಭಾಷೆಯಲ್ಲಿನ ಗಣಕ ಜ್ಞಾನ ಕಡ್ಡಾಯವಾಗಿರುತ್ತದೆ. ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಪ್ರತಿ ಮಾಹೆ ತಲಾ 15 ಸಾವಿರ ರೂ.ಗಳ ಶಿಷ್ಯ ವೇತನವನ್ನು ಪಾವತಿಸಲಾಗುತ್ತದೆ. 
ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿದೆ. 
ಅರ್ಜಿಗಾಗಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಅಥವಾ ದೂ.ಸಂ.08539-220607 ಕ್ಕೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಜೂ.29 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿAಗ್ ಪ್ರೋಬೇಷನರಿ ಆಫೀಷ್‌ರ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. 
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿAಗ್ ಪ್ರೋಬೇಷನರಿ ಆಫೀಷ್‌ರ್ ಸ್ಪರ್ಧಾತ್ಮಕ ಪರೀಕ್ಷೆಳಿಗೆ ಪೂರ್ವ ಪರೀಕ್ಷಾ ತರಬೇತಿ ನೀಡುತ್ತಿದ್ದು.   ಆಸಕ್ತ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,  2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಜು.12 ರೊಳಗಾಗಿ  ಆನ್‌ಲೈನ್ ಮೂಲಕ ಅರ್ಜಿಯನ್ನು  ಸಲ್ಲಿಸಬೇಕಾಗಿದೆ.
 ಹೆಚ್ಚಿನ ಮಾಹಿತಿಗಾಗಿ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ  ವೆಬ್‌ಸೈಟ್ ಗೆ ಸಂಪರ್ಕಿಸಿಬಹುದಾಗಿದೆ ಎಂದು ಜಿಲ್ಲಾ ಹಿಂದುಳಿತ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಜೂ.29 (ಕರ್ನಾಟಕ ವಾರ್ತೆ): ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ``ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ)'' ಅಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
``ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ)'' ಯೋಜನೆಯಡಿ ಸೇವಾ ಚಟುವಟಿಕೆಗಳಿಗೆ ಗರಿಷ್ಠ ಸಾಲ 10 ಲಕ್ಷ, ಉತ್ಪಾದನಾ ಘಟಕಗಳಿಗೆ ಗರಿಷ್ಠ ಸಾಲ 25 ಲಕ್ಷ.  ಸಾಲದ ಮೊತ್ತದ ಮೇಲೆ ಸಾಮಾನ್ಯ ವರ್ಗದ ಗ್ರಾಮೀಣ ಪ್ರದೇಶದವರಿಗೆ ಯೋಜನೆ ವೆಚ್ಚದ ಶೇ.25 ರಷ್ಟು ಹಾಗೂ ನಗರ ಪ್ರದೇಶದವರಿಗೆ ಯೋಜನೆ ವೆಚ್ಚದ ಶೇ.15 ರಷ್ಟು ಮತ್ತು ವಿಶೇಷ ವರ್ಗದ (ಪರಿಶಿಷ್ಟ ಜಾತಿ, ಪ.ಪಂ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ಮಾಜಿ ಸೈನಿಕರು, ಮಹಿಳೆ ಫಲಾನುಭವಿಗಳು) ಗ್ರಾಮೀಣ ಪ್ರದೇಶದವರಿಗೆ ಯೋಜನೆ ವೆಚ್ಚದ ಶೇ.35 ರಷ್ಟು ಹಾಗೂ ನಗರ ಪ್ರದೇಶದವರಿಗೆ ಯೋಜನೆ ವೆಚ್ಚದ ಶೇ.25 ರಷ್ಟು ಸಹಾಯಧನ ಸೌಲಭ್ಯ ಇರುತ್ತದೆ.  ಉದ್ದಿಮೆಯನ್ನು ಪ್ರಾರಂಭ ಮಾಡುವ ಸಾಮಾನ್ಯ ವರ್ಗದವರು ಶೇ.10 ಮತ್ತು ವಿಶೇಷ ವರ್ಗದವರು ಶೇ.5 ರಷ್ಟು ಸ್ವಂತ ಭಂಡವಾಳ ಹೂಡಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ಫಲಾನುಭವಿಗಳಿಗೆ 18 ವರ್ಷ ತುಂಬಿರಬೇಕು.  ಈ ಯೋಜನೆಯು ಹೊಸದಾಗಿ ಪ್ರಾರಂಭಿಸುವ ಘಟಕಗಳಿಗೆ ಮಾತ್ರ ಅನ್ವಯಿಸುತ್ತದೆ.  ಯೋಜನೆಯ ಸೌಲಭ್ಯ ಪಡೆಯಲು ಅಪೇಕ್ಷಿಸುವ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ ತಿತಿತಿ.ಞvioಟಿಟiಟಿe.gov.iಟಿ/ಠಿmegಠಿeಠಿoಡಿಣಚಿಟ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಹಾರ್ಡ್ ಕಾಪಿಯ 2 ಸೆಟ್‌ನ್ನು ಜಂಟಿ ನಿರ್ದೇಶಕರ ಕಚೇರಿ ಜಿಲ್ಲಾ ಕೈಗಾರಿಕಾ ಕೇಂದ್ರ ಕೊಪ್ಪಳ ರವರ ಕಚೇರಿಗೆ ಸಲ್ಲಿಸಬೇಕು.  ಹೆಚ್ಚನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಮೊ.ಸಂ. 9480825631, ಜಿಲ್ಲಾ ಕೈಗಾರಿಕಾ ಕೇಂದ್ರ ಪ್ರಥಮ ದರ್ಜೆ ಸಹಾಕರು ಮೊ.ಸಂ. 7795142631 ಮತ್ತು ಖಾಗಿ ಮತ್ತು ಗ್ರಾಮೋದ್ಯೋಗ ಆಯೋಗ ಬೆಂಗಳೂರು ಮೊ.ಸಂ. 8317314107, ಇವರನ್ನು ಸಂಪರ್ಕಿಸವುವAತೆ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಜೂ.29 (ಕರ್ನಾಟಕ ವಾರ್ತೆ): ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಗ್ರಾಮೀಣ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ``ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿಎಂಇಜಿಪಿ)'' ಅಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
``ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿಎಂಇಜಿಪಿ)'' ಯೋಜನೆಯಡಿ ಸೇವಾ ಚಟುವಟಿಕೆಗಳಿಗೆ ಗರಿಷ್ಠ ಸಾಲ 05 ಲಕ್ಷ, ಕೈಗಾರಿಕಾ ಚಟುವಟಿಕೆಗಳಿಗೆ ಗರಿಷ್ಠ ಸಾಲ 10 ಲಕ್ಷ.  ಸಾಲದ ಮೊತ್ತದ ಮೇಲೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25% (ಗರಿಷ್ಠ ಮೊತ್ತ ರೂ. 2.50 ಲಕ್ಷಗಳಿಗೆ ಮಿತಿ) ಮತ್ತು ವಿಶೇಷ ವರ್ಗದ (ಪರಿಶಿಷ್ಟ ಜಾತಿ, ಪ.ಪಂ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ಮಾಜಿ ಸೈನಿಕರು, ಮಹಿಳೆ) ಫಲಾನುಭವಿಗಳಿಗೆ ಶೇ. 25% (ಗರಿಷ್ಠ ಮೊತ್ತ ರೂ. 3.50 ಲಕ್ಷಗಳಿಗೆ ಮಿತಿ) ಸಹಾಯಧನ ಸೌಲಭ್ಯ ಇರುತ್ತದೆ.  ಉದ್ದಿಮೆಯನ್ನು ಪ್ರಾರಂಭ ಮಾಡುವ ಸಾಮಾನ್ಯ ವರ್ಗದವರು ಶೇ.10 ಮತ್ತು ವಿಶೇಷ ವರ್ಗದವರು ಶೇ.5 ರಷ್ಟು ಸ್ವಂತ ಭಂಡವಾಳ ಹೂಡಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ಫಲಾನುಭವಿಗಳಿಗೆ 18 ವರ್ಷ ತುಂಬಿರಬೇಕು. ಹಾಗೂ ಸಾಮಾನ್ಯ ವರ್ಗದವರು 35 ವರ್ಷ ಹಾಗೂ ವಿಶೇಷ ವರ್ಗದವರು 45 ವರ್ಷದೊಳಗಿರಬೇಕು.  ಈ ಯೋಜನೆಯು ಹೊಸದಾಗಿ ಪ್ರಾರಂಭಿಸುವ ಘಟಕಗಳಿಗೆ ಮಾತ್ರ ಅನ್ವಯಿಸುತ್ತದೆ.  ಯೋಜನೆಯ ಸೌಲಭ್ಯ ಪಡೆಯಲು ಅಪೇಕ್ಷಿಸುವ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ hಣಣಠಿ://ಛಿmegಠಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಹಾರ್ಡ್ ಕಾಪಿಯ 2 ಸೆಟ್‌ನ್ನು ಜಂಟಿ ನಿರ್ದೇಶಕರ ಕಚೇರಿ ಜಿಲ್ಲಾ ಕೈಗಾರಿಕಾ ಕೇಂದ್ರ ಕೊಪ್ಪಳ ರವರ ಕಚೇರಿಗೆ ಸಲ್ಲಿಸಬೇಕು.  ಹೆಚ್ಚನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಮೊ.ಸಂ. 9480825631, ಜಿಲ್ಲಾ ಕೈಗಾರಿಕಾ ಕೇಂದ್ರ ಪ್ರಥಮ ದರ್ಜೆ ಸಹಾಕರು ಮೊ.ಸಂ. 8660843575 ಹಾಗೂ ಕೊಪ್ಪಳ ಮತ್ತು ಯಲಬುರ್ಗಾ ಕೈಗಾರಿಕಾ ವಿಸ್ತರಣಾಧಿಕಾರಿ ಮೊ.ಸಂ. 8497060159, ಇವರನ್ನು ಸಂಪರ್ಕಿಸವುವAತೆ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
======

ಯುವತಿ ಕಾಣೆ : ಪತ್ತೆಗೆ ಸಹಕರಿಸಲು ಮನವಿ

ಯುವತಿ ಕಾಣೆ : ಪತ್ತೆಗೆ ಸಹಕರಿಸಲು ಮನವಿ
ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ):  ಕೊಪ್ಪಳ ತಾಲೂಕಿನ ಇರಕಲಗಡಾ ನಿವಾಸಿ ಸುಚೇತಾ ತಂದೆ ಉಮೇಶ ಅಂಗಡಿ ವಯಸು 19 ವರ್ಷ, ಎಂಬ ಯುವತಿಯು ಮೇ.17 ರಂದು ಕಾಣೆಯಾದ್ದು, ಪತ್ತೆಗೆ ಸಹಕರಿಸುವಂತೆ ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಸುಚೇತಾ ತಂದೆ ಉಮೇಶ ಅಂಗಡಿ ವಯಸು 19 ವರ್ಷ, ಎಂಬ ಯುವತಿಯು ಮೇ. 17 ರಂದು ಸಂಜೆ 05 ಗಂಟೆಯ ಸುಮಾರಿಗೆ  ಮನೆಯಿಂದ ಹೊರಗೆ ಹೋಗಿ  ವಾಪಾಸ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ನನ್ನ ಮಗಳನ್ನು ನಮ್ಮ ಸಂಭAದಿಕರಲ್ಲಿ ಮತ್ತು ಮುಂತಾದ ಸ್ಥಳಗಳಲ್ಲಿ ಹುಡುಕಾಡಿದರೂ ಸಿಕ್ಕಿರುವುದಿಲ್ಲಾ ಎಂದು ಯುವತಿಯ ತಂದೆ ಉಮೇಶ ಅಂಗಡಿ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.
ಯುವತಿಯ ಚಹರೆ ವಿವರ ಇಂತಿದೆ, 5 ಫೀಟ್ ಎತ್ತರ, ಮದ್ಯಮ ಮೈಕಟ್ಟು, ಕೆಂಪು ಮೈಬಣ್ಣ, ಕಪ್ಪು ತಲೆ ಕೂದಲು  ದುಂಡುಮುಖ ಹೊಂದಿದ್ದಾಳೆ. ಬಲಗೈ ಗೆ ಸುಟ್ಟ ಗಾಯದ ಕಲೆ ಇದೆ. ಕನ್ನಡ, ಇಂಗ್ಲೀಷ್  ಮಾತನಾಡುತ್ತಾಳೆ.  ಕಾಣೆಯಾದಾಗ ಕೆಂಪು ಟಾಪ್ ಧರಿಸಿದ್ದಾಳೆ, ಈ ಯುವತಿಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.ನA 08539-230222-100, ಕೊಪ್ಪಳ ಡಿವೈಎಸ್‌ಪಿ-08539.230342. 9480803720, ಕೊಪ್ಪಳ ಗ್ರಾಮೀಣ ಸಿಪಿಐ-9480803731 ಕೊಪ್ಪಳ ಎಸ್ ಪಿ-08539, 230111 ಕೊಪ್ಪಳ ಗ್ರಾಮೀಣ ಪಿಎಸೈ-08539,221333,9480803746 ಇಲ್ಲಿಗೆ  ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಜಿಲ್ಲಾ ವಕ್ಫ ಬೋರ್ಡ್ ಅಧ್ಯಕ್ಷರಾಗಿ ಸೈಯದ್ ನಾಸಿರುದ್ದೀನ್ ಖಾದ್ರಿ ಅಧಿಕಾರ ಸ್ವೀಕಾರ

ಜಿಲ್ಲಾ ವಕ್ಫ ಬೋರ್ಡ್ ಅಧ್ಯಕ್ಷರಾಗಿ ಸೈಯದ್ ನಾಸಿರುದ್ದೀನ್ ಖಾದ್ರಿ ಅಧಿಕಾರ ಸ್ವೀಕಾರ
ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ವಕ್ಫ ಬೋರ್ಡ್ ಅಧ್ಯಕ್ಷರಾಗಿ ಸೈಯದ್ ನಾಸಿರುದ್ದೀನ್ ಖಾದ್ರಿ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. 
ಕೊಪ್ಪಳ ಜಿಲ್ಲಾ ವಕ್ಫ ಬೋರ್ಡ್ ಅಧ್ಯಕ್ಷರನ್ನಾಗಿ ಗಂಗಾವತಿಯ ಜಾಮೀಯ ಮಸ್ಜೀದ್ ಅಧ್ಯಕ್ಷರಾದ ಸೈಯದ್ ನಾಸಿರುದ್ದೀನ್ ಖಾದ್ರಿ ಇವರನ್ನು ರಾಜ್ಯ ಸರ್ಕಾರವು ನೇಮಿಸಿ ಆದೇಶ ಹೊರಡಿಸಿದ್ದು, ಸೈಯದ್ ನಾಸಿರುದ್ದೀನ್ ಖಾದ್ರಿರವರು ಸರ್ಕಾರದ ಆದೇಶ ಪತ್ರವನ್ನು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರಿಗೆ ಸಲ್ಲಿಸಿ ಜಿಲ್ಲಾ ವಕ್ಫ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡರು.  ಜಿಲ್ಲಾ ವಕ್ಫ ಅಧಿಕಾರಿ ಮಕ್ಬುಲ್‌ಪಾಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಹೂ ಗುಚ್ಚ ನೀಡಿ ಜಿಲ್ಲಾ ವಕ್ಫ ಬೋರ್ಡ್ ನೂತನ ಅಧ್ಯಕ್ಷರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು.
(ಫೋಟೋ ಕಳುಹಿಸಿದೆ)
======

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಬೆಸ್ತ, ಕೋಳಿ, ಕಬ್ಬಲಿಗ, ಮೊಗವೀರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ;
  ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆ ಅನುಸಾರ ಗರಿಷ್ಠ ರೂ.2,00,000/-ಗಳ ವರೆಗೆ ಆರ್ಥಿಕ ನೆರವು.  ಈ ಮೊತ್ತದಲ್ಲಿ ಶೇ.30 ರಿಂದ 15ರವರೆಗೆ ಸಹಾಯಧನ ಉಳಿಕೆ ಮೊತ್ತ ಶೇ.4ರ ಬಡ್ಡಿದರದಲ್ಲಿ ಸಾಲ.
ಅರಿವು ಶೈಕ್ಷಣಿಕ ಸಾಲ ಯೋಜನೆ;
  ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಕೋರ್ಸ್ನ ವಾಸ್ತವಿಕ ವೆಚ್ಚ ಅಥವಾ ವಾರ್ಷಿಕ ಗರಿಷ್ಠ ರೂ.1.00 ಲಕ್ಷಗಳಂತೆ ಶೇ.2ರ ಬಡ್ಡಿದರದಲ್ಲಿ ಸಾಲ.  ವಿದ್ಯಾರ್ಥಿಗಳು ಸಿ.ಇ.ಟಿ. ಮೂಲಕ ಅಥವಾ ಮೆರಿಟ್ ಆಧಾರದ ಮೇಲೆ ಸೀಟ್ ಪಡೆದು ಬಿ.ಇ., ಎಂ.ಬಿ.ಬಿ.ಎಸ್., ಬಿ.ಯೂ.ಎಂ.ಎಸ್., ಬಿ.ಡಿ.ಎಸ್. ಬಿ.ಎ.ಎಂ.ಎಸ್. ಬಿ.ಎಚ್.ಎಂ.ಎಸ್. ಎಂ.ಬಿ.ಎ. ಎಂ.ಟೆಕ್. ಎಂ.ಇ., ಎಂ.ಡಿ., ಪಿಹೆಚ್.ಡಿ. ಬಿ.ಸಿ.ಎ./ಎಂ.ಸಿ.ಎ ಎಂ.ಎಸ್.ಆಗ್ರ‍್ರಿಕಲ್ಚರ್ ಬಿ.ಎಸ್‌ಸಿ. ನರ್ಸಿಂಗ್, ಬಿ.ಫಾರಂ/ ಎಂ.ಫಾರA ಬಿ.ಎಸ್‌ಸಿ. ಪ್ಯಾರಾ ಮೆಡಿಕಲ್ ಬಿ.ಎಸ್‌ಸಿ. ಬಯೋ ಟೆಕ್ನಾಲಜಿ ಬಿ.ಟೆಕ್ ಬಿ.ಪಿ.ಟಿ. ಬಿ.ವಿ.ಎಸ್.ಸಿ/ ಎಂ.ವಿ.ಎಸ್.ಸಿ. ಬಿ.ಎನ್.ಎಂ. ಬಿ.ಹೆಚ್.ಎಮ್. ಎಂ.ಡಿ.ಎಸ್. ಎಂ.ಎಸ್.ಡಬ್ಲೂö್ಯ ಎಲ್.ಎಲ್.ಎಂ. ಎಂ.ಎಫ್.ಎ. ಎಂ.ಎಸ್‌ಸಿ. ಬಯೋ ಟೆಕ್ನಾಲಜಿ ಮತ್ತು ಎಂ.ಎಸ್‌ಸಿ. ಎಜಿ ಎಂ.ಕಾA ಎಂ.ಎಸ್ಸಿ.  ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ;
  ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್ಡಾಕ್ರö್ಟಲ್, ಪಿಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ಶೇ.4ರ ಬಡ್ಡಿದರದಲ್ಲಿ ವಾರ್ಷಿಕ ರೂ.5.00ಲಕ್ಷಗಳಂತೆ, 03 ವರ್ಷಗಳ ಕೋರ್ಸ್ನ ಅವಧಿಗೆ,  ಗರಿಷ್ಠ ರೂ.15.00ಲಕ್ಷಗಳ ಸಾಲ ಸೌಲಭ್ಯ.  ಈ ಸಾಲದ ಭದ್ರತೆಗೆ ಸ್ಥಿರಾಸ್ತಿಯನ್ನು ಆಧಾರ ಮಾಡಬೇಕು.  ವಿದ್ಯಾರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು.  ವಾರ್ಷಿಕ ವರಮಾನ ರೂ.3.50ಲಕ್ಷಗಳನ್ನು ಮೀರಿರಬಾರದು.
ಗಂಗಾ-ಕಲ್ಯಾಣ ನೀರಾವರಿ ಯೋಜನೆ;
  ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‌ಸೆಟ್, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಘಟಕ ವೆಚ್ಚ ರೂ.2.50ಲಕ್ಷಗಳಲ್ಲಿ ರೂ.2.00ಲಕ್ಷಗಳ ಸಹಾಯಧನ ಹಾಗೂ ರೂ.50,000/-ಗಳ ಶೇ.4ರ ಬಡ್ಡಿದರದಲ್ಲಿ ಸಾಲ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ||, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.4.00ಲಕ್ಷಗಳು. ಈ ಮೊತ್ತದಲ್ಲಿ ರೂ.3.50 ಲಕ್ಷ ಸಹಾಯಧನ ಹಾಗೂ ರೂ.50,000/- ಶೇ.4ರ ಬಡ್ಡಿದರದಲ್ಲಿ ಸಾಲ. ಘಟಕವೆಚ್ಚದಲ್ಲಿ ವಿದ್ಯುದ್ದೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ ರೂ.50,000/-ಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು.  ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿಗಳ ಮಂಜೂರು.
ಅರ್ಜಿ ಸಲ್ಲಿಸಲು ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1,ಕ್ಕೆ ಸೇರಿದ ಕ್ರಮ ಸಂಖ್ಯೆ:6(ಎ) ಯಿಂದ 6(ಎಕೆ)ವರೆಗಿನ ಬೆಸ್ತ, ಅಂಬಿಗ/ ಅಂಬಿ, ಬರ‍್ಕಿ/ ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ ಗುಂಡೆ ಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ ಕಬ್ಬೇರ್, ಕಬ್ಬಲಿಗ, ಕಬ್ಬಿಲಿ, ಕಹರ್, ಖಾರ್ವಿ/ ಕೊಂಕಣಖಾರ್ವಿ, ಕೋಳಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮೊಗವೀರ, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, (ಎಕೆ)ವಾಗಿ ಜಾತಿಗೆ ಸೇರಿದವರಾಗಿರಬೇಕು.  ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.  ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್/ ಚುನವಣಾ ಗುರುತಿನ ಚೀಟಿ/ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು.  ಅರ್ಜಿದಾರರು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟಿçÃಕೃತ/ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರಬೇಕು.   ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ನಿಗದಿತ ಅರ್ಜಿ ನಮೂನೆಗಳನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅರ್ಜಿ ಪಡೆಯಲು ಜುಲೈ. 03 ರೊಳಗಾಗಿ ಪಡೆದುಕೊಳ್ಳಬೇಕು.  ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಅಂಬಿಗರ ಚೌಡಯ್ಯ ಸಮುದಾಯಗಳ ಫಲಾಪೇಕ್ಷಿಗಳು, ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಉಚಿತವಾಗಿ ಅಥವಾ ನಿಗಮದ ವೆಬ್ ಸೈಟ್ hಣಣಠಿ://10.10.29.73:81/ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ/ಠಿubiಛಿ/ ಇಲ್ಲಿ ಪಡೆಯ ಬಹುದಾಗಿರುತ್ತದೆ.  ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ದಿನಾಂಕ:12/07/2019 ರೊಳಗೆ ಸಲ್ಲಿಸುವುದು.  ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ


ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನದ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ;
ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆ ಅನುಸಾರ ಗರಿಷ್ಠ ರೂ.2,00,000/-ಗಳ ವರೆಗೆ ಆರ್ಥಿಕ ನೆರವು.  ಈ ಮೊತ್ತದಲ್ಲಿ ಶೇ.30 ರಿಂದ 15ರವರೆಗೆ ಸಹಾಯಧನ ಉಳಿಕೆ ಮೊತ್ತ ಶೇ.4ರ ಬಡ್ಡಿದರದಲ್ಲಿ ಸಾಲ.
ಅರಿವು ಶೈಕ್ಷಣಿಕ ಸಾಲ ಯೋಜನೆ;
  ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಕೋರ್ಸ್ನ ವಾಸ್ತವಿಕ ವೆಚ್ಚ ಅಥವಾ ವಾರ್ಷಿಕ ಗರಿಷ್ಠ ರೂ.1.00 ಲಕ್ಷಗಳಂತೆ ಶೇ.2ರ ಬಡ್ಡಿದರದಲ್ಲಿ ಸಾಲ.  ವಿದ್ಯಾರ್ಥಿಗಳು ಸಿ.ಇ.ಟಿ. ಮೂಲಕ ಅಥವಾ ಮೆರಿಟ್ ಆಧಾರದ ಮೇಲೆ ಸೀಟ್ ಪಡೆದು ಬಿ.ಇ., ಎಂ.ಬಿ.ಬಿ.ಎಸ್., ಬಿ.ಯೂ.ಎಂ.ಎಸ್., ಬಿ.ಡಿ.ಎಸ್., ಬಿ.ಎ.ಎಂ.ಎಸ್., ಬಿ.ಎಚ್.ಎಂ.ಎಸ್., ಎಂ.ಬಿ.ಎ., ಎಂ.ಟೆಕ್., ಎಂ.ಇ., ಎಂ.ಡಿ., ಪಿಹೆಚ್.ಡಿ., ಬಿ.ಸಿ.ಎ./ಎಂ.ಸಿ.ಎ., ಎಂ.ಎಸ್. ಆಗ್ರ‍್ರಿಕಲ್ಚರ್,  ಬಿ.ಎಸ್‌ಸಿ. ನರ್ಸಿಂಗ್, ಬಿ.ಫಾರಂ/ ಎಂ.ಫಾರA, ಬಿ.ಎಸ್‌ಸಿ. ಪ್ಯಾರಾ ಮೆಡಿಕಲ್, ಬಿ.ಎಸ್‌ಸಿ (ಬಯೋ ಟೆಕ್ನಾಲಜಿ), ಬಿ.ಟೆಕ್., ಬಿ.ಪಿ.ಟಿ., ಬಿ.ವಿ.ಎಸ್.ಸಿ/ ಎಂ.ವಿ.ಎಸ್.ಸಿ., ಬಿ.ಎನ್.ಎಂ., ಬಿ.ಹೆಚ್.ಎಮ್., ಎಂ.ಡಿ.ಎಸ್., ಎಂ.ಎಸ್.ಡಬ್ಲೂö್ಯ., ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್‌ಸಿ., ಬಯೋ ಟೆಕ್ನಾಲಜಿ ಮತ್ತು ಎಂ.ಎಸ್‌ಸಿ. ಎಜಿ, ಎಂ.ಕಾA. ಹಾಗೂ ಎಂ.ಎಸ್ಸಿ. ಈ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು ಹಾಗೂ ಕುಟುಂಬದ ವಾರ್ಷಿಕ ವರಮಾನ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು. 
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ;
  ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್ಡಾಕ್ರö್ಟಲ್, ಪಿಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಶೇ.4ರ ಬಡ್ಡಿದರದಲ್ಲಿ ವಾರ್ಷಿಕ ರೂ.5.00ಲಕ್ಷಗಳಂತೆ, 03 ವರ್ಷಗಳ ಕೋರ್ಸ್ನ ಅವಧಿಗೆ,  ಗರಿಷ್ಠ ರೂ.15.00ಲಕ್ಷಗಳ ಸಾಲ ಸೌಲಭ್ಯ.  ಈ ಸಾಲದ ಭದ್ರತೆಗೆ ಸ್ಥಿರಾಸ್ತಿಯನ್ನು ಆಧಾರ ಮಾಡಬೇಕು.  ವಿದ್ಯಾರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.3.50ಲಕ್ಷಗಳನ್ನು ಮೀರಿರಬಾರದು.
ಗಂಗಾ-ಕಲ್ಯಾಣ ನೀರಾವರಿ ಯೋಜನೆ;
  ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‌ಸೆಟ್, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಘಟಕ ವೆಚ್ಚ ರೂ.2.50ಲಕ್ಷಗಳಲ್ಲಿ ರೂ.2.00ಲಕ್ಷಗಳ ಸಹಾಯಧನ ಹಾಗೂ ರೂ.50,000/-ಗಳ ಶೇ.4ರ ಬಡ್ಡಿದರದಲ್ಲಿ ಸಾಲ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ||, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.4.00ಲಕ್ಷಗಳು. ಈ ಮೊತ್ತದಲ್ಲಿ ರೂ.3.50 ಲಕ್ಷ ಸಹಾಯಧನ ಹಾಗೂ ರೂ.50,000/- ಶೇ.4ರ ಬಡ್ಡಿದರದಲ್ಲಿ ಸಾಲ. ಘಟಕವೆಚ್ಚದಲ್ಲಿ ವಿದ್ಯುದ್ದೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ ರೂ.50,000/-ಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು.  ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿಗಳ ಮಂಜೂರು.
ಅರ್ಜಿ ಸಲ್ಲಿಸಲು ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1,ಕ್ಕೆ ಸೇರಿದ ಕ್ರಮ ಸಂಖ್ಯೆ:53(ಚಿ) ಯಿಂದ 53(v)ವರೆಗಿನ ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲುಕುಟಿಗ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ಮೇಲುಸಕ್ಕರೆ, ನಾಮದ ಉಪ್ಪಾರ, ಪಡಿತ್/ ಪಡ್ತಿ, ಪಡಿತಿ, ವಾಡಿ, ಸಗರ, ಸುಣ್ಣಗಾರ, ಸುಣ್ಣ ಉಪ್ಪಾರ, ಉಪ್ಪಳಿಗ, ಉಪ್ಪಳಿಗಶೆಟ್ಟಿ, ಉಪ್ಪಳಿಯನ್, ಉಪ್ಪೇರ, ಯಕಲಾರ, ಎಕ್ಕಲಿ ಜಾತಿಗೆ ಸೇರಿದವರಾಗಿರಬೇಕು.  ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.  18 ರಿಂದ 55 ವರ್ಷಗಳ ವಯೋ ಮಿತಿಯಲ್ಲಿರಬೇಕು.  ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್/ ಚುನವಣಾ ಗುರುತಿನ ಚೀಟಿ/ ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿದಾರರು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟಿçÃಕೃತ/ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕೊಪ್ಪಳ ಇಲ್ಲಿಂದ ಜುಲೈ. 03 ರೊಳಗಾಗಿ ಪಡೆದುಕೊಳ್ಳಬೇಕು.  ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.  ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಉಚಿತವಾಗಿ ಅಥವಾ ನಿಗಮದ ವೆಬ್ ಸೈಟ್ hಣಣಠಿ://10.10.29.73:81/uಠಿಠಿಚಿಡಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ/ಠಿubಟiಛಿ/ ನಲ್ಲಿ ಸಂಬAಧಿಸಿದ ಯೋಜನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ. 12 ರೊಳಗೆ ಸಲ್ಲಿಸಬೇಕು.  ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.  

ಕುರಿಸಾಕಾಣಿಕೆ ತರಬೇತಿ : ಅರ್ಜಿ ಆಹ್ವಾನ

ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಆಸಕ್ತರಿಗೆ 10 ದಿನಗಳ ಉಚಿತ “ಕುರಿಸಾಕಾಣಿಕೆ” ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.  ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು.  ಕೊಪ್ಪಳ ಜಿಲ್ಲೆಯವರಾಗಿರಬೇಕು.  ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.  ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.  ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೋನೆಯ ಜೂನ್ 30 ಆಗಿದ್ದು, ಜುಲೈ 01 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದುಜುಲೈ 02 ರಿಂದ ತರಬೇತಿಗಳು ಪ್ರಾರಂಭಗೊಳ್ಳುವವು.  ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. 
ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂರವಾಣಿ ಸಂಖ್ಯೆ 08539-231038, ಇಲ್ಲಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯೂಟಿ ಪಾರ್ಲರ್ ತರಬೇತಿ : ಅರ್ಜಿ ಆಹ್ವಾನ

ಬ್ಯೂಟಿ ಪಾರ್ಲರ್ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಆಸಕ್ತರಿಗೆ 30 ದಿನಗಳ ಉಚಿತ “ಬ್ಯೂಟಿಪಾರ್ಲರ್” ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.  ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು.  ಕೊಪ್ಪಳ ಜಿಲ್ಲೆಯವರಾಗಿರಬೇಕು.  ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.  ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.  ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೋನೆಯ ಜೂನ್ 30 ಆಗಿದ್ದು, ಜುಲೈ 01 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದು.  ಜುಲೈ 02 ರಿಂದ ತರಬೇತಿಗಳು ಪ್ರಾರಂಭಗೊಳ್ಳುವವು.  ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. 
ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂರವಾಣಿ ಸಂಖ್ಯೆ 08539-231038, ಇಲ್ಲಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಚ್ಛ ಭಾರತ ಸಮ್ಮರ ಇಂರ‍್ನಷಿಪ್‌ಗೆ : ಅರ್ಜಿ ಆಹ್ವಾನ

ಸ್ವಚ್ಛ ಭಾರತ ಸಮ್ಮರ ಇಂರ‍್ನಷಿಪ್‌ಗೆ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ನೆಹರು ಯುವ ಕೇಂದ್ರದ ವತಿಯಿಂದ ಸ್ವಚ್ಛ ಭಾರತ ಸಮ್ಮರ ಇಂರ‍್ನಷಿಪ್ ಯುವಜನರಿಂದ 50 ತಾಸು ಸ್ವಚ್ಛತಾ ಕಾರ್ಯಕ್ರಮಕ್ಕೆ ಅರ್ಹ ಯುವ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆಗೊAಡ ನೊಂದಾಯಿತ ಯುವ ಸಂಘಗಳು ಹಾಗೂ  ಮಹಿಳಾ ಸಂಘಗಳಿAದ  ಸ್ವಚ್ಛ ಭಾರತ ಸಮ್ಮರ ಇಂರ‍್ನಷಿಪ್ 50 ತಾಸು ಸ್ವಚ್ಛತಾ ಕಾರ್ಯಕ್ರಮಕ್ಕೆ ಯುವಜನರಿಂದ ಅರ್ಜಿಯನ್ನು ಆಹ್ವಾನಿಸಿದ್ದು. ಆನಲೈನ್ ಮೂಲಕ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಬಹುದಾಗಿದೆ.  ವೈಯಕ್ತಿಕ ಅಥವಾ ಗರಿಷ್ಠ 10 ಯುವಜನರ ತಂಡದೊAದಿಗೆ ಒಂದು ಯುವ ಸಂಘದಿAದ ಹೆಸರುಗಳನ್ನು ನೊಂದಾಯಿಸಿಕೊಳ್ಳಲು hಣಣಠಿ://sbsi.mಥಿgov.iಟಿ ಈ ವೆಬ್‌ಸೈಟನಲ್ಲಿ ತಮ್ಮ ಹೆಸರು ಎನ್‌ರೊಲ್ ಮಾಡುವುದು ಅಥವಾ ನೇರವಾಗಿ ಖುದ್ದಾಗಿ ಅರ್ಜಿ ನಮೂನೆ ಭರ್ತಿಮಾಡಿ ಕಛೇರಿಗೆ ಸಲ್ಲಿಸುವುದು ನಂತರ ಜೂ. 31 ರ ವರೆಗೆ 50 ತಾಸುಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.  ಸ್ವಂತ ಗ್ರಾಮ ಅಥವಾ ಸುತ್ತಮುತ್ತಲಿನ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಕೈಗೊಂಡಿರು ಸೂಕ್ತವಾದ ದಾಖಲೆಗಳೊಂದಿಗೆ ಅರ್ಜಿಯನ್ನು ಕೊಪ್ಪಳ ನೆಹರು ಯುವ ಕೇಂದ್ರದ ವೆಬ್‌ಸೈಟ hಣಣಠಿ://sbsi.mಥಿgov.iಟಿ ನಲ್ಲಿ ಸಲ್ಲಿಸಬೇಕು.  ಒಳ್ಳೆಯ ಕೆಲಸ ಮಾಡಿದ ಯುವ ಸಂಘಗಳಿಗೆ ಜಿಲ್ಲಾ, ರಾಜ್ಯ, ರಾಷ್ಟç ಮಟ್ಟದಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟಕ್ಕೆ ಪ್ರಥಮ ಬಹುಮಾನ 30,000, ದ್ವಿತೀಯ ಬಹುಮಾನ 20,000 ತೃತೀಯ ಬಹುಮಾನ 10000 ರೂ. ರಾಜ್ಯ ಮಟ್ಟಕ್ಕೆ ಪ್ರಥಮ ಬಹುಮಾನ,  50000 ರೂ. ದ್ವಿತೀಯ ಬಹುಮಾನ 30000 ರೂ, ತೃತೀಯ ಬಹುಮಾನ 20000 ರೂ, ರಾಷ್ಟç ಮಟ್ಟಕ್ಕೆ ಪ್ರಥಮ ಬಹುಮಾನ 2 ಲಕ್ಷ ರೂ. ದ್ವಿತೀಯ ಬಹುಮಾನ 1 ಲಕ್ಷ, ತೃತೀಯ ಬಹುಮಾನ 50000 ರಂತೆ ನೀಡಲಾಗುತ್ತದೆ. 
ಕಾರ್ಯಕ್ರಮಗಳು;
  ಪ್ಲಾಸ್ಟಿಕ್, ಕಸ ಸಂಗ್ರಹ ಮತ್ತು ನಿರ್ವಹಣೆ, ಆರೊಗ್ಯಕರ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನುಕ್ಕಡ, ಪಾಸ್ಟಿಕ್, ಇತರೆ ಕಸ  ಸಂಗ್ರಹ , ನಿರ್ವಹಣೆ ಕುರಿತು ನಾಟಕ, ಬೀದಿ ನಾಟಕ ಕಾರ್ಯಕ್ರಮ,ಸಂಗೀತ ಮತ್ತು ಸಂಸ್ಕೃತಿಕ ಕಾರ್ಯಕ್ರಮ, ಗ್ರಾಮೀಣ ಅಥವಾ ಶಾಲಾ ಮಕ್ಕಳಿಂದ ಜಾಥಾ-ಆರೋಗ್ಯಕ್ಕೆ ಸಂಬAದಿಸಿದAತೆ ಮತ್ತು ಸ್ವಚ್ಛತೆಗೆ ಸಂಬAದಿಸಿದAತೆ. ಮನೆಮನೆಗೆ ತೆರಳಿ ಪ್ಲಾಸ್ಟಿಕ್,  ಕಸ ನಿರ್ವಹಣೆ ಕುರಿತು ಅರಿವು. ಪ್ಲಾಸ್ಟಿಕ್ , ಕಸ ಸಂಗ್ರಹ ನಿರ್ವಹಣೆ ಸಂಬAದಿಸಿದAತೆ ಗೋಡೆಬರಹಗಳನ್ನು ಬರೆಯುವುದು. ಪ್ಲಾಸ್ಟಿಕ್, ಕಸ ಸಂಬAದಿಸಿದAತೆ ಚಲನಚಿತ್ರಗಳನ್ನು ಪ್ರದರ್ಶಿಸುವುದು. ಪ್ಲಾಸ್ಟಿಕ್, ಕಸ ಸಂಬAದಿಸಿದAತಹ ಸಾಮಗ್ರಿಗಳನ್ನು ಉಚಿತವಾಗಿ ಣiಟಿಥಿuಡಿಟ.ಛಿom/sbmieಛಿ  ಇದರ ಮೂಲಕ ಪಡೆಯುವುದು, ಘನ ತ್ಯಾಜ್ಯ ವಸ್ತುಗಳ ಚಟುವಟಿಕೆಗಳಾದ ಅರಿವು ಮೂಡಿಸುವುದು, ಘನತ್ಯಾಜ್ಯವಸ್ತುಗಳ ಸಂಗ್ರಹ ಮತ್ತು ವಿಲೇವಾರಿ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುಲಾಗಿದೆ. 
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ನೆಹರು ಯುವ ಕೇಂದ್ರ ನೊಡಲ ಅಧಿಕಾರಿ ರಾಮ ಕೃಷ್ಣ ಆಶ್ರಮದ ಹತ್ತಿರ ಬನ್ನಿಕಟ್ಟಿ ಗದಗ ರಸ್ತೆ, ದೂ-08539,230116 ಸಂಪರ್ಕಿಸಿ ಎಂದು ಕೊಪ್ಪಳ ನೆಹರು ಯುವ ಕೇಂದ್ರ ಜಿಲ್ಲಾ ಯುವ ಸಮನ್ವಯಾಧಿಕಾರಿ ಡಿ.ದಯಾನಂದ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಾಗಿ ಸಲ್ಲಿಸಲ್ಪಡುವ ಕೃತಿಯು ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.  ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯ ಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬAಧಿಸಿದAತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬAಧಿಸಿದAತೆ ಹಾಗೂ ರಾಷ್ಟಿçÃಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೇ ರಾಷ್ಟಿçÃಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು. 
ಅರ್ಜಿದಾರರು 18 ರಿಂದ 35 ವರ್ಷದವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢಿಕೃತ ಎಸ್‌ಎಸ್‌ಎಲ್‌ಸಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.  ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಯನ್ನು ಅಥವಾ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಅರ್ಜಿಯನ್ನು ಜುಲೈ 06 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಇವರಿಗೆ ಸಲ್ಲಿಸಬಹುದು. 
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂ. ಸಂ: 080-22484516/ 22017704 ಅಥವಾ ವೆಬ್‌ಸೈಟ್  ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ/ ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ

ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ/ ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ

ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರೌಢ ಶಾಲೆಗಳಲ್ಲಿ “ಅಚ್ಚು ಮೆಚ್ಚಿನ ಮುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸಲು ಶಾಲಾ ಮುಖ್ಯಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢ ಶಾಲೆಗಳಲ್ಲಿ “ಅಚ್ಚು ಮೆಚ್ಚಿನ ಮುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ.  ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ.  ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು ರೂ. 5,000 ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಿದೆ.  ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಬೇಕು.  ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ ಬೆಂಗಳೂರು-560 002, ದೂರವಾಣಿ ಸಂಖ್ಯೆ 080-22484516/ 22107704, ಇವರಿಗೆ ಜುಲೈ 10 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ 28 ರಂದು ಜಿ.ಪಂ. ಮಾಸಿಕ ಕೆಡಿಪಿ ಸಭೆ


ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿ ಮಾಸಿಕ ಕೆ.ಡಿ.ಪಿ. (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ಜೂ. 28 ರಂದು ಬೆಳಿಗ್ಗೆ 11 ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ವಿಶ್ವನಾಥರೆಡ್ಡಿ ಅವರು ವಹಿಸುವರು.  ಮೇ ಅಂತ್ಯಕ್ಕೆ ಸಾಧಿಸಿದ ಪ್ರಗತಿಯ ಮಾಹಿತಿಯೊಂದಿಗೆ ಸಂಬAಧಪಟ್ಟ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.