ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನದ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ;
ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆ ಅನುಸಾರ ಗರಿಷ್ಠ ರೂ.2,00,000/-ಗಳ ವರೆಗೆ ಆರ್ಥಿಕ ನೆರವು. ಈ ಮೊತ್ತದಲ್ಲಿ ಶೇ.30 ರಿಂದ 15ರವರೆಗೆ ಸಹಾಯಧನ ಉಳಿಕೆ ಮೊತ್ತ ಶೇ.4ರ ಬಡ್ಡಿದರದಲ್ಲಿ ಸಾಲ.
ಅರಿವು ಶೈಕ್ಷಣಿಕ ಸಾಲ ಯೋಜನೆ;
ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಕೋರ್ಸ್ನ ವಾಸ್ತವಿಕ ವೆಚ್ಚ ಅಥವಾ ವಾರ್ಷಿಕ ಗರಿಷ್ಠ ರೂ.1.00 ಲಕ್ಷಗಳಂತೆ ಶೇ.2ರ ಬಡ್ಡಿದರದಲ್ಲಿ ಸಾಲ. ವಿದ್ಯಾರ್ಥಿಗಳು ಸಿ.ಇ.ಟಿ. ಮೂಲಕ ಅಥವಾ ಮೆರಿಟ್ ಆಧಾರದ ಮೇಲೆ ಸೀಟ್ ಪಡೆದು ಬಿ.ಇ., ಎಂ.ಬಿ.ಬಿ.ಎಸ್., ಬಿ.ಯೂ.ಎಂ.ಎಸ್., ಬಿ.ಡಿ.ಎಸ್., ಬಿ.ಎ.ಎಂ.ಎಸ್., ಬಿ.ಎಚ್.ಎಂ.ಎಸ್., ಎಂ.ಬಿ.ಎ., ಎಂ.ಟೆಕ್., ಎಂ.ಇ., ಎಂ.ಡಿ., ಪಿಹೆಚ್.ಡಿ., ಬಿ.ಸಿ.ಎ./ಎಂ.ಸಿ.ಎ., ಎಂ.ಎಸ್. ಆಗ್ರ್ರಿಕಲ್ಚರ್, ಬಿ.ಎಸ್ಸಿ. ನರ್ಸಿಂಗ್, ಬಿ.ಫಾರಂ/ ಎಂ.ಫಾರA, ಬಿ.ಎಸ್ಸಿ. ಪ್ಯಾರಾ ಮೆಡಿಕಲ್, ಬಿ.ಎಸ್ಸಿ (ಬಯೋ ಟೆಕ್ನಾಲಜಿ), ಬಿ.ಟೆಕ್., ಬಿ.ಪಿ.ಟಿ., ಬಿ.ವಿ.ಎಸ್.ಸಿ/ ಎಂ.ವಿ.ಎಸ್.ಸಿ., ಬಿ.ಎನ್.ಎಂ., ಬಿ.ಹೆಚ್.ಎಮ್., ಎಂ.ಡಿ.ಎಸ್., ಎಂ.ಎಸ್.ಡಬ್ಲೂö್ಯ., ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್ಸಿ., ಬಯೋ ಟೆಕ್ನಾಲಜಿ ಮತ್ತು ಎಂ.ಎಸ್ಸಿ. ಎಜಿ, ಎಂ.ಕಾA. ಹಾಗೂ ಎಂ.ಎಸ್ಸಿ. ಈ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು ಹಾಗೂ ಕುಟುಂಬದ ವಾರ್ಷಿಕ ವರಮಾನ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ;
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್ಡಾಕ್ರö್ಟಲ್, ಪಿಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಶೇ.4ರ ಬಡ್ಡಿದರದಲ್ಲಿ ವಾರ್ಷಿಕ ರೂ.5.00ಲಕ್ಷಗಳಂತೆ, 03 ವರ್ಷಗಳ ಕೋರ್ಸ್ನ ಅವಧಿಗೆ, ಗರಿಷ್ಠ ರೂ.15.00ಲಕ್ಷಗಳ ಸಾಲ ಸೌಲಭ್ಯ. ಈ ಸಾಲದ ಭದ್ರತೆಗೆ ಸ್ಥಿರಾಸ್ತಿಯನ್ನು ಆಧಾರ ಮಾಡಬೇಕು. ವಿದ್ಯಾರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.3.50ಲಕ್ಷಗಳನ್ನು ಮೀರಿರಬಾರದು.
ಗಂಗಾ-ಕಲ್ಯಾಣ ನೀರಾವರಿ ಯೋಜನೆ;
ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್ಸೆಟ್, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಘಟಕ ವೆಚ್ಚ ರೂ.2.50ಲಕ್ಷಗಳಲ್ಲಿ ರೂ.2.00ಲಕ್ಷಗಳ ಸಹಾಯಧನ ಹಾಗೂ ರೂ.50,000/-ಗಳ ಶೇ.4ರ ಬಡ್ಡಿದರದಲ್ಲಿ ಸಾಲ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ||, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.4.00ಲಕ್ಷಗಳು. ಈ ಮೊತ್ತದಲ್ಲಿ ರೂ.3.50 ಲಕ್ಷ ಸಹಾಯಧನ ಹಾಗೂ ರೂ.50,000/- ಶೇ.4ರ ಬಡ್ಡಿದರದಲ್ಲಿ ಸಾಲ. ಘಟಕವೆಚ್ಚದಲ್ಲಿ ವಿದ್ಯುದ್ದೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ ರೂ.50,000/-ಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು. ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿಗಳ ಮಂಜೂರು.
ಅರ್ಜಿ ಸಲ್ಲಿಸಲು ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1,ಕ್ಕೆ ಸೇರಿದ ಕ್ರಮ ಸಂಖ್ಯೆ:53(ಚಿ) ಯಿಂದ 53(v)ವರೆಗಿನ ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲುಕುಟಿಗ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ಮೇಲುಸಕ್ಕರೆ, ನಾಮದ ಉಪ್ಪಾರ, ಪಡಿತ್/ ಪಡ್ತಿ, ಪಡಿತಿ, ವಾಡಿ, ಸಗರ, ಸುಣ್ಣಗಾರ, ಸುಣ್ಣ ಉಪ್ಪಾರ, ಉಪ್ಪಳಿಗ, ಉಪ್ಪಳಿಗಶೆಟ್ಟಿ, ಉಪ್ಪಳಿಯನ್, ಉಪ್ಪೇರ, ಯಕಲಾರ, ಎಕ್ಕಲಿ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. 18 ರಿಂದ 55 ವರ್ಷಗಳ ವಯೋ ಮಿತಿಯಲ್ಲಿರಬೇಕು. ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್/ ಚುನವಣಾ ಗುರುತಿನ ಚೀಟಿ/ ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿದಾರರು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟಿçÃಕೃತ/ ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾತೆ ಹೊಂದಿರಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕೊಪ್ಪಳ ಇಲ್ಲಿಂದ ಜುಲೈ. 03 ರೊಳಗಾಗಿ ಪಡೆದುಕೊಳ್ಳಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಉಚಿತವಾಗಿ ಅಥವಾ ನಿಗಮದ ವೆಬ್ ಸೈಟ್ hಣಣಠಿ://10.10.29.73:81/uಠಿಠಿಚಿಡಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ/ಠಿubಟiಛಿ/ ನಲ್ಲಿ ಸಂಬAಧಿಸಿದ ಯೋಜನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ. 12 ರೊಳಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.